• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲೂ ಹಿಂದೂಗಳ ಸಂಖ್ಯೆ ಹೆಚ್ಚಳ, ಮುಸ್ಲಿಮೇತರರ ಮತದಾರರಲ್ಲಿ ಹಿಂದೂಗಳೇ ಟಾಪ್!

TNN Correspondent Posted On May 28, 2018
0


0
Shares
  • Share On Facebook
  • Tweet It

ಹಿಂದೂಗಳು ಎಲ್ಲಿದ್ದರೂ, ಹೇಗಿದ್ದರೂ ಶಾಂತಿಪ್ರಿಯರು, ಧರ್ಮ ಸಹಿಷ್ಣುಗಳು ಎಂಬುದು ಇಡೀ ಜಗತ್ತಿಗೇ ಗೊತ್ತಿರುವ ವಿಚಾರ. ಆದರೆ ಮುಸ್ಲಿಂ ಮೂಲಭೂತವಾದದ ತವರು ಮನೆಯಂತಿರುವ ಪಾಕಿಸ್ತಾನದಲ್ಲಿ ಜೀವನ ಸಾಗಿಸಲು ಹಿಂದೂಗಳು ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಮುಸ್ಲಿಮರ ಕಿರುಕುಳಕ್ಕೆ ಈಡಾಗುತ್ತಿದ್ದಾರೆ.

ಹಾಗಂತ ಪಾಕಿಸ್ತಾನದಲ್ಲಿರುವ ಹಿಂದೂಗಳು ಹೇಡಿಗಳಂತೆ ಪಾಕಿಸ್ತನ ಬಿಟ್ಟು ಓಡಿಹೋಗಿಲ್ಲ. ಬದಲಾಗಿ ಪಾಕಿಸ್ತಾನದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಇಷ್ಟೇ ಆಗಿದ್ದರೆ ಸುದ್ದಿ ಬರೆಯುವ ಅವಶ್ಯವಿರಲಿಲ್ಲ. ಖುಷಿಯ ಸಂಗತಿ ಏನೆಂದರೆ ಇತ್ತೀಚೆಗೆ ಪಾಕಿಸ್ತಾನದಲ್ಲಿ ಹಿಂದೂಗಳ ಸಂಖ್ಯೆ ಜಾಸ್ತಿಯಾಗಿದೆ. ಮತದಾರರ ಸಂಖ್ಯೆ ಹೆಚ್ಚಾಗಿರುವಲ್ಲಿ, ಹಿಂದೂಗಳು ಜಾಸ್ತಿ ಇರುವುದೇ ಇದಕ್ಕೆ ಉತ್ತಮ ನಿದರ್ಶನವಾಗಿದೆ.

ಹೌದು, ಪಾಕಿಸ್ತಾನದಲ್ಲಿ ಜುಲೈ 25ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ಬಾರಿ ಮುಸ್ಲಿಮೇತರ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹೀಗೆ ಜಾಸ್ತಿಯಾಗಿರುವ ಮುಸ್ಲಿಮೇತರ ಮತದಾರರಲ್ಲಿ ಹಿಂದೂಗಳೇ ಟಾಪ್ ಒನ್ ಸ್ಥಾನದಲ್ಲಿದ್ದು, ಪಾಕಿಸ್ತಾನದಲ್ಲೂ ಹಿಂದುತ್ವ ಪಸರಿಸುತ್ತದೆ ಎಂಬುದು ಇದರಿಂದ ಸಾಬೀತಾಗಿದೆ.

ಈ ಕುರಿತು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದ್ದು, 2013ರಲ್ಲಿ 2.77 ದಶಲಕ್ಷ ಇದ್ದ ಮುಸ್ಲಿಮೇತರರ ಸಂಖ್ಯೆ ಈ ಬಾರಿ 3.63 ದಶಲಕ್ಷಕ್ಕೆ ಏರಿಕೆಯಾಗಿದೆ. ಅಂದರೆ ಶೇ.30ರಷ್ಟು ಮುಸ್ಲಿಮೇತರರ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಈ ಮತದಾರರಲ್ಲಿ 1.77 ದಶಲಕ್ಷ ಮತದಾರರು ಹಿಂದೂಗಳೇ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳೇ ಇದ್ದಾರೆ. ಆದಾಗ್ಯೂ 2013ರ ಚುನಾವಣೆಯಲ್ಲಿ ಹಿಂದೂ ಮತದಾರರ ಸಂಖ್ಯೆ 1.40 ದಶಲಕ್ಷ ಇತ್ತು. ಕಳೆದ ಐದು ವರ್ಷದಲ್ಲಿ ಸುಮಾರು 37 ಸಾವಿರ ಹಿಂದೂ ಮತದಾರರು ನೋಂದಣಿಯಾಗಿದ್ದು ಸಂತಸದ ಸಂಗತಿಯಾಗಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search