• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ನೋಟಿಸ್ ಗೆ ಮಣಿದ ಮಾಯಾವತಿ, ಕೊನೆಗೂ ಸರ್ಕಾರಿ ಬಂಗಲೆ ತೊರೆದ ಕುಮಾರಿ

TNN Correspondent Posted On June 3, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಹಲವು ವರ್ಷಗಳವರೆಗೂ ಆಡಳಿತ ನಡೆಸಿದ ಬಳಿಕವೂ, ಅಧಿಕಾರದಿಂದ ಇಳಿದ ಬಳಿಕವೂ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆಯಲ್ಲಿ ಆರಾಮವಾಗಿ ವಾಸಿಯಾಗಿದ್ದರು. ಆದರೆ ವ್ಯಕ್ತಿಯೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ್ದ ಸುಪ್ರೀಂ ಕೋರ್ಟ್ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಜಕಾರಣಿಗಳಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟೇ ಗಂಟು ಮೂಟೆ ಕಟ್ಟುವಂತೆ ಆದೇಶ ನೀಡಿದ್ದರೂ, ಮುಲಾಯಂ ಸಿಂಗ್ ಯಾದವ್, ಮಾಯಾವತಿ ಸೇರಿ ಹಲವು ರಾಜಕಾರಣಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲೇ ವಾಸ ಮಾಡಿದ್ದರು. ಆದರೆ ಯೋಗಿ ಆದಿತ್ಯನಾಥರು ಸುಮ್ಮನಿರಬೇಕಲ್ಲ, ಯಾರು ಅಧಿಕಾರವಿಲ್ಲದಿದ್ದರೂ ಸರ್ಕಾರಿ ಬಂಗಲೆಯಲ್ಲಿದ್ದಾರೋ, ಅವರೆಲ್ಲ ಕೂಡಲೇ ಗಂಟು ಮೂಟೆ ಕಟ್ಟಬೇಕು ಎಂದು ನೋಟಿಸ್ ಕಳುಹಿಸಿದ್ದರು.

ಹೀಗೆ ಯೋಗಿ ಆದಿತ್ಯನಾಥರು ಕಳುಹಿಸಿದ ನೋಟಿಸ್ ನಂತೆ ಅನಿವಾರ್ಯವಾಗಿ ಮುಲಾಯಂ ಸಿಂಗ್ ಸೇರಿ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆ ಖಾಲಿ ಮಾಡಿದ್ದರು. ಆದರೂ ಮಾಯಾವತಿಯವರು ಮಾತ್ರ ಬಂಗಲೆ ಖಾಲಿ ಮಾಡಿರಲಿಲ್ಲ.

ಅದೂ ಅಲ್ಲದೆ, ಸರ್ಕಾರಿ ಬಂಗಲೆಯಲ್ಲೇ ಉಳಿಯುವ ದೃಷ್ಟಿಯಿಂದ ಉಪಾಯ ಮಾಡಿದ್ದ ಮಾಯಾವತಿ, ತಾವು ವಾಸಿಸಿದ್ದ ಸರ್ಕಾರಿ ಬಂಗಲೆಯ ಹೆಸರನ್ನು ಬಿಎಸ್ಪಿ ಸಂಸ್ಥಾಪಕರಾದ ಕಾನ್ಶಿರಾಮ್ ಹೆಸರಲ್ಲಿ, ಕಾನ್ಶಿರಾಂ ಯಾದ್ಗಾರ್ ವಿಶ್ರಾಮ್ ಸ್ಥಳ ಎಂದು ಹೆಸರಿಟ್ಟಿದ್ದಲ್ಲದೆ, ಅದೊಂದು ಸ್ಮಾರಕ ಎಂದು ಕರೆದಿದ್ದರು.

ಆದರೆ ಕೊನೆಗೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ನೋಟಿಸ್ ಗೆ ಮಣಿದಿರುವ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ತಾವು ತಂಗಿದ್ದ 13 ಎ ಮಾಲ್ ಅವೆನ್ಯೂ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಪ್ರಸ್ತುತ ತಮ್ಮ ವಸತಿಯನ್ನು ಮಾಯಾವತಿಯವರು 9 ಮಾಲ್ ಅವೆನ್ಯೂಗೆ ಸ್ಥಳಾಂತರಿಸಿದ್ದಾರೆ. ಅಂತೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ಕ್ರಮದಂತೆ, ಅವಧಿ ಮುಗಿದರೂ ಸರ್ಕಾರಿ ಬಂಗಲೆಯಲ್ಲಿ ತಿಂದುಂಡು ವಾಸವಾಗಿದ್ದ ರಾಜಕಾರಣಿಗಳು ಕಾಲ್ಕೀಳುವಂತಾಗಿದೆ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search