• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಕೆಂಪು ಉಗ್ರರ ಬೇಟಿ, ಮಾವೋವಾದಿ ಮುಖಂಡ ಸೇರಿ ಮೂವರ ಉಡೀಸ್!

TNN Correspondent Posted On May 30, 2018
0


0
Shares
  • Share On Facebook
  • Tweet It

ರಾಯಪುರ: ಇತ್ತೀಚೆಗೆ ಛತ್ತೀಸ್ ಗಡದಲ್ಲಿ ಕೆಂಪು ಉಗ್ರರು ಅರ್ಥಾತ್ ಮಾವೋವಾದಿಗಳ ಉಪಟಳ ಜಾಸ್ತಿಯಾಗಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು, ಕೆಲವು ದಿನಗಳ ಹಿಂದಷ್ಟೇ ಹಲವು ಮಾವೋವಾದಿಗಳನ್ನು ಹತ್ಯೆ ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದರು.

ಈಗ ಮತ್ತೆ ಛತ್ತೀಸ್ ಗಡದಲ್ಲಿ ಭಾರತೀಯ ಭದ್ರತಾಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ರಜ್ಞಾಂಡ್ ಗಾಂವ್ ನ ಬೊರ್ತಾಲಾವ್ ಎಂಬ ಪ್ರದೇಶದಲ್ಲಿ ಮಾವೋವಾದಿಗಳ ಡೆಪ್ಯೂಟಿ ಕಮಾಂಡೋ ಹಾಗೂ ಆತನ ಇಬ್ಬರು ಬೆಂಬಲಿಗರನ್ನು ಹೊಡೆದುರುಳಿಸಲಾಗಿದೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಗಸ್ತು ತಿರುಗುವಾಗ ಉಪಟಳ ಆರಂಭಿಸಿದ್ದ ಮಾವೋವಾದಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಕೆರಳಿದ ಪೊಲೀಸರು ಇಡೀ ಬೆಟ್ಟದಲ್ಲಿ ಕಾರ್ಯಾಚರಣೆ ಕೈಗೊಂಡು ಯಶಸ್ವಿಯಾಗಿದ್ದು, ಮೂವರು ಮಾವೋವಾದಿಗಳನ್ನು ಹೊಡೆದುಹಾಕಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರ್ ವಾಲ್ ಮಾಹಿತಿ ನೀಡಿದ್ದಾರೆ.

ಈ ಮೂವರು ಮಾವೋವಾದಿಗಳಲ್ಲಿ ಒಬ್ಬ ಡರ್ರೆಕಾಸಾ ಪ್ರದೇಶದ ಡೆಪ್ಯೂಟಿ ಕಮಾಂಡರ್ ಆಗಿದ್ದು, ಆತನನ್ನು ಆಜಾದ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮಾವೋವಾದಿಗಳ ತಂಡದ ಬೆಂಬಲಿಗರಾಗಿದ್ದು, ಮಾವೋವಾದಿಗಳಿಗೆ ಅವಶ್ಯಕವಾಗಿರುವ ವಿವಿಧ ವಸ್ತುಗಳನ್ನು ಸರಬರಾಜು ಮಾಡುವುದು ಇವರ ಕಾರ್ಯವಾಗಿತ್ತು ಎಂದು ಪ್ರಶಾಂತ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಛತ್ತೀಸ್ ಗಡ ಕಾಡಿನಲ್ಲಿ ಅವಿತು ಜನಸಾಮಾನ್ಯ ಬದುಕಿನೊಂದಿಗೆ ಆಟವಾಡುವ ಮಾವೋವಾದಿಗಳಿಗೆ ಭಾರತೀಯ ಭದ್ರತಾ ಸಿಬ್ಬಂದಿ ಸರಿಯಾಗಿಯೇ ಪಾಠ ಕಲಿಸುತ್ತಿದ್ದು, ಗುಂಡಿಕ್ಕಿ ಕೊಲ್ಲುತ್ತಿದೆ. ಛತ್ತೀಸ್ ಗಡದ ಇಡೀ ಮಾವೋವಾದಿಗಳ ಸಂತತಿಯೇ ನಾಶವಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search