• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಮುಡಿಗೆ ಎನ್ ಎಸ್ ಜಿ ಸದಸ್ಯತ್ವ ಕಿರೀಟ ತೊಡಿಸಲು ಮೋದಿ ವೇದಿಕೆ ಸಿದ್ಧಪಡಿಸಿದ್ದಾರೆ ನೋಡಿ!

TNN Correspondent Posted On May 28, 2018
0


0
Shares
  • Share On Facebook
  • Tweet It

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಬಳಿಕ ದೇಶದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಭಾರತ 2016ರಲ್ಲಿ ಮಿಸೈಲ್ ಟೆಕ್ನಾಲಜಿ ಕಂಟ್ರೋಲ್ ರೆಜಿಮೆ ಗುಂಪಿಗೆ ಸೇರಿತು. 2017ರಲ್ಲಿ ವಾಸೆನಾರ್ ಅರೇಂಜ್ ಮೆಂಟ್ ಗುಂಪಿಗೆ ಸೇರ್ಪಡೆಯಾಯಿತು, ಪ್ರಸಕ್ತ ವರ್ಷದಲ್ಲಿ ಆಸ್ಟ್ರೇಲಿಯಾ ಗ್ರೂಪ್ ಗೆ ಸೇರುವ ಮೂಲಕ ವಿಶ್ವದಲ್ಲಿ ಭಾರತ ಬಲಿಷ್ಠ ದೇಶವಾಗುವತ್ತ ದಾಪುಗಾಲು ಇಟ್ಟಿತು.

ಆದರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಾಧಾನವಿಲ್ಲ. ಮೋದಿ ಪ್ರಧಾನಿಯಾದಾಗಿನಿಂದಲೂ ಒಂದೇ ಕನಸು. ಹೇಗಾದರೂ ಮಾಡಿ ಭಾರತವನ್ನು ಅಣು ಸರಬರಾಜು ತಂಡಕ್ಕೆ (ಎನ್ಎಸ್ ಜಿ) ಸೇರಿಸಬೇಕು. ಕಳೆದ ವರ್ಷ ಬೀಜಿಂಗ್ ನಲ್ಲಿ ಭಾರತ ಇನ್ನೇನು ಗ್ರೂಪ್ ಗೆ ಸೇರಿತು ಎನ್ನುವಷ್ಟರಲ್ಲೇ ಚೀನಾ ಅಡ್ಡಗಾಲು ಹಾಕಿಬಿಟ್ಟಿತು.

ಆದರೇನಂತೆ, ನರೇಂದ್ರ ಮೋದಿ ಅವರು ಭಾರತಕ್ಕೆ ಹಿನ್ನಡೆಯಾಗುವುದನ್ನು ಅದ್ಹೇಗೆ ತಪ್ಪಿಸುತ್ತಾರೆ? ಅದಕ್ಕಾಗಿಯೇ ಈ ಬಾರಿ, ಅಂದರೆ 2019ರ ಲೋಕಸಭೆ ಚುನಾವಣೆಗೂ ಮುನ್ನ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೊಡಿಸಲು ಪ್ರಧಾನಿ ಮೋದಿ ಸಕಲ ಸಿದ್ಧತೆ ಮಾಡಿದ್ದಾರೆ.

ಈ ಕುರಿತು ಎನ್ ಎಸ್ ಜಿ ಸದಸ್ಯತ್ವ ಹೊಂದಿರುವ 48 ರಾಷ್ಟ್ರಗಳು ಜೂನ್ ಅಥವಾ ಡಿಸೆಂಬರ್ ನಲ್ಲಿ ಸಭೆ ಸೇರಲಿದ್ದು, ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ನೀಡುವ ಕುರಿತು ಚರ್ಚೆ ನಡೆಸಲಾಗುತ್ತದೆ. ಈ ದಿಸೆಯಲ್ಲಿ ಮೋದಿಯವರು ಸಹ ಶತಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಭಾರತದ ಸದಸ್ಯತ್ವಕ್ಕೆ ಅಡ್ಡಿಯಾಗಿರುವ ಚೀನಾದ ಜತೆಗೂ ನರೇಂದ್ರ ಮೋದಿ ಅವರು ಮಾತುಕತೆ ನಡೆಸುತ್ತಿದ್ದಾರೆ. ಕಳೆದ ಏಪ್ರಿಲ್ ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಚೀನಾ, ಭಾರತದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳಲು ಬಯಸಿದ್ದು, ಈ ಬಾರಿ ಭಾರತಕ್ಕೆ ಅಡ್ಡಿಯಾಗುವುದಿಲ್ಲ ಎಂದೇ ಹೇಳಲಾಗುತ್ತಿದೆ. ಮೋದಿ ಪ್ರಯತ್ನದಿಂದ ಭಾರತಕ್ಕೆ ಸದಸ್ಯತ್ವ ಸಿಗಲಿ, ನಮ್ಮ ದೇಶ ಬಲಿಷ್ಠವಾಗಲಿ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search