• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ದಲಿತ ವ್ಯಕ್ತಿ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ಆತ ಮಾಡಿದ ದೊಡ್ಡ ತಪ್ಪಾಯಿತಾ?

TNN Correspondent Posted On June 1, 2018
0


0
Shares
  • Share On Facebook
  • Tweet It

ತಿರುವನಂತಪುರ: ಈ ಕ್ರಿಶ್ಚಿಯನ್ ಮಿಷನರಿಗಳು ದಲಿತರು, ಬಡವರಿಗೆ ಹಣದ ಆಸೆ ನೀಡಿ, ಹೇಗೆ ಅವರು ಅತ್ತ ಕ್ರಿಶ್ಚಿಯನ್ನರೂ ಅಲ್ಲದೆ, ಇತ್ತ ದಲಿತರೂ ಆಗಿರದೆ ಜೀವನ ನಡೆಸುವಂತೆ ಮಾಡುತ್ತಾರೆ ಎಂಬುದಕ್ಕೆ ಕೇರಳದಲ್ಲಿ ನಿದರ್ಶನವೊಂದು ದೊರೆತಿದೆ.

ಹೌದು, ಕೇರಳದ ಕೊಲ್ಲಂ ಜಿಲ್ಲೆಯ ಥೆನ್ಮಾಲಾ ದಲಿತನಾಗಿದ್ದು, ಬಳಿಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕೆವಿನ್ ಜೋಸೆಫ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಕ್ರಿಶ್ಚಿಯನ್ ಗೆ ಮತಾಂತರವಾದ ಬಳಿಕ, ಮೂಲ ಕ್ರಿಶ್ಚಿಯನ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಯುವತಿ ಮನೆಯಲ್ಲಿ ಮದುವೆ ಒಪ್ಪದೆ, ಈಗ ಯುವಕನನ್ನು ಕೊಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕೊಟ್ಟಾಯಂ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದು, ಕ್ರಿಶ್ಚಿಯನ್ ಯುವತಿಯ ಸಹೋದರ ಶಾನು ಚಾಕೋ, ಆತನ ತಂದೆ ಚಾಕೋ ಸೇರಿ 10 ಜನರ ವಿರುದ್ಧ ಅಪಹರಣ, ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಅಮಾನತುಗೊಳಿಸಿದ್ದು, ವಿಚಾರಣೆ ನಡೆಯುತ್ತಿದೆ.

ಕೆವಿನ್ ಹಾಗೂ ಕ್ರಿಶ್ಚಿಯನ್ ಯುವತಿ ಕೊಟ್ಟಾಯಂನ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವಾಗ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಸ್ನೇಹ ಪ್ರೀತಿಗೆ ತಿರುಗಿದೆ. ಅದಾದ ಬಳಿಕ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಯುವತಿಯ ಕುಟುಂಬಸ್ಥರು ಕೆವಿನ್ ನನ್ನು ತಿರಸ್ಕರಿಸಲು, ಆತ ಮೂಲ ದಲಿತನಾಗಿರುವುದೇ ಆಗಿದೆ. ಆದರೂ ಯುವಕ-ಯುವತಿ ರಿಜಿಸ್ಟರ್ಡ್ ಆಫೀಸಿನಲ್ಲಿ ಮದುವೆಯಾಗಿದ್ದರು. ಆದರೂ ಯುವತಿಯ ಕುಟುಂಬಸ್ಥರು ವೈರತ್ವ ಮೆರೆದು ಯುವಕನನ್ನು ಕೊಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಹೇಳಿ ಯುವಕ ಕ್ರಿಶ್ಚಿಯನ್ ಗೆ ಮತಾಂತರವಾಗಿದ್ದೇ ತಪ್ಪಾ? ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದರೂ ಇಂತಹ ಭೇದ-ಭಾವ ಏಕೆ? ಯಾವ ಪಾದ್ರಿ ಇದಕ್ಕೆ ಉತ್ತರಿಸುತ್ತಾರೆ?

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search