• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಚ್ಚೇ ದಿನ್ ಎಲ್ಲಿ ಎನ್ನುವವರೇ ಕೇಳಿ, ಒಂದೇ ಯೋಜನೆ ದೇಶದ 12 ಕೋಟಿ ಜನರಿಗೆ ಲಾಭವಾಗಿರುವುದನ್ನು

TNN Correspondent Posted On May 30, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಅಚ್ಛೇ ದಿನ್ ಇಲ್ಲ, ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂದು ಸದಾ ಬೊಗಳೆ ಬಿಡುತ್ತಿರುವ ಕೆಲವು ಅತೃಪ್ತ ಆತ್ಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪರೋಕ್ಷವಾಗಿ ತಕ್ಕ ಉತ್ತರವನ್ನು ನೀಡಿದ್ದಾರೆ.

ಮಂಗಳವಾರ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಮುದ್ರಾದ ಫಲಾನುಭವಿಗಳ ಜೊತೆಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮೋದಿ ಅವರು, ಮುದ್ರಾ ಯೋಜನೆಯಲ್ಲಿ ಕಿರು ಉದ್ದಿಮೆ, ಸಣ್ಣ ವ್ಯಾಪಾರ ಆರಂಭಸುವವರಿಗೆ ಒಟ್ಟು ಆರು ಲಕ್ಷ ಕೋಟಿ ರೂ. ಸಾಲ ವಿತರಿಸಲಾಗಿದೆ. ಮುದ್ರಾ ಯೋಜನೆಯಿಂದ ದೇಶಾದ್ಯಂತ ಸುಮಾರು 12 ಕೋಟಿ ಜನರಿಗೆ ಲಾಭವಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹಿಂದೆ ಅಧಿಕಾರ ನಡೆಸಿದ ಸರ್ಕಾರಗಳು ಸಾಲ ಮೇಳಗಳ್ನು ನಡೆಸಿ, ಸಾಲ ವಿತರಿಸಿದರೂ, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ವಿಫಲರಾಗಿದ್ದರು. ಆದರೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ತಮ್ಮ ವಿಡಿಯೋ ಭಾಷಣದಲ್ಲೂ ಹಿಂದಿನ ಸರ್ಕಾರಗಳ ವೈಪಲ್ಯವನ್ನು ಎತ್ತಿತೋರಿಸಿರುವ ಪ್ರಧಾನಿ ನರೇಂದ್ರ ಮೋದಿ 25-30 ವರ್ಷದ ಹಿಂದೆ ರಾಜಕೀಯ ಲಾಭಕ್ಕಾಗಿ ಸಾಲ ಮೇಳ ಆಯೋಜಿಸಿ, ರಾಜಕಾರಣಿಗಳ ಆಪ್ತರು, ಸಂಬಂಧಿಕರು ಸಾಲ ಪಡೆದು, ಬ್ಯಾಂಕ್ ಗಳಿಗೆ ವಂಚಿಸುತ್ತಿದ್ದರು. ಆದರೆ ನಮ್ಮ ಸರ್ಕಾರ ಸಾಲ ಮೇಳ ಆಯೋಜಿಸದೇ, ಯುವಕರ ಮೇಲೆ ಭರವಸೆ ಇಟ್ಟಿದ್ದು, ನೇರವಾಗಿ ಸಾಲ ಪಡೆದು ಉದ್ಯೋಗ ಆರಂಭಿಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

2015ರ ಏಪ್ರಿಲ್‌ 8ರಂದು ಆರಂಭವಾದ ಮುದ್ರಾ ಯೋಜನೆ ಅಡಿಯಲ್ಲಿ ಸಣ್ಣ ವ್ಯಾಪಾರ, ಉದ್ದಿಮೆ ಆರಂಭಿಸಲು 10 ಲಕ್ಷ ರೂವರೆಗೆ ಸಾಲ ನೀಡಲಾಗುತ್ತದೆ. 2017 ರಲ್ಲಿ ಮುದ್ರಾ ಯೋಜನೆಯಲ್ಲಿ ಕೇಂದ್ರ ಸರ್ಕಾರ 2.53 ಲಕ್ಷ ಕೋಟಿ ಸಾಲವನ್ನು ವಿತರಿಸಲಾಗಿತ್ತು. ಇದುವರೆಗೆ ಒಟ್ಟು 5.73 ಲಕ್ಷ ಕೋಟಿ ರೂ. ಸಾಲ ವಿತರಿಸಿದ್ದು, ಕೋಟ್ಯಂತರ ಯುವಕರಿಗೆ ಇದರಿಂದ ಉದ್ಯೋಗ ದೊರಕಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search