• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮುಡಿಗೆ ಎನ್ ಎಸ್ ಜಿ ಸದಸ್ಯತ್ವ ಕಿರೀಟ ತೊಡಿಸಲು ಮೋದಿ ವೇದಿಕೆ ಸಿದ್ಧಪಡಿಸಿದ್ದಾರೆ ನೋಡಿ!

TNN Correspondent Posted On May 28, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಬಳಿಕ ದೇಶದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಭಾರತ 2016ರಲ್ಲಿ ಮಿಸೈಲ್ ಟೆಕ್ನಾಲಜಿ ಕಂಟ್ರೋಲ್ ರೆಜಿಮೆ ಗುಂಪಿಗೆ ಸೇರಿತು. 2017ರಲ್ಲಿ ವಾಸೆನಾರ್ ಅರೇಂಜ್ ಮೆಂಟ್ ಗುಂಪಿಗೆ ಸೇರ್ಪಡೆಯಾಯಿತು, ಪ್ರಸಕ್ತ ವರ್ಷದಲ್ಲಿ ಆಸ್ಟ್ರೇಲಿಯಾ ಗ್ರೂಪ್ ಗೆ ಸೇರುವ ಮೂಲಕ ವಿಶ್ವದಲ್ಲಿ ಭಾರತ ಬಲಿಷ್ಠ ದೇಶವಾಗುವತ್ತ ದಾಪುಗಾಲು ಇಟ್ಟಿತು.

ಆದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಾಧಾನವಿಲ್ಲ. ಮೋದಿ ಪ್ರಧಾನಿಯಾದಾಗಿನಿಂದಲೂ ಒಂದೇ ಕನಸು. ಹೇಗಾದರೂ ಮಾಡಿ ಭಾರತವನ್ನು ಅಣು ಸರಬರಾಜು ತಂಡಕ್ಕೆ (ಎನ್ಎಸ್ ಜಿ) ಸೇರಿಸಬೇಕು. ಕಳೆದ ವರ್ಷ ಬೀಜಿಂಗ್ ನಲ್ಲಿ ಭಾರತ ಇನ್ನೇನು ಗ್ರೂಪ್ ಗೆ ಸೇರಿತು ಎನ್ನುವಷ್ಟರಲ್ಲೇ ಚೀನಾ ಅಡ್ಡಗಾಲು ಹಾಕಿಬಿಟ್ಟಿತು.

ಆದರೇನಂತೆ, ನರೇಂದ್ರ ಮೋದಿ ಅವರು ಭಾರತಕ್ಕೆ ಹಿನ್ನಡೆಯಾಗುವುದನ್ನು ಅದ್ಹೇಗೆ ತಪ್ಪಿಸುತ್ತಾರೆ? ಅದಕ್ಕಾಗಿಯೇ ಈ ಬಾರಿ, ಅಂದರೆ 2019ರ ಲೋಕಸಭೆ ಚುನಾವಣೆಗೂ ಮುನ್ನ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೊಡಿಸಲು ಪ್ರಧಾನಿ ಮೋದಿ ಸಕಲ ಸಿದ್ಧತೆ ಮಾಡಿದ್ದಾರೆ.

ಈ ಕುರಿತು ಎನ್ ಎಸ್ ಜಿ ಸದಸ್ಯತ್ವ ಹೊಂದಿರುವ 48 ರಾಷ್ಟ್ರಗಳು ಜೂನ್ ಅಥವಾ ಡಿಸೆಂಬರ್ ನಲ್ಲಿ ಸಭೆ ಸೇರಲಿದ್ದು, ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ನೀಡುವ ಕುರಿತು ಚರ್ಚೆ ನಡೆಸಲಾಗುತ್ತದೆ. ಈ ದಿಸೆಯಲ್ಲಿ ಮೋದಿಯವರು ಸಹ ಶತಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಸದಸ್ಯತ್ವಕ್ಕೆ ಅಡ್ಡಿಯಾಗಿರುವ ಚೀನಾದ ಜತೆಗೂ ನರೇಂದ್ರ ಮೋದಿ ಅವರು ಮಾತುಕತೆ ನಡೆಸುತ್ತಿದ್ದಾರೆ. ಕಳೆದ ಏಪ್ರಿಲ್ ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಚೀನಾ, ಭಾರತದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಲು ಬಯಸಿದ್ದು, ಈ ಬಾರಿ ಭಾರತಕ್ಕೆ ಅಡ್ಡಿಯಾಗುವುದಿಲ್ಲ ಎಂದೇ ಹೇಳಲಾಗುತ್ತಿದೆ. ಮೋದಿ ಪ್ರಯತ್ನದಿಂದ ಭಾರತಕ್ಕೆ ಸದಸ್ಯತ್ವ ಸಿಗಲಿ, ನಮ್ಮ ದೇಶ ಬಲಿಷ್ಠವಾಗಲಿ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search