• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ದಲಿತ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ಆತ ಮಾಡಿದ ದೊಡ್ಡ ತಪ್ಪಾಯಿತಾ?

TNN Correspondent Posted On June 1, 2018
0


0
Shares
  • Share On Facebook
  • Tweet It

ತಿರುವನಂತಪುರ: ಈ ಕ್ರಿಶ್ಚಿಯನ್ ಮಿಷನರಿಗಳು ದಲಿತರು, ಬಡವರಿಗೆ ಹಣದ ಆಸೆ ನೀಡಿ, ಹೇಗೆ ಅವರು ಅತ್ತ ಕ್ರಿಶ್ಚಿಯನ್ನರೂ ಅಲ್ಲದೆ, ಇತ್ತ ದಲಿತರೂ ಆಗಿರದೆ ಜೀವನ ನಡೆಸುವಂತೆ ಮಾಡುತ್ತಾರೆ ಎಂಬುದಕ್ಕೆ ಕೇರಳದಲ್ಲಿ ನಿದರ್ಶನವೊಂದು ದೊರೆತಿದೆ.

ಹೌದು, ಕೇರಳದ ಕೊಲ್ಲಂ ಜಿಲ್ಲೆಯ ಥೆನ್ಮಾಲಾ ದಲಿತನಾಗಿದ್ದು, ಬಳಿಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕೆವಿನ್ ಜೋಸೆಫ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಕ್ರಿಶ್ಚಿಯನ್ ಗೆ ಮತಾಂತರವಾದ ಬಳಿಕ, ಮೂಲ ಕ್ರಿಶ್ಚಿಯನ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಯುವತಿ ಮನೆಯಲ್ಲಿ ಮದುವೆ ಒಪ್ಪದೆ, ಈಗ ಯುವಕನನ್ನು ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕೊಟ್ಟಾಯಂ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ಕ್ರಿಶ್ಚಿಯನ್ ಯುವತಿಯ ಸಹೋದರ ಶಾನು ಚಾಕೋ, ಆತನ ತಂದೆ ಚಾಕೋ ಸೇರಿ 10 ಜನರ ವಿರುದ್ಧ ಅಪಹರಣ, ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತುಗೊಳಿಸಿದ್ದು, ವಿಚಾರಣೆ ನಡೆಯುತ್ತಿದೆ.

ಕೆವಿನ್ ಹಾಗೂ ಕ್ರಿಶ್ಚಿಯನ್ ಯುವತಿ ಕೊಟ್ಟಾಯಂನ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವಾಗ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಸ್ನೇಹ ಪ್ರೀತಿಗೆ ತಿರುಗಿದೆ. ಅದಾದ ಬಳಿಕ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಯುವತಿಯ ಕುಟುಂಬಸ್ಥರು ಕೆವಿನ್ ನನ್ನು ತಿರಸ್ಕರಿಸಲು, ಆತ ಮೂಲ ದಲಿತನಾಗಿರುವುದೇ ಆಗಿದೆ. ಆದರೂ ಯುವಕ-ಯುವತಿ ರಿಜಿಸ್ಟರ್ಡ್ ಆಫೀಸಿನಲ್ಲಿ ಮದುವೆಯಾಗಿದ್ದರು. ಆದರೂ ಯುವತಿಯ ಕುಟುಂಬಸ್ಥರು ವೈರತ್ವ ಮೆರೆದು ಯುವಕನನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಹೇಳಿ ಯುವಕ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ತಪ್ಪಾ? ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದರೂ ಇಂತಹ ಭೇದ-ಭಾವ ಏಕೆ? ಯಾವ ಪಾದ್ರಿ ಇದಕ್ಕೆ ಉತ್ತರಿಸುತ್ತಾರೆ?

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search