• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲೂ ಹಿಂದೂಗಳ ಸಂಖ್ಯೆ ಹೆಚ್ಚಳ, ಮುಸ್ಲಿಮೇತರರ ಮತದಾರರಲ್ಲಿ ಹಿಂದೂಗಳೇ ಟಾಪ್!

TNN Correspondent Posted On May 28, 2018
0


0
Shares
  • Share On Facebook
  • Tweet It

ಹಿಂದೂಗಳು ಎಲ್ಲಿದ್ದರೂ, ಹೇಗಿದ್ದರೂ ಶಾಂತಿಪ್ರಿಯರು, ಧರ್ಮ ಸಹಿಷ್ಣುಗಳು ಎಂಬುದು ಇಡೀ ಜಗತ್ತಿಗೇ ಗೊತ್ತಿರುವ ವಿಚಾರ. ಆದರೆ ಮುಸ್ಲಿಂ ಮೂಲಭೂತವಾದದ ತವರು ಮನೆಯಂತಿರುವ ಪಾಕಿಸ್ತಾನದಲ್ಲಿ ಜೀವನ ಸಾಗಿಸಲು ಹಿಂದೂಗಳು ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಮುಸ್ಲಿಮರ ಕಿರುಕುಳಕ್ಕೆ ಈಡಾಗುತ್ತಿದ್ದಾರೆ.

ಹಾಗಂತ ಪಾಕಿಸ್ತಾನದಲ್ಲಿರುವ ಹಿಂದೂಗಳು ಹೇಡಿಗಳಂತೆ ಪಾಕಿಸ್ತನ ಬಿಟ್ಟು ಓಡಿಹೋಗಿಲ್ಲ. ಬದಲಾಗಿ ಪಾಕಿಸ್ತಾನದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಇಷ್ಟೇ ಆಗಿದ್ದರೆ ಸುದ್ದಿ ಬರೆಯುವ ಅವಶ್ಯವಿರಲಿಲ್ಲ. ಖುಷಿಯ ಸಂಗತಿ ಏನೆಂದರೆ ಇತ್ತೀಚೆಗೆ ಪಾಕಿಸ್ತಾನದಲ್ಲಿ ಹಿಂದೂಗಳ ಸಂಖ್ಯೆ ಜಾಸ್ತಿಯಾಗಿದೆ. ಮತದಾರರ ಸಂಖ್ಯೆ ಹೆಚ್ಚಾಗಿರುವಲ್ಲಿ, ಹಿಂದೂಗಳು ಜಾಸ್ತಿ ಇರುವುದೇ ಇದಕ್ಕೆ ಉತ್ತಮ ನಿದರ್ಶನವಾಗಿದೆ.

ಹೌದು, ಪಾಕಿಸ್ತಾನದಲ್ಲಿ ಜುಲೈ 25ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಬಾರಿ ಮುಸ್ಲಿಮೇತರ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹೀಗೆ ಜಾಸ್ತಿಯಾಗಿರುವ ಮುಸ್ಲಿಮೇತರ ಮತದಾರರಲ್ಲಿ ಹಿಂದೂಗಳೇ ಟಾಪ್ ಒನ್ ಸ್ಥಾನದಲ್ಲಿದ್ದು, ಪಾಕಿಸ್ತಾನದಲ್ಲೂ ಹಿಂದುತ್ವ ಪಸರಿಸುತ್ತದೆ ಎಂಬುದು ಇದರಿಂದ ಸಾಬೀತಾಗಿದೆ.

ಈ ಕುರಿತು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದ್ದು, 2013ರಲ್ಲಿ 2.77 ದಶಲಕ್ಷ ಇದ್ದ ಮುಸ್ಲಿಮೇತರರ ಸಂಖ್ಯೆ ಈ ಬಾರಿ 3.63 ದಶಲಕ್ಷಕ್ಕೆ ಏರಿಕೆಯಾಗಿದೆ. ಅಂದರೆ ಶೇ.30ರಷ್ಟು ಮುಸ್ಲಿಮೇತರರ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಈ ಮತದಾರರಲ್ಲಿ 1.77 ದಶಲಕ್ಷ ಮತದಾರರು ಹಿಂದೂಗಳೇ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳೇ ಇದ್ದಾರೆ. ಆದಾಗ್ಯೂ 2013ರ ಚುನಾವಣೆಯಲ್ಲಿ ಹಿಂದೂ ಮತದಾರರ ಸಂಖ್ಯೆ 1.40 ದಶಲಕ್ಷ ಇತ್ತು. ಕಳೆದ ಐದು ವರ್ಷದಲ್ಲಿ ಸುಮಾರು 37 ಸಾವಿರ ಹಿಂದೂ ಮತದಾರರು ನೋಂದಣಿಯಾಗಿದ್ದು ಸಂತಸದ ಸಂಗತಿಯಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search