• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯನಿಗೆ ಕೇಂದ್ರದ ಭರ್ಜರಿ ಆಫರ್: ಕಪ್ಪುಕುಳಗಳ ಮಾಹಿತಿ ನೀಡಿ ಕೋಟಿ ಕೋಟಿ ಗೆಲ್ಲಿ

TNN Correspondent Posted On June 2, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿರುವ ಕಪ್ಪು ಕುಳಗಳಲ್ಲಿರುವ ಹೂರಣ ಹೊರ ಹಾಕಲು ಕೇಂದ್ರ ಸರ್ಕಾರ ಕಾಲಕ್ಕೆ ತಕ್ಕಂತೆ ಹೊಸ ಹೊಸ ನೀತಿ, ನಿಯಮ, ಯೋಜನೆಗಳನ್ನು ರೂಪಿಸುತ್ತಿದೆ. ನೋಟ್ಯಂತರದ ಮೂಲಕ ಬೇಡ ಬೇಡ ಎಂದರೂ ಕಪ್ಪು ಹಣ ಸಂಗ್ರಹಿಸಿದವರು ತಮ್ಮ ಹಣವನ್ನು ಹೊರ ಹಾಕಿದ್ದರು. ಇದೀಗ ಅಕ್ರಮವಾಗಿ ಆಸ್ತಿ ಮಾಡಿರುವವರ ಮೇಲೆ ಕಣ್ಣಿಟ್ಟಿದ್ದು, ಸಾಮಾನ್ಯ ಜನರಿಗೆ ವಿಶೇಷ ಆಹ್ವಾನವೊಂದು ನೀಡಿದೆ. ಕಪ್ಪು ಹಣ, ಅಕ್ರಮ ಆಸ್ತಿ ಹೊಂದಿರುವವರ ಬಗ್ಗೆ ಖಚಿತ ಮಾಹಿತಿ ನೀಡಿದರೇ 50 ಲಕ್ಷದಿಂದ 5 ಕೋಟಿಯವರೆಗೆ ಭರ್ಜರಿ ಬಹುಮಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಮೂಲಕ ದೇಶದ ಸಾಮಾನ್ಯ ಪ್ರಜೆಯೂ ಅಕ್ರಮ ತಡೆಯುವಲ್ಲಿ ಭಾಗಿಯಾಗಬಹುದು.

ಕಪ್ಪು ಹಣವನ್ನು ತಮ್ಮ ಸಂಬಂಧಿಕರು, ಆಪ್ತರ ಹೆಸರಿನಲ್ಲಿ ಸಂಗ್ರಹಿಸಿ, ಅವರ ಹೆಸರಿನಲ್ಲಿ ಆಸ್ತಿ ಸಂಗ್ರಹಿಸಿ, ತೆರಿಗೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಮಾಸ್ಟರ್ ಪ್ಲಾನ್ ರೂಪಿಸಿದೆ. ಅಕ್ರಮಗಳನ್ನು ತಡೆಯಲು ಸಾರ್ವಜನಿಕರ ನೇರ ಸಹಕಾರ ಪಡೆಯುವುದು, ಅಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಅಕ್ರಮ ನಡೆಸುವವರಿಗೆ ಸೂಕ್ತ ಶಿಕ್ಷೆ ವಿಧಿಸುವುದು, ಸರ್ಕಾರದ ಬೊಕ್ಕಸಕ್ಕೆ ವಂಚನೆ ಮಾಡುತ್ತಿರುವವರಿಗೆ ಸೂಕ್ತ ಪಾಠ ಕಲಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.

ಕಪ್ಪು ಹಣದ ಕುರಿತ ಮಾಹಿತಿಯನ್ನು ತೆರಿಗೆ ಇಲಾಖೆಯ ತನಿಖಾ ನಿರ್ದೇಶಕರಿಗೆ ನೀಡಬೇಕು. ಕಪ್ಪು ಹಣದ ಕುರಿತು ನಿಖರ ಮಾಹಿತಿಯೊಂದಿಗೆ ಮಾಹಿತಿ ನೀಡಿದರೇ ಐದು ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಅಲ್ಲದೇ ಆದಾಯ ತೆರಿಗೆ ವಂಚಿಸಿದವರ ಬಗ್ಗೆ ತೆರಿಗೆ ಇಲಾಖೆಯ ಡೈರೆಕ್ಟರ್ ಜನರಲ್ ಅಥವಾ ತತ್ಸಮಾನ ಅಧಿಕಾರಿಗಳಿಗೆ ಮಾಹಿತಿ ನೀಡಿದರೇ ಮಾಹಿತಿದಾರನಿಗೆ 50 ಲಕ್ಷ ಬಹುಮಾನ, ಬೇನಾಮಿ ವಹಿವಾಟಿನ ಕುರಿತು ತೆರಿಗೆ ಇಲಾಖೆಯ ಬೇನಾಮಿ ತಡೆ ಘಟಕದ ಜಂಟಿ ಅಥವಾ ಹೆಚ್ಚುವರಿ ಆಯುಕ್ತರಿಗೆ ಮಾಹಿತಿ ನೀಡಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಮಾಹಿತಿದಾರರನ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

A new reward scheme titled “Benami Transactions Informants Reward Scheme, 2018”, has been issued by the Income Tax Department with the objective of obtaining people’s participation in the Income Tax Department’s efforts to unearth black money & to reduce tax evasion.

— Income Tax India (@IncomeTaxIndia) June 1, 2018

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search