• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮನಮೋಹನ್ ಸಿಂಗ್ ಬಗ್ಗೆ ಈಗ ಹೊಗಳುತ್ತಿರುವ ಇದೇ ಅರವಿಂದ್ ಕೇಜ್ರಿವಾಲ್ 2013ರಲ್ಲಿ ಹೇಗೆ ಟ್ವೀಟ್ ಮಾಡಿದ್ದರು ಗೊತ್ತೇ?

ವಿಶಾಲ್ ಗೌಡ ಕುಶಾಲನಗರ Posted On June 1, 2018
0


0
Shares
  • Share On Facebook
  • Tweet It

ಅರವಿಂದ ಕೇಜ್ರಿವಾಲ್. ಕೆಮ್ಮು ಇರುವವರಿಗೂ, ಇರದವರಿಗೂ, ಅಂದರೆ ಎಲ್ಲರಿಗೂ ಇವರು ಗೊತ್ತು. ಅದು ಹೇಗೆ? ದೆಹಲಿ ಮುಖ್ಯಮಂತ್ರಿಯಾಗಿ, ಮೋದಿ ಅವರನ್ನು ತೆಗಳುವುದಕ್ಕಾಗಿ, ತಮ್ಮ ಶಾಸಕರನ್ನೇ ನಿಯಂತ್ರಿಸದೆ ಇರುವುದಕ್ಕಾಗಿ, ವಿವಾದಾತ್ಮಕ ಹೇಳಿಕೆಗಳಿಗಾಗಿ, ಹಾಗೂ ತಮ್ಮ ನಾಲಗೆ ಮೇಲೆಯೇ ಹಿಡಿತ ಇಲ್ಲದೆ ಯೂ ಟರ್ನ್ ತೆಗೆದುಕೊಳ್ಳುವುದಕ್ಕಾಗಿ!

ಹಾಗಾದರೆ ಕಳೆದ ಮೂರು ವರ್ಷಗಳಲ್ಲಿ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ಮಾಡಿರುವ ಘನಕಾರ್ಯ ಯಾವುದು? ಯಾವ ಪ್ರಮುಖ ಯೋಜನೆ ಜಾರಿಗೆ ತಂದಿದ್ದಾರೆ? ಯಾವ ಯೋಜನೆ ದೇಶದ ಗಮನ ಸೆಳೆದಿದೆ? ದೆಹಲಿಯ ವಾಯುಮಾಲಿನ್ಯ ತಗ್ಗಿಸಲು ಯಾವ ಕ್ರಮ ಕೈಗೊಂಡರು?

ಪ್ರಣಾಳಿಕೆಯಲ್ಲಿ ಹೇಳಿದಂತೆ ಉಚಿತವಾಗಿ ವಿದ್ಯುತ್ ನೀಡಿದರಾ? ಜನರಿಗೆ ಉಚಿತ ವೈಫೈ ನೀಡಿದರಾ? ಹೋಗಲಿ ಯಾವುದಾದರೂ ಒಳ್ಳೆಯ ಮಾತುಗಳನ್ನಾಡಿದ್ದಾರಾ? ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರಾ? ರಾಜಕೀಯ ಸೌಹಾರ್ದತೆ ಮೆರೆದಿದ್ದಾರಾ? ಹೂಂ, ಹೂಂ, ಇದಾವುದನ್ನೂ ಅರವಿಂದ ಕೇಜ್ರಿವಾಲ್ ಮಾಡಲಿಲ್ಲ. ಯಾವ ಭರವಸೆಯನ್ನೂ ಈಡೇರಿಸಲಿಲ್ಲ.

ಇಂತಹ ಅರವಿಂದ್ ಕೇಜ್ರಿವಾಲ್ ಈಗ ಹೊಸದೊಂದು ಆಣಿಮುತ್ತು ಉದುರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೈಯುವುದೇ ಮುಖ್ಯಮಂತ್ರಿ ಕೆಲಸ ಎಂದು ಭಾವಿಸಿರುವ ಇವರು ಕಳೆದ ಮೂರು ವರ್ಷಗಳಿಂದ ಇದನ್ನೇ ಮಾಡುತ್ತಿದ್ದಾರೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳುವ ದೃಷ್ಟಿಯಿಂದ, ಭಾರತಕ್ಕೆ ಮನಮೋಹನ್ ಸಿಂಗ್ ಅವರಂತಹ ಉನ್ನತ ಶಿಕ್ಷಣ ಪಡೆದವರು ಪ್ರಧಾನಿಯ ಅವಶ್ಯಕತೆ ಇದೆ. ದೇಶದ ಜನ ಮನಮೋಹನ್ ಸಿಂಗ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಇದೇ ಅರವಿಂದ್ ಕೇಜ್ರಿವಾಲ್ 2013ರಲ್ಲಿ ಮನಮೋಹನ್ ಸಿಂಗ್ ಅವರ ಕುರಿತು ಹೇಗೆ ಟ್ವೀಟ್ ಮಾಡಿದ್ದರು ಗೊತ್ತೇ? ಹೇಗೆ ಮನಮೋಹನ್ ಸಿಂಗ್ ಅವರ ತಪ್ಪನ್ನು ಜನರಿಗೆ ತೋರಿಸಿದ್ದರು ಗೊತ್ತೇ? ಆ ಮೂಲಕ ತಾವು ಅಣ್ಣಾ ಹಜಾರೆಯವರ ತಂಡದ ಸದಸ್ಯ, ಅವರ ಬೆಂಬಲಿಗ ಎಂಬುದನ್ನು ಮನಮೋಹನ್ ಸಿಂಗ್ ಅವರಿಗೆ ಬೈದು ಜನರ ಕಣ್ಣೆದುರಿಗೆ ಮಣ್ಣೆರೆಚಿದ್ದರು ಗೊತ್ತೇ?

ಹೌದು, ಈಗ ಮನಮೋಹನ್ ಸಿಂಗ್ ಅವರನ್ನು ಜನ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿರುವ ಇದೇ ಅರವಿಂದ ಕೇಜ್ರಿವಾಲ್ 2013ರಲ್ಲಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಹಾಗೂ ಅಕ್ರಮ ಗುರುತಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ, ಮನಮೋಹನ್ ಸಿಂಗ್ ಅವರು ಒಬ್ಬ ವಿಫಲ ಪ್ರಧಾನಿ, ತಮ್ಮ ಮೂಗಿನ ಕೆಳಗೆ ಏನು ನಡೆದರೂ ಗೊತ್ತಾಗದವರು ಎಂಬರ್ಥದಲ್ಲಿ ಟೀಕೆ ಮಾಡಿದ್ದರು.

ಈಗ ಇದೇ ಅರವಿಂದ ಕೇಜ್ರಿವಾಲ್, ಮನಮೋಹನ್ ಸಿಂಗ್ ರನ್ನು ಜನ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಹೇಳಿ ಅರವಿಂದ ಕೇಜ್ರಿವಾಲ್ ಅವರಲ್ಲಿ ನಿಷ್ಠೆಗೆ ಜಾಗವಿದೆಯಾ? ಆಡಿದ ಮಾತಿಗೆ ಬೆಲೆ ಇದೆಯಾ? ಅಂದು ನಿಜವಾಗಿಯೂ ಮನಮೋಹನ್ ಸಿಂಗ್ ಅವರ ನಿಜಬಣ್ಣವನ್ನು ಜನರಿಗೆ ತಿಳಿಸಿ, ತಮ್ಮ ಬೇಳೆ ಬೇಯಿಸಿಕೊಂಡಿದ್ದರು.

ಆದರೆ ಈಗ ಸುಳ್ಳು, ಸುಳ್ಳೇ ನರೇಂದ್ರ ಮೋದಿ ಅವರನ್ನು ಟೀಕಿಸಿ, ತಾವು ಮುನ್ನೆಲೆಗೆ ಬರುವ ಯೋಜನೆಯಲ್ಲಿದ್ದಾರೆ ಈ ಕೇಜ್ರಿವಾಲ್. ಜತೆಯಲ್ಲಿಟ್ಟುಕೊಂಡಿದ್ದ ಅಣ್ಣಾ ಹಜಾರೆಯವರೇ ಅರವಿಂದ್ ಕೇಜ್ರಿವಾಲ್ ಅವರನ್ನು ತಿರಸ್ಕರಿಸಿರುವಾಗ, ಇನ್ನು ನಾವೇಕೆ ಈ ಊಸರವಳ್ಳಿಯಂತಹ ಮುಖ್ಯಮಂತ್ರಿಯ ಮಾತು ನಂಬಬೇಕು? ಹಾಗನಿಸುವುದಿಲ್ಲವೇ?

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
ವಿಶಾಲ್ ಗೌಡ ಕುಶಾಲನಗರ February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
ವಿಶಾಲ್ ಗೌಡ ಕುಶಾಲನಗರ February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search