• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರೇಂದ್ರ ಮೋದಿಗೆ ಮತ್ತೊಂದು ಗೌರವ, ಸಿಂಗಾಪುರದಲ್ಲಿ ಮೋದಿ ಹೆಸರಲ್ಲಿ ಅರಳಲಿದೆ ಹೂವೊಂದು!

TNN Correspondent Posted On June 2, 2018


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಪ್ರಧಾನಿಯಾದ ಬಳಿಕ ಇಡೀ ವಿಶ್ವವೇ ಅವರನ್ನು ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿದೆ. ಒಂದು ಕಾಲದಲ್ಲಿ ವೀಸಾ ಕೊಡಲು ನಿರಾಕರಿಸಿದ್ದ ಇದೇ ಅಮೆರಿಕ, ಈಗ ಮೋದಿ ತಮ್ಮ ದೇಶಕ್ಕೆ ಆಗಮಿಸುತ್ತಾರೆ ಎಂದರೆ ಹಬ್ಬದಂತೆ ಸಿದ್ಧಪಡಿಸುತ್ತದೆ. ಅಷ್ಟರಮಟ್ಟಿಗೆ ಮೋದಿ ಖ್ಯಾತಿ ವಿಶ್ವವ್ಯಾಪಿಯಾಗಿದೆ. ಭಾರತದ ಕೀರ್ತಿ ಪತಾಕೆಯೂ ಬಾನೆತ್ತರಕ್ಕೆ ಹಾರುತ್ತಿದೆ.

ಇಂತಹ ವಿಶ್ವನಾಯಕ ನರೇಂದ್ರ ಮೋದಿ ಅವರಿಗೆ ಸಿಂಗಾಪುರದಲ್ಲಿ ಮತ್ತೊಂದು ಗೌರವ ಲಭಿಸಿದ್ದು, ಇನ್ನು ಮುಂದೆ ಸಿಂಗಾಪುರದಲ್ಲಿ ನರೇಂದ್ರ ಮೋದಿ ಹೆಸರಿನಲ್ಲಿ ಪುಷ್ಪ ಅರಳಿದೆ.

ಹೌದು, ನರೇಂದ್ರ ಮೋದಿ ಅವರು ಸಿಂಗಾಪುರದ ರಾಷ್ಟ್ರೀಯ ಆರ್ಕಿಡ್ ಉದ್ಯಾನವನಕ್ಕೆ ಭೇಟಿ ನೀಡಿದ್ದು, ಇದರ ಸವಿನೆನಪಿಗಾಗಿ ಆರ್ಕಿಡ್ ಹೂವೊಂದಕ್ಕೆ ನರೇಂದ್ರ ಮೋದಿ ಅಂತ ಹೆಸರಿಟ್ಟಿದ್ದು, ಇನ್ನು ಮೇಲೆ ಈ ಹೂ ನರೇಂದ್ರ ಮೋದಿ ಅಂತಲೇ ಕರೆಸಿಕೊಳ್ಳಲಿದೆ.

ಸಿಂಗಾಪುರದ ರಾಷ್ಟ್ರೀಯ ಆರ್ಕಿಡ್ ಉದ್ಯಾನವನಕ್ಕೆ ನರೇಂದ್ರ ಮೋದಿ ಅವರು ಭೇಟಿ ಮಾಡಿದ ಸಂದರ್ಭದಲ್ಲಿ ಪುಷ್ಪವೊಂದಕ್ಕೆ ಡೆಂಡ್ರೊಬಿಯಮ್ ನರೇಂದ್ರ ಮೋದಿ ಎಂದು ಹೆಸರಿಡಲಾಗಿದೆ ಎಂಬುದಾಗಿ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪುರಾತನ ಹಿಂದೂ ದೇವಾಲಯ ಶ್ರೀ ಮಾರಿಯಮ್ಮನ್ ಗೂ ಭೇಟಿ ನೀಡಿದ್ದಾರೆ. ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತಿ ಜಾಸ್ತಿಯಾಗಿದ್ದು, ಅವರೂ ವಿಶ್ವನಾಯಕರಾಗುತ್ತಿದ್ದಾರೆ.

 

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search