• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೆಸ್ಸೆಸ್ ಮುಖಂಡರ ಹತ್ಯೆ ಆರೋಪಿಗಳು ಯಾವ ದೇಶದಲ್ಲಿ ತರಬೇತಿ ಪಡೆದು ಬಂದಿದ್ದಾರೆ ಗೊತ್ತಾ?

TNN Correspondent Posted On May 31, 2018
0


0
Shares
  • Share On Facebook
  • Tweet It

ನವದೆಹಲಿ: ಇತ್ತೀಚೆಗೆ ದೇಶದಲ್ಲಿ ಆರೆಸ್ಸೆಸ್ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆಗಳು ಜಾಸ್ತಿಯಾಗುತ್ತಿವೆ. ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತದೆ. ಕರ್ನಾಟಕದಲ್ಲೇ 22ಕ್ಕೂ ಅಧಿಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವುದು ಆತಂಕ ಸೃಷ್ಟಿಸಿದೆ.

ಆದರೆ ಹೀಗೆ ಹಿಂದೂಗಳನ್ನು ಹತ್ಯೆ ಮಾಡಿದವರು ಎಲ್ಲಿ ತರಬೇತಿ ಪಡೆದಿದ್ದಾರೆ ಎಂಬುದು ಈಗ ಮತ್ತಷ್ಟು ಆತಂಕಕ್ಕೀಡುಮಾಡಿದೆ. ಹೌದು, ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕರ್ತ ನರೇಶ್ ಕುಮಾರ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಈ ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇವರು ಇಟಲಿಯಲ್ಲಿ ತರಬೇತಿ ಪಡೆದು ಬಂದಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಪಂಜಾಬಿನಲ್ಲಿ 2016ರಿಂದ 17ರ ಅವಧಿಯಲ್ಲಿ ಸುಮಾರು 8 ಎಂಟು ಎರೆಸ್ಸೆಸ್ ಮುಖಂಡರನ್ನು ಹತ್ಯೆ ಮಾಡಲಾಗಿದ್ದು, ಈ ಎಲ್ಲ ಕೃತ್ಯಗಳ ಹಿಂದೆಯೂ ಹೀಗೆ ಇಟಲಿಯಿಂದ ತರಬೇತಿ ಪಡೆದವರ ಕೈವಾಡ ಇದೆ. ಇವರು ಇಟಲಿಯಲ್ಲಿ ಕೊಲೆ ಮಾಡುವ ಕುರಿತು ತರಬೇತಿ ಪಡೆದು ಭಾರತದಲ್ಲಿ ಆರೆಸ್ಸೆಸ್ ಮುಖಂಡರನ್ನು ಕೊಲೆ ಮಾಡಲಾಗಿದೆ ಎಂದು ನರೇಶ್ ಕುಮಾರ್ ಹತ್ಯೆಯ ಪ್ರಮುಖ ಆರೋಪಿ ಎನ್ಐಎ ಅಧಿಕಾರಿಗಳಿಗೆ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕೊಲೆ ಪಿತೂರಿಯಲ್ಲಿ ಖಲಿಸ್ತಾನ್ ಲಿಬರೇಷನ್ ಫೋರ್ಸ್ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಪಾಕಿಸ್ತಾನ, ಆಸ್ಟ್ರೇಲಿಯಾ, ಲಂಡನ್, ಫ್ರಾನ್ಸ್ ಹಾಗೂ ಇಟಲಿಯಲ್ಲಿ ಕುಳಿತು ಹಿಂದೂ ಸಂಘಟನೆಗಳ ಮುಖಂಡರ ಹತ್ಯೆಗೂ ಪಿತೂರಿ ಮಾಡಲಾಗಿತ್ತು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಈ ಕುರಿತು ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search