• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮುಡಿಗೆ ಎನ್ ಎಸ್ ಜಿ ಸದಸ್ಯತ್ವ ಕಿರೀಟ ತೊಡಿಸಲು ಮೋದಿ ವೇದಿಕೆ ಸಿದ್ಧಪಡಿಸಿದ್ದಾರೆ ನೋಡಿ!

TNN Correspondent Posted On May 28, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಬಳಿಕ ದೇಶದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಭಾರತ 2016ರಲ್ಲಿ ಮಿಸೈಲ್ ಟೆಕ್ನಾಲಜಿ ಕಂಟ್ರೋಲ್ ರೆಜಿಮೆ ಗುಂಪಿಗೆ ಸೇರಿತು. 2017ರಲ್ಲಿ ವಾಸೆನಾರ್ ಅರೇಂಜ್ ಮೆಂಟ್ ಗುಂಪಿಗೆ ಸೇರ್ಪಡೆಯಾಯಿತು, ಪ್ರಸಕ್ತ ವರ್ಷದಲ್ಲಿ ಆಸ್ಟ್ರೇಲಿಯಾ ಗ್ರೂಪ್ ಗೆ ಸೇರುವ ಮೂಲಕ ವಿಶ್ವದಲ್ಲಿ ಭಾರತ ಬಲಿಷ್ಠ ದೇಶವಾಗುವತ್ತ ದಾಪುಗಾಲು ಇಟ್ಟಿತು.

ಆದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಾಧಾನವಿಲ್ಲ. ಮೋದಿ ಪ್ರಧಾನಿಯಾದಾಗಿನಿಂದಲೂ ಒಂದೇ ಕನಸು. ಹೇಗಾದರೂ ಮಾಡಿ ಭಾರತವನ್ನು ಅಣು ಸರಬರಾಜು ತಂಡಕ್ಕೆ (ಎನ್ಎಸ್ ಜಿ) ಸೇರಿಸಬೇಕು. ಕಳೆದ ವರ್ಷ ಬೀಜಿಂಗ್ ನಲ್ಲಿ ಭಾರತ ಇನ್ನೇನು ಗ್ರೂಪ್ ಗೆ ಸೇರಿತು ಎನ್ನುವಷ್ಟರಲ್ಲೇ ಚೀನಾ ಅಡ್ಡಗಾಲು ಹಾಕಿಬಿಟ್ಟಿತು.

ಆದರೇನಂತೆ, ನರೇಂದ್ರ ಮೋದಿ ಅವರು ಭಾರತಕ್ಕೆ ಹಿನ್ನಡೆಯಾಗುವುದನ್ನು ಅದ್ಹೇಗೆ ತಪ್ಪಿಸುತ್ತಾರೆ? ಅದಕ್ಕಾಗಿಯೇ ಈ ಬಾರಿ, ಅಂದರೆ 2019ರ ಲೋಕಸಭೆ ಚುನಾವಣೆಗೂ ಮುನ್ನ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೊಡಿಸಲು ಪ್ರಧಾನಿ ಮೋದಿ ಸಕಲ ಸಿದ್ಧತೆ ಮಾಡಿದ್ದಾರೆ.

ಈ ಕುರಿತು ಎನ್ ಎಸ್ ಜಿ ಸದಸ್ಯತ್ವ ಹೊಂದಿರುವ 48 ರಾಷ್ಟ್ರಗಳು ಜೂನ್ ಅಥವಾ ಡಿಸೆಂಬರ್ ನಲ್ಲಿ ಸಭೆ ಸೇರಲಿದ್ದು, ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ನೀಡುವ ಕುರಿತು ಚರ್ಚೆ ನಡೆಸಲಾಗುತ್ತದೆ. ಈ ದಿಸೆಯಲ್ಲಿ ಮೋದಿಯವರು ಸಹ ಶತಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಸದಸ್ಯತ್ವಕ್ಕೆ ಅಡ್ಡಿಯಾಗಿರುವ ಚೀನಾದ ಜತೆಗೂ ನರೇಂದ್ರ ಮೋದಿ ಅವರು ಮಾತುಕತೆ ನಡೆಸುತ್ತಿದ್ದಾರೆ. ಕಳೆದ ಏಪ್ರಿಲ್ ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಚೀನಾ, ಭಾರತದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಲು ಬಯಸಿದ್ದು, ಈ ಬಾರಿ ಭಾರತಕ್ಕೆ ಅಡ್ಡಿಯಾಗುವುದಿಲ್ಲ ಎಂದೇ ಹೇಳಲಾಗುತ್ತಿದೆ. ಮೋದಿ ಪ್ರಯತ್ನದಿಂದ ಭಾರತಕ್ಕೆ ಸದಸ್ಯತ್ವ ಸಿಗಲಿ, ನಮ್ಮ ದೇಶ ಬಲಿಷ್ಠವಾಗಲಿ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search