• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ದಲಿತ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ಆತ ಮಾಡಿದ ದೊಡ್ಡ ತಪ್ಪಾಯಿತಾ?

TNN Correspondent Posted On June 1, 2018
0


0
Shares
  • Share On Facebook
  • Tweet It

ತಿರುವನಂತಪುರ: ಈ ಕ್ರಿಶ್ಚಿಯನ್ ಮಿಷನರಿಗಳು ದಲಿತರು, ಬಡವರಿಗೆ ಹಣದ ಆಸೆ ನೀಡಿ, ಹೇಗೆ ಅವರು ಅತ್ತ ಕ್ರಿಶ್ಚಿಯನ್ನರೂ ಅಲ್ಲದೆ, ಇತ್ತ ದಲಿತರೂ ಆಗಿರದೆ ಜೀವನ ನಡೆಸುವಂತೆ ಮಾಡುತ್ತಾರೆ ಎಂಬುದಕ್ಕೆ ಕೇರಳದಲ್ಲಿ ನಿದರ್ಶನವೊಂದು ದೊರೆತಿದೆ.

ಹೌದು, ಕೇರಳದ ಕೊಲ್ಲಂ ಜಿಲ್ಲೆಯ ಥೆನ್ಮಾಲಾ ದಲಿತನಾಗಿದ್ದು, ಬಳಿಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕೆವಿನ್ ಜೋಸೆಫ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಕ್ರಿಶ್ಚಿಯನ್ ಗೆ ಮತಾಂತರವಾದ ಬಳಿಕ, ಮೂಲ ಕ್ರಿಶ್ಚಿಯನ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಯುವತಿ ಮನೆಯಲ್ಲಿ ಮದುವೆ ಒಪ್ಪದೆ, ಈಗ ಯುವಕನನ್ನು ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕೊಟ್ಟಾಯಂ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ಕ್ರಿಶ್ಚಿಯನ್ ಯುವತಿಯ ಸಹೋದರ ಶಾನು ಚಾಕೋ, ಆತನ ತಂದೆ ಚಾಕೋ ಸೇರಿ 10 ಜನರ ವಿರುದ್ಧ ಅಪಹರಣ, ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತುಗೊಳಿಸಿದ್ದು, ವಿಚಾರಣೆ ನಡೆಯುತ್ತಿದೆ.

ಕೆವಿನ್ ಹಾಗೂ ಕ್ರಿಶ್ಚಿಯನ್ ಯುವತಿ ಕೊಟ್ಟಾಯಂನ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವಾಗ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಸ್ನೇಹ ಪ್ರೀತಿಗೆ ತಿರುಗಿದೆ. ಅದಾದ ಬಳಿಕ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಯುವತಿಯ ಕುಟುಂಬಸ್ಥರು ಕೆವಿನ್ ನನ್ನು ತಿರಸ್ಕರಿಸಲು, ಆತ ಮೂಲ ದಲಿತನಾಗಿರುವುದೇ ಆಗಿದೆ. ಆದರೂ ಯುವಕ-ಯುವತಿ ರಿಜಿಸ್ಟರ್ಡ್ ಆಫೀಸಿನಲ್ಲಿ ಮದುವೆಯಾಗಿದ್ದರು. ಆದರೂ ಯುವತಿಯ ಕುಟುಂಬಸ್ಥರು ವೈರತ್ವ ಮೆರೆದು ಯುವಕನನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಹೇಳಿ ಯುವಕ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ತಪ್ಪಾ? ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದರೂ ಇಂತಹ ಭೇದ-ಭಾವ ಏಕೆ? ಯಾವ ಪಾದ್ರಿ ಇದಕ್ಕೆ ಉತ್ತರಿಸುತ್ತಾರೆ?

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search