• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿ ವಿರೋಧಿಗಳೇ ಎಲ್ಲಿದ್ದೀರಿ, ಭಾರತದ ಜಿಡಿಪಿ ಚೀನಾವನ್ನೂ ಹಿಂದಿಕ್ಕಿದೆ ನೋಡಬನ್ನಿ!

TNN Correspondent Posted On June 1, 2018
0


0
Shares
  • Share On Facebook
  • Tweet It

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳುವ, ಪ್ರತಿ ನಡೆಯನ್ನೂ ವಿರೋಧಿಸುವ ದೊಡ್ಡ ಪಡೆ ಮೊದಲಿನಿಂದಲೂ ಇದೆ, ಈಗಲು ಅಸ್ತಿತ್ವದಲ್ಲಿದೆ. ಮೋದಿ ಅವರು ಯಾವುದೇ ನಿರ್ಧಾರ ಕೈಗೊಂಡರೂ ಇವರು ವಿರೋಧಿಸುತ್ತಾರೆ. ಆ ಯೋಜನೆಯಿಂದ ದೇಶಕ್ಕೆ ಒಳಿತಾಗಲಿದೆ ಎಂದು ಗೊತ್ತಿದ್ದರೂ ವಿರೋಧಿಸುತ್ತಾರೆ.

ನೀವೇ ಯೋಚನೆ ಮಾಡಿ ನೋಡಿ. ನರೇಂದ್ರ ಮೋದಿ ಅವರು ಐನೂರು ಸಾವಿರ ರೂಪಾಯಿಗಳ ನೋಟು ನಿಷೇಧಿಸಿ, ಕಾಳಧನಿಕರಿಗೆ ಶಾಕ್ ನೀಡಿದರು. ಡಿಜಿಟಲ್ ಮನಿ ವಹಿವಾಟಿಗೆ ಪ್ರೋತ್ಸಾಹ ನೀಡಿದರು. ಜಿಎಸ್ಟಿ ಜಾರಿಗೊಳಿಸುವ ಮೂಲಕ ದೇಶದ ತೆರಿಗೆ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿದ್ದಾರೆ. 90 ಲಕ್ಷಕ್ಕೂ ಅಧಿಕ ತೆರಿಗೆದಾರರು ನೋಂದಣಿಯಾಗಿದ್ದಾರೆ.

ಈ ಎರಡು ಯೋಜನೆಗಳಿಂದ ದೇಶದಲ್ಲಿ ಇಷ್ಟೆಲ್ಲ ಬದಲಾವಣೆಯಾಗಿದ್ದರೂ, ಕಾಂಗ್ರೆಸ್ಸಿಗರು, ವಿರೋಧ ಪಕ್ಷಗಳ ಮುಖಂಡರು, ಬುದ್ಧಿ ಜೀವಿಗಳು, ಸೋ ಕಾಲ್ಡ್ ಪ್ರಗತಿಪರರು, ಗಂಜಿಗಿರಾಕಿಗಳೆಲ್ಲರದ್ದೂ ಒಂದೇ ವರಾತ. ಮೋದಿ ಅವರು ಕೈಗೊಂಡಿರುವ ಈ ನಿರ್ಧಾರದಿಂದ ಭಾರತದ ಆರ್ಥಿಕತೆ ಅಧೋಗತಿಗೆ ತಲುಪುತ್ತದೆ ಎಂದು ಬೊಬ್ಬೆ ಹಾಕಿದವರು ಇವರು.

ಆದರೆ ಈಗ ಏನಾಗಿದೆ ನೋಡಿ. ಭಾರತದಲ್ಲಿ ಉದ್ಯಮ ಕೈಗೊಳ್ಳಲು ಸರಳವಾಗಿದೆ. ಉದ್ಯಮ ಕೈಗೊಳ್ಳುವಲ್ಲಿ ಸರಳ ವಿಧಾನ ಇರುವ ಟಾಪ್ ನೂರನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಅಷ್ಟೇ ಏಕೆ ಭಾರತದ ಜಿಡಿಪಿ ಈಗ ಶೇ.7.7ರಷ್ಟು ಜಾಸ್ತಿಯಾಗಿದೆ.

ಹೌದು, 2008ರ ಜನವರಿಯಿಂದ ಮಾರ್ಚ್ ವರೆಗಿನ, ಅಂದರೆಪ್ರಸಕ್ತ ಸಾಲಿನ ವಿತ್ತೀಯ ವರ್ಷದ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ 7.7ಕ್ಕೆ ಜಿಗಿದಿದ್ದು, ಚೀನಾವನ್ನೂ ಹಿಂದಿಕ್ಕಿದೆ. ಚೀನಾದ ಪ್ರಸ್ತುತ ಜಿಡಿಪಿ ಶೇ.6.8ಕ್ಕೆ ಕುಸಿದಿದ್ದು, ಭಾರತ ಮೇಲುಗೈ ಸಾಧಿಸಿದೆ.

ಒಂದು ಬಾರಿ ಯೋಚಿಸಿ ನೋಡಿ, ನರೇಂದ್ರ ಮೋದಿ ಅವರು ಘೋಷಿಸಿದ ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ದೇಶದ ಆರ್ಥಿಕ ಸ್ಥಿತಿಗತಿ ಅಧೋಗತಿಗೆ ಇಳಿಯದೆ, ಚೀನಾದ ಆರ್ಥಿಕತೆಯನ್ನೂ ಮೀರಿಸುತ್ತಿತ್ತೇ? ಇನ್ನು ಮುಂದೆಯೂ ಈ ಕಾಂಗ್ರೆಸ್ ಸೇರಿ ಹಲವು ಪಕ್ಷಗಳ ಮಾತು ನಂಬಬೇಕೆ? ನಂಬಿದರೆ ಏನಾಗುತ್ತದೆ ಎಂಬುದಕ್ಕೆ ನೋಟು ನಿಷೇಧ, ಜಿಎಸ್ಟಿ ಬಳಿಕ ಬೊಬ್ಬೆ ಹಾಕಿದ್ದು ಹಾಗೂ ಈಗ ಭಾರತದ ಆರ್ಥಿಕ ಸ್ಥಿತಿ ಔನ್ನತ್ಯಕ್ಕೇರುತ್ತಿರುವುದೇ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search