• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಕೆಂಪು ಉಗ್ರರ ಬೇಟಿ, ಮಾವೋವಾದಿ ಮುಖಂಡ ಸೇರಿ ಮೂವರ ಉಡೀಸ್!

TNN Correspondent Posted On May 30, 2018
0


0
Shares
  • Share On Facebook
  • Tweet It

ರಾಯಪುರ: ಇತ್ತೀಚೆಗೆ ಛತ್ತೀಸ್ ಗಡದಲ್ಲಿ ಕೆಂಪು ಉಗ್ರರು ಅರ್ಥಾತ್ ಮಾವೋವಾದಿಗಳ ಉಪಟಳ ಜಾಸ್ತಿಯಾಗಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು, ಕೆಲವು ದಿನಗಳ ಹಿಂದಷ್ಟೇ ಹಲವು ಮಾವೋವಾದಿಗಳನ್ನು ಹತ್ಯೆ ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದರು.

ಈಗ ಮತ್ತೆ ಛತ್ತೀಸ್ ಗಡದಲ್ಲಿ ಭಾರತೀಯ ಭದ್ರತಾಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ರಜ್ಞಾಂಡ್ ಗಾಂವ್ ನ ಬೊರ್ತಾಲಾವ್ ಎಂಬ ಪ್ರದೇಶದಲ್ಲಿ ಮಾವೋವಾದಿಗಳ ಡೆಪ್ಯೂಟಿ ಕಮಾಂಡೋ ಹಾಗೂ ಆತನ ಇಬ್ಬರು ಬೆಂಬಲಿಗರನ್ನು ಹೊಡೆದುರುಳಿಸಲಾಗಿದೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಗಸ್ತು ತಿರುಗುವಾಗ ಉಪಟಳ ಆರಂಭಿಸಿದ್ದ ಮಾವೋವಾದಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಕೆರಳಿದ ಪೊಲೀಸರು ಇಡೀ ಬೆಟ್ಟದಲ್ಲಿ ಕಾರ್ಯಾಚರಣೆ ಕೈಗೊಂಡು ಯಶಸ್ವಿಯಾಗಿದ್ದು, ಮೂವರು ಮಾವೋವಾದಿಗಳನ್ನು ಹೊಡೆದುಹಾಕಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರ್ ವಾಲ್ ಮಾಹಿತಿ ನೀಡಿದ್ದಾರೆ.

ಈ ಮೂವರು ಮಾವೋವಾದಿಗಳಲ್ಲಿ ಒಬ್ಬ ಡರ್ರೆಕಾಸಾ ಪ್ರದೇಶದ ಡೆಪ್ಯೂಟಿ ಕಮಾಂಡರ್ ಆಗಿದ್ದು, ಆತನನ್ನು ಆಜಾದ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮಾವೋವಾದಿಗಳ ತಂಡದ ಬೆಂಬಲಿಗರಾಗಿದ್ದು, ಮಾವೋವಾದಿಗಳಿಗೆ ಅವಶ್ಯಕವಾಗಿರುವ ವಿವಿಧ ವಸ್ತುಗಳನ್ನು ಸರಬರಾಜು ಮಾಡುವುದು ಇವರ ಕಾರ್ಯವಾಗಿತ್ತು ಎಂದು ಪ್ರಶಾಂತ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಛತ್ತೀಸ್ ಗಡ ಕಾಡಿನಲ್ಲಿ ಅವಿತು ಜನಸಾಮಾನ್ಯ ಬದುಕಿನೊಂದಿಗೆ ಆಟವಾಡುವ ಮಾವೋವಾದಿಗಳಿಗೆ ಭಾರತೀಯ ಭದ್ರತಾ ಸಿಬ್ಬಂದಿ ಸರಿಯಾಗಿಯೇ ಪಾಠ ಕಲಿಸುತ್ತಿದ್ದು, ಗುಂಡಿಕ್ಕಿ ಕೊಲ್ಲುತ್ತಿದೆ. ಛತ್ತೀಸ್ ಗಡದ ಇಡೀ ಮಾವೋವಾದಿಗಳ ಸಂತತಿಯೇ ನಾಶವಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search