• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ವಿರೋಧಿಗಳೇ ಎಲ್ಲಿದ್ದೀರಿ, ಭಾರತದ ಜಿಡಿಪಿ ಚೀನಾವನ್ನೂ ಹಿಂದಿಕ್ಕಿದೆ ನೋಡಬನ್ನಿ!

TNN Correspondent Posted On June 1, 2018
0


0
Shares
  • Share On Facebook
  • Tweet It

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳುವ, ಪ್ರತಿ ನಡೆಯನ್ನೂ ವಿರೋಧಿಸುವ ದೊಡ್ಡ ಪಡೆ ಮೊದಲಿನಿಂದಲೂ ಇದೆ, ಈಗಲು ಅಸ್ತಿತ್ವದಲ್ಲಿದೆ. ಮೋದಿ ಅವರು ಯಾವುದೇ ನಿರ್ಧಾರ ಕೈಗೊಂಡರೂ ಇವರು ವಿರೋಧಿಸುತ್ತಾರೆ. ಆ ಯೋಜನೆಯಿಂದ ದೇಶಕ್ಕೆ ಒಳಿತಾಗಲಿದೆ ಎಂದು ಗೊತ್ತಿದ್ದರೂ ವಿರೋಧಿಸುತ್ತಾರೆ.

ನೀವೇ ಯೋಚನೆ ಮಾಡಿ ನೋಡಿ. ನರೇಂದ್ರ ಮೋದಿ ಅವರು ಐನೂರು ಸಾವಿರ ರೂಪಾಯಿಗಳ ನೋಟು ನಿಷೇಧಿಸಿ, ಕಾಳಧನಿಕರಿಗೆ ಶಾಕ್ ನೀಡಿದರು. ಡಿಜಿಟಲ್ ಮನಿ ವಹಿವಾಟಿಗೆ ಪ್ರೋತ್ಸಾಹ ನೀಡಿದರು. ಜಿಎಸ್ಟಿ ಜಾರಿಗೊಳಿಸುವ ಮೂಲಕ ದೇಶದ ತೆರಿಗೆ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿದ್ದಾರೆ. 90 ಲಕ್ಷಕ್ಕೂ ಅಧಿಕ ತೆರಿಗೆದಾರರು ನೋಂದಣಿಯಾಗಿದ್ದಾರೆ.

ಈ ಎರಡು ಯೋಜನೆಗಳಿಂದ ದೇಶದಲ್ಲಿ ಇಷ್ಟೆಲ್ಲ ಬದಲಾವಣೆಯಾಗಿದ್ದರೂ, ಕಾಂಗ್ರೆಸ್ಸಿಗರು, ವಿರೋಧ ಪಕ್ಷಗಳ ಮುಖಂಡರು, ಬುದ್ಧಿ ಜೀವಿಗಳು, ಸೋ ಕಾಲ್ಡ್ ಪ್ರಗತಿಪರರು, ಗಂಜಿಗಿರಾಕಿಗಳೆಲ್ಲರದ್ದೂ ಒಂದೇ ವರಾತ. ಮೋದಿ ಅವರು ಕೈಗೊಂಡಿರುವ ಈ ನಿರ್ಧಾರದಿಂದ ಭಾರತದ ಆರ್ಥಿಕತೆ ಅಧೋಗತಿಗೆ ತಲುಪುತ್ತದೆ ಎಂದು ಬೊಬ್ಬೆ ಹಾಕಿದವರು ಇವರು.

ಆದರೆ ಈಗ ಏನಾಗಿದೆ ನೋಡಿ. ಭಾರತದಲ್ಲಿ ಉದ್ಯಮ ಕೈಗೊಳ್ಳಲು ಸರಳವಾಗಿದೆ. ಉದ್ಯಮ ಕೈಗೊಳ್ಳುವಲ್ಲಿ ಸರಳ ವಿಧಾನ ಇರುವ ಟಾಪ್ ನೂರನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಷ್ಟೇ ಏಕೆ ಭಾರತದ ಜಿಡಿಪಿ ಈಗ ಶೇ.7.7ರಷ್ಟು ಜಾಸ್ತಿಯಾಗಿದೆ.

ಹೌದು, 2008ರ ಜನವರಿಯಿಂದ ಮಾರ್ಚ್ ವರೆಗಿನ, ಅಂದರೆಪ್ರಸಕ್ತ ಸಾಲಿನ ವಿತ್ತೀಯ ವರ್ಷದ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ 7.7ಕ್ಕೆ ಜಿಗಿದಿದ್ದು, ಚೀನಾವನ್ನೂ ಹಿಂದಿಕ್ಕಿದೆ. ಚೀನಾದ ಪ್ರಸ್ತುತ ಜಿಡಿಪಿ ಶೇ.6.8ಕ್ಕೆ ಕುಸಿದಿದ್ದು, ಭಾರತ ಮೇಲುಗೈ ಸಾಧಿಸಿದೆ.

ಒಂದು ಬಾರಿ ಯೋಚಿಸಿ ನೋಡಿ, ನರೇಂದ್ರ ಮೋದಿ ಅವರು ಘೋಷಿಸಿದ ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ದೇಶದ ಆರ್ಥಿಕ ಸ್ಥಿತಿಗತಿ ಅಧೋಗತಿಗೆ ಇಳಿಯದೆ, ಚೀನಾದ ಆರ್ಥಿಕತೆಯನ್ನೂ ಮೀರಿಸುತ್ತಿತ್ತೇ? ಇನ್ನು ಮುಂದೆಯೂ ಈ ಕಾಂಗ್ರೆಸ್ ಸೇರಿ ಹಲವು ಪಕ್ಷಗಳ ಮಾತು ನಂಬಬೇಕೆ? ನಂಬಿದರೆ ಏನಾಗುತ್ತದೆ ಎಂಬುದಕ್ಕೆ ನೋಟು ನಿಷೇಧ, ಜಿಎಸ್ಟಿ ಬಳಿಕ ಬೊಬ್ಬೆ ಹಾಕಿದ್ದು ಹಾಗೂ ಈಗ ಭಾರತದ ಆರ್ಥಿಕ ಸ್ಥಿತಿ ಔನ್ನತ್ಯಕ್ಕೇರುತ್ತಿರುವುದೇ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search