• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜನಸಾಮಾನ್ಯನಿಗೆ ಕೇಂದ್ರದ ಭರ್ಜರಿ ಆಫರ್: ಕಪ್ಪುಕುಳಗಳ ಮಾಹಿತಿ ನೀಡಿ ಕೋಟಿ ಕೋಟಿ ಗೆಲ್ಲಿ

TNN Correspondent Posted On June 2, 2018


  • Share On Facebook
  • Tweet It

ದೆಹಲಿ: ದೇಶದಲ್ಲಿರುವ ಕಪ್ಪು ಕುಳಗಳಲ್ಲಿರುವ ಹೂರಣ ಹೊರ ಹಾಕಲು ಕೇಂದ್ರ ಸರ್ಕಾರ ಕಾಲಕ್ಕೆ ತಕ್ಕಂತೆ ಹೊಸ ಹೊಸ ನೀತಿ, ನಿಯಮ, ಯೋಜನೆಗಳನ್ನು ರೂಪಿಸುತ್ತಿದೆ. ನೋಟ್ಯಂತರದ ಮೂಲಕ ಬೇಡ ಬೇಡ ಎಂದರೂ ಕಪ್ಪು ಹಣ ಸಂಗ್ರಹಿಸಿದವರು ತಮ್ಮ ಹಣವನ್ನು ಹೊರ ಹಾಕಿದ್ದರು. ಇದೀಗ ಅಕ್ರಮವಾಗಿ ಆಸ್ತಿ ಮಾಡಿರುವವರ ಮೇಲೆ ಕಣ್ಣಿಟ್ಟಿದ್ದು, ಸಾಮಾನ್ಯ ಜನರಿಗೆ ವಿಶೇಷ ಆಹ್ವಾನವೊಂದು ನೀಡಿದೆ. ಕಪ್ಪು ಹಣ, ಅಕ್ರಮ ಆಸ್ತಿ ಹೊಂದಿರುವವರ ಬಗ್ಗೆ ಖಚಿತ ಮಾಹಿತಿ ನೀಡಿದರೇ 50 ಲಕ್ಷದಿಂದ 5 ಕೋಟಿಯವರೆಗೆ ಭರ್ಜರಿ ಬಹುಮಾನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಮೂಲಕ ದೇಶದ ಸಾಮಾನ್ಯ ಪ್ರಜೆಯೂ ಅಕ್ರಮ ತಡೆಯುವಲ್ಲಿ ಭಾಗಿಯಾಗಬಹುದು.

ಕಪ್ಪು ಹಣವನ್ನು ತಮ್ಮ ಸಂಬಂಧಿಕರು, ಆಪ್ತರ ಹೆಸರಿನಲ್ಲಿ ಸಂಗ್ರಹಿಸಿ, ಅವರ ಹೆಸರಿನಲ್ಲಿ ಆಸ್ತಿ ಸಂಗ್ರಹಿಸಿ, ತೆರಿಗೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಮಾಸ್ಟರ್ ಪ್ಲಾನ್ ರೂಪಿಸಿದೆ. ಅಕ್ರಮಗಳನ್ನು ತಡೆಯಲು ಸಾರ್ವಜನಿಕರ ನೇರ ಸಹಕಾರ ಪಡೆಯುವುದು, ಅಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಅಕ್ರಮ ನಡೆಸುವವರಿಗೆ ಸೂಕ್ತ ಶಿಕ್ಷೆ ವಿಧಿಸುವುದು, ಸರ್ಕಾರದ ಬೊಕ್ಕಸಕ್ಕೆ ವಂಚನೆ ಮಾಡುತ್ತಿರುವವರಿಗೆ ಸೂಕ್ತ ಪಾಠ ಕಲಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.

ಕಪ್ಪು ಹಣದ ಕುರಿತ ಮಾಹಿತಿಯನ್ನು ತೆರಿಗೆ ಇಲಾಖೆಯ ತನಿಖಾ ನಿರ್ದೇಶಕರಿಗೆ ನೀಡಬೇಕು. ಕಪ್ಪು ಹಣದ ಕುರಿತು ನಿಖರ ಮಾಹಿತಿಯೊಂದಿಗೆ ಮಾಹಿತಿ ನೀಡಿದರೇ ಐದು ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಅಲ್ಲದೇ ಆದಾಯ ತೆರಿಗೆ ವಂಚಿಸಿದವರ ಬಗ್ಗೆ ತೆರಿಗೆ ಇಲಾಖೆಯ ಡೈರೆಕ್ಟರ್ ಜನರಲ್ ಅಥವಾ ತತ್ಸಮಾನ ಅಧಿಕಾರಿಗಳಿಗೆ ಮಾಹಿತಿ ನೀಡಿದರೇ ಮಾಹಿತಿದಾರನಿಗೆ 50 ಲಕ್ಷ ಬಹುಮಾನ, ಬೇನಾಮಿ ವಹಿವಾಟಿನ ಕುರಿತು ತೆರಿಗೆ ಇಲಾಖೆಯ ಬೇನಾಮಿ ತಡೆ ಘಟಕದ ಜಂಟಿ ಅಥವಾ ಹೆಚ್ಚುವರಿ ಆಯುಕ್ತರಿಗೆ ಮಾಹಿತಿ ನೀಡಿದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಮಾಹಿತಿದಾರರನ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

A new reward scheme titled “Benami Transactions Informants Reward Scheme, 2018”, has been issued by the Income Tax Department with the objective of obtaining people’s participation in the Income Tax Department’s efforts to unearth black money & to reduce tax evasion.

— Income Tax India (@IncomeTaxIndia) June 1, 2018

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search