• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಯಾವ ರಾಷ್ಟ್ರದಿಂದ ಸ್ಪೈಕ್ ಕ್ಷಿಪಣಿ ತರಿಸಿಕೊಳ್ಳುತ್ತಿದೆ ಗೊತ್ತಾ?

TNN Correspondent Posted On June 2, 2018
0


0
Shares
  • Share On Facebook
  • Tweet It

ನವದೆಹಲಿ: ಆ ಹೇಡಿ ಪಾಕಿಸ್ತಾನವನ್ನು ಎಂದಿಗೂ ನಂಬುವಂತಿಲ್ಲ. ಮಗ್ಗುಲಲ್ಲೇ ಕುಳಿತು ಶಾಂತಿ ಮಾತುಕತೆ ನಡೆಸಿ, ಹಿಂಬಾಗಿಲಿನಿಂದ ಉಗ್ರರು, ಸೈನಿಕರನ್ನು ಬಿಟ್ಟು ಉಪಟಳ ಮಾಡುತ್ತಿದೆ. ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ಇಂತಹುದೇ ಉಪಟಳ ಮಾಡುತ್ತದೆ. ಆದರೆ ಭಾರತೀಯ ಸೈನಿಕರು ಸುಮ್ಮನಿರಬೇಕಿಲ್ಲ, ದಾಳಿ ಮಾಡಲು ಯತ್ನಿಸಿದ, ಮಾಡಿದ ಉಗ್ರರು, ಪಾಕಿ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಪಾಕಿಸ್ತಾನಕ್ಕೆ ಸೆಡ್ಡು ಹೊಡೆಯಲು ಭಾರತ ಮಹತ್ತರ ನಿರ್ಧಾರವೊಂದನ್ನು ಕೈಗೊಂಡಿದ್ದು, ಶತ್ರುರಾಷ್ಟ್ರದ ಯುದ್ಧ ಟ್ಯಾಂಕರ್ ಗಳನ್ನು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸುವ ಟ್ಯಾಂಕ್ ನಿರೋಧಕ ಸ್ಕೈಪ್ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ.

ಈ ಕುರಿತು ಭಾರತ ಹಾಗೂ ಇಸ್ರೇಲ್ ನಡುವೆ ಮಹತ್ತರ ಮಾತುಕತೆ ಮುಗಿದಿದ್ದು, ಶೀಘ್ರದಲ್ಲೇ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದ ಪ್ರಕಟವಾಗಲಿದೆ. ಈ ಸ್ಪೈಕ್ ಕ್ಷಿಪಣಿಗಳ ತಯಾರಿಕೆಯಲ್ಲಿ ಇಸ್ರೇಲ್ ಮುನ್ನಡೆಯಲ್ಲಿರುವ ಕಾರಣ ಹಾಗೂ ಇಸ್ರೇಲ್ ಜತೆ ಭಾರತದ ಸಂಬಂಧ ಉತ್ತಮವಾಗಿರುವ ಕಾರಣದಿಂದ ಇಸ್ರೇಲ್ ನಿಂದ ಖರೀದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಟ್ಯಾಂಕ್ ನಿರೋಧಕ ಸ್ಪೈಕ್ ಕ್ಷಿಪಣಿಗಳು ಆಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಶತ್ರುರಾಷ್ಟ್ರಗಳ ಯುದ್ಧದ ಟ್ಯಾಂಕರ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಶಕ್ತಿ ಹೊಂದಿವೆ. ಭಾರತಕ್ಕೆ ಪ್ರಸ್ತುತ ಇಂತಹ 8 ಸಾವಿರ ಕ್ಷಿಪಣಿಗಳ ಅವಶ್ಯವಿದ್ದು, ಮುಂದಿನ ಮೂರು ವರ್ಷದಲ್ಲಿ ಇಸ್ರೇಲ್ ಭಾರತಕ್ಕೆ ಬಹುತೇಕ ಕ್ಷಿಪಣಿ ಪೂರೈಸಲಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search