• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಕೆಂಪು ಉಗ್ರರ ಬೇಟಿ, ಮಾವೋವಾದಿ ಮುಖಂಡ ಸೇರಿ ಮೂವರ ಉಡೀಸ್!

TNN Correspondent Posted On May 30, 2018
0


0
Shares
  • Share On Facebook
  • Tweet It

ರಾಯಪುರ: ಇತ್ತೀಚೆಗೆ ಛತ್ತೀಸ್ ಗಡದಲ್ಲಿ ಕೆಂಪು ಉಗ್ರರು ಅರ್ಥಾತ್ ಮಾವೋವಾದಿಗಳ ಉಪಟಳ ಜಾಸ್ತಿಯಾಗಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು, ಕೆಲವು ದಿನಗಳ ಹಿಂದಷ್ಟೇ ಹಲವು ಮಾವೋವಾದಿಗಳನ್ನು ಹತ್ಯೆ ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದರು.

ಈಗ ಮತ್ತೆ ಛತ್ತೀಸ್ ಗಡದಲ್ಲಿ ಭಾರತೀಯ ಭದ್ರತಾಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ರಜ್ಞಾಂಡ್ ಗಾಂವ್ ನ ಬೊರ್ತಾಲಾವ್ ಎಂಬ ಪ್ರದೇಶದಲ್ಲಿ ಮಾವೋವಾದಿಗಳ ಡೆಪ್ಯೂಟಿ ಕಮಾಂಡೋ ಹಾಗೂ ಆತನ ಇಬ್ಬರು ಬೆಂಬಲಿಗರನ್ನು ಹೊಡೆದುರುಳಿಸಲಾಗಿದೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಗಸ್ತು ತಿರುಗುವಾಗ ಉಪಟಳ ಆರಂಭಿಸಿದ್ದ ಮಾವೋವಾದಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಕೆರಳಿದ ಪೊಲೀಸರು ಇಡೀ ಬೆಟ್ಟದಲ್ಲಿ ಕಾರ್ಯಾಚರಣೆ ಕೈಗೊಂಡು ಯಶಸ್ವಿಯಾಗಿದ್ದು, ಮೂವರು ಮಾವೋವಾದಿಗಳನ್ನು ಹೊಡೆದುಹಾಕಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರ್ ವಾಲ್ ಮಾಹಿತಿ ನೀಡಿದ್ದಾರೆ.

ಈ ಮೂವರು ಮಾವೋವಾದಿಗಳಲ್ಲಿ ಒಬ್ಬ ಡರ್ರೆಕಾಸಾ ಪ್ರದೇಶದ ಡೆಪ್ಯೂಟಿ ಕಮಾಂಡರ್ ಆಗಿದ್ದು, ಆತನನ್ನು ಆಜಾದ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮಾವೋವಾದಿಗಳ ತಂಡದ ಬೆಂಬಲಿಗರಾಗಿದ್ದು, ಮಾವೋವಾದಿಗಳಿಗೆ ಅವಶ್ಯಕವಾಗಿರುವ ವಿವಿಧ ವಸ್ತುಗಳನ್ನು ಸರಬರಾಜು ಮಾಡುವುದು ಇವರ ಕಾರ್ಯವಾಗಿತ್ತು ಎಂದು ಪ್ರಶಾಂತ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಛತ್ತೀಸ್ ಗಡ ಕಾಡಿನಲ್ಲಿ ಅವಿತು ಜನಸಾಮಾನ್ಯ ಬದುಕಿನೊಂದಿಗೆ ಆಟವಾಡುವ ಮಾವೋವಾದಿಗಳಿಗೆ ಭಾರತೀಯ ಭದ್ರತಾ ಸಿಬ್ಬಂದಿ ಸರಿಯಾಗಿಯೇ ಪಾಠ ಕಲಿಸುತ್ತಿದ್ದು, ಗುಂಡಿಕ್ಕಿ ಕೊಲ್ಲುತ್ತಿದೆ. ಛತ್ತೀಸ್ ಗಡದ ಇಡೀ ಮಾವೋವಾದಿಗಳ ಸಂತತಿಯೇ ನಾಶವಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search