• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಣಿಗೆ ಪಡೆಯುವಲ್ಲೂ ವಿಶ್ವಾಸ ಗಳಿಸಿದ ಬಿಜೆಪಿ, ಕಾಂಗ್ರೆಸ್ಸಿಗಿಂತ 12 ಪಟ್ಟು ಹೆಚ್ಚು ದೇಣಿಗೆ ಸಂಗ್ರಹ

TNN Correspondent Posted On May 31, 2018
0


0
Shares
  • Share On Facebook
  • Tweet It

ದೇಶದಲ್ಲಿ ಯಾವುದೇ ಪಕ್ಷವಿರಲಿ, ತಾನು ಜನರ ಬಳಿ ಹೋಗುವುದು ಜನರ ದುಡ್ಡಿನಲ್ಲೇ, ಅರ್ಥಾತ್ ಉದ್ಯಮಿಗಳ, ದಾನಿಗಳಿಂದ ಪಡೆದ ಹಣದಿಂದಲೇ. ಬೃಹತ್ ಸಮಾವೇಶ, ಚುನಾವಣೆ ಸೇರಿ ಹಲವು ಕಾರಣಗಳಿಗಾಗಿ ಪಕ್ಷಗಳು ಜನರಿಂದ ದೇಣಿಗೆ ಸಂಗ್ರಹಿಸಿ ಖರ್ಚು-ವೆಚ್ಚ ನೋಡಿಕೊಳ್ಳುತ್ತವೆ.

ಅದೇ ರೀತಿಯಾಗಿದೇ ದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತವೆ. ಆದರೆ ಹೀಗೆ ದೇಣಿಗೆ ಸಂಗ್ರಹಿಸಲು ಯಾವುದೇ ಪಕ್ಷವು ಸಾರ್ವಜನಿಕರಿಂದ ವಿಶ್ವಾಸ ಪಡೆದಿರಬೇಕು, ದೇಶದ ಜನರ ಏಳಿಗೆಗೆ ಶ್ರಮಿಸುವಂತಿರಬೇಕು ಎಂಬ ಅಲಿಖಿತ ನಿಯಮಗಳೂ ಇವೆ.

ಈ ದಿಸೆಯಲ್ಲೂ ದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಉದ್ಯಮಿಗಳು, ದಾನಿಗಳಿಂದ ಅಪಾರ ಹಣ ಸಂಗ್ರಹಿಸಿದೆ. ಹೌದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎಂಬ ಸರ್ಕಾರೇತರ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 2016-17ನೇ ಸಾಲಿನಲ್ಲಿ ಅತಿಹೆಚ್ಚು ಹಣ ಸಂಗ್ರಹಿಸಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2016-17ನೇ ಅವಧಿಯಲ್ಲಿ ಬಿಜೆಪಿಗೆ ಜನ 532.27 ಕೋಟಿ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಇದು ಕಾಂಗ್ರೆಸ್ಸಿಗಿಂತ ಸುಮಾರು 12 ಪಟ್ಟು ಜಾಸ್ತಿಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಜನರ ವಿಶ್ವಾಸ ಗಳಿಸಿದ್ದು, ಸುಮಾರು 22 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಹಾಗೆಯೇ ಉದ್ಯಮಿಗಳು, ದಾನಿಗಳ ವಿಶ್ವಾಸವೂ ಕಳೆದುಕೊಂಡಿದ್ದು, ದೇಣಿಗೆ ಸಂಗ್ರಹವಾಗದೆ 2019ರ ಲೋಕಸಭೆ ಚುನಾವಣೆ ಎದುರಿಸಲು ಸಂಕಷ್ಟ ಎದುರಿಸುತ್ತಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search