• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯನಿಗೆ ಕೇಂದ್ರದ ಭರ್ಜರಿ ಆಫರ್: ಕಪ್ಪುಕುಳಗಳ ಮಾಹಿತಿ ನೀಡಿ ಕೋಟಿ ಕೋಟಿ ಗೆಲ್ಲಿ

TNN Correspondent Posted On June 2, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿರುವ ಕಪ್ಪು ಕುಳಗಳಲ್ಲಿರುವ ಹೂರಣ ಹೊರ ಹಾಕಲು ಕೇಂದ್ರ ಸರ್ಕಾರ ಕಾಲಕ್ಕೆ ತಕ್ಕಂತೆ ಹೊಸ ಹೊಸ ನೀತಿ, ನಿಯಮ, ಯೋಜನೆಗಳನ್ನು ರೂಪಿಸುತ್ತಿದೆ. ನೋಟ್ಯಂತರದ ಮೂಲಕ ಬೇಡ ಬೇಡ ಎಂದರೂ ಕಪ್ಪು ಹಣ ಸಂಗ್ರಹಿಸಿದವರು ತಮ್ಮ ಹಣವನ್ನು ಹೊರ ಹಾಕಿದ್ದರು. ಇದೀಗ ಅಕ್ರಮವಾಗಿ ಆಸ್ತಿ ಮಾಡಿರುವವರ ಮೇಲೆ ಕಣ್ಣಿಟ್ಟಿದ್ದು, ಸಾಮಾನ್ಯ ಜನರಿಗೆ ವಿಶೇಷ ಆಹ್ವಾನವೊಂದು ನೀಡಿದೆ. ಕಪ್ಪು ಹಣ, ಅಕ್ರಮ ಆಸ್ತಿ ಹೊಂದಿರುವವರ ಬಗ್ಗೆ ಖಚಿತ ಮಾಹಿತಿ ನೀಡಿದರೇ 50 ಲಕ್ಷದಿಂದ 5 ಕೋಟಿಯವರೆಗೆ ಭರ್ಜರಿ ಬಹುಮಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಮೂಲಕ ದೇಶದ ಸಾಮಾನ್ಯ ಪ್ರಜೆಯೂ ಅಕ್ರಮ ತಡೆಯುವಲ್ಲಿ ಭಾಗಿಯಾಗಬಹುದು.

ಕಪ್ಪು ಹಣವನ್ನು ತಮ್ಮ ಸಂಬಂಧಿಕರು, ಆಪ್ತರ ಹೆಸರಿನಲ್ಲಿ ಸಂಗ್ರಹಿಸಿ, ಅವರ ಹೆಸರಿನಲ್ಲಿ ಆಸ್ತಿ ಸಂಗ್ರಹಿಸಿ, ತೆರಿಗೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಮಾಸ್ಟರ್ ಪ್ಲಾನ್ ರೂಪಿಸಿದೆ. ಅಕ್ರಮಗಳನ್ನು ತಡೆಯಲು ಸಾರ್ವಜನಿಕರ ನೇರ ಸಹಕಾರ ಪಡೆಯುವುದು, ಅಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಅಕ್ರಮ ನಡೆಸುವವರಿಗೆ ಸೂಕ್ತ ಶಿಕ್ಷೆ ವಿಧಿಸುವುದು, ಸರ್ಕಾರದ ಬೊಕ್ಕಸಕ್ಕೆ ವಂಚನೆ ಮಾಡುತ್ತಿರುವವರಿಗೆ ಸೂಕ್ತ ಪಾಠ ಕಲಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.

ಕಪ್ಪು ಹಣದ ಕುರಿತ ಮಾಹಿತಿಯನ್ನು ತೆರಿಗೆ ಇಲಾಖೆಯ ತನಿಖಾ ನಿರ್ದೇಶಕರಿಗೆ ನೀಡಬೇಕು. ಕಪ್ಪು ಹಣದ ಕುರಿತು ನಿಖರ ಮಾಹಿತಿಯೊಂದಿಗೆ ಮಾಹಿತಿ ನೀಡಿದರೇ ಐದು ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಅಲ್ಲದೇ ಆದಾಯ ತೆರಿಗೆ ವಂಚಿಸಿದವರ ಬಗ್ಗೆ ತೆರಿಗೆ ಇಲಾಖೆಯ ಡೈರೆಕ್ಟರ್ ಜನರಲ್ ಅಥವಾ ತತ್ಸಮಾನ ಅಧಿಕಾರಿಗಳಿಗೆ ಮಾಹಿತಿ ನೀಡಿದರೇ ಮಾಹಿತಿದಾರನಿಗೆ 50 ಲಕ್ಷ ಬಹುಮಾನ, ಬೇನಾಮಿ ವಹಿವಾಟಿನ ಕುರಿತು ತೆರಿಗೆ ಇಲಾಖೆಯ ಬೇನಾಮಿ ತಡೆ ಘಟಕದ ಜಂಟಿ ಅಥವಾ ಹೆಚ್ಚುವರಿ ಆಯುಕ್ತರಿಗೆ ಮಾಹಿತಿ ನೀಡಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಮಾಹಿತಿದಾರರನ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

A new reward scheme titled “Benami Transactions Informants Reward Scheme, 2018”, has been issued by the Income Tax Department with the objective of obtaining people’s participation in the Income Tax Department’s efforts to unearth black money & to reduce tax evasion.

— Income Tax India (@IncomeTaxIndia) June 1, 2018

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search