• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ನೋಟಿಸ್ ಗೆ ಮಣಿದ ಮಾಯಾವತಿ, ಕೊನೆಗೂ ಸರ್ಕಾರಿ ಬಂಗಲೆ ತೊರೆದ ಕುಮಾರಿ

TNN Correspondent Posted On June 3, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಹಲವು ವರ್ಷಗಳವರೆಗೂ ಆಡಳಿತ ನಡೆಸಿದ ಬಳಿಕವೂ, ಅಧಿಕಾರದಿಂದ ಇಳಿದ ಬಳಿಕವೂ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆಯಲ್ಲಿ ಆರಾಮವಾಗಿ ವಾಸಿಯಾಗಿದ್ದರು. ಆದರೆ ವ್ಯಕ್ತಿಯೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ್ದ ಸುಪ್ರೀಂ ಕೋರ್ಟ್ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಜಕಾರಣಿಗಳಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟೇ ಗಂಟು ಮೂಟೆ ಕಟ್ಟುವಂತೆ ಆದೇಶ ನೀಡಿದ್ದರೂ, ಮುಲಾಯಂ ಸಿಂಗ್ ಯಾದವ್, ಮಾಯಾವತಿ ಸೇರಿ ಹಲವು ರಾಜಕಾರಣಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲೇ ವಾಸ ಮಾಡಿದ್ದರು. ಆದರೆ ಯೋಗಿ ಆದಿತ್ಯನಾಥರು ಸುಮ್ಮನಿರಬೇಕಲ್ಲ, ಯಾರು ಅಧಿಕಾರವಿಲ್ಲದಿದ್ದರೂ ಸರ್ಕಾರಿ ಬಂಗಲೆಯಲ್ಲಿದ್ದಾರೋ, ಅವರೆಲ್ಲ ಕೂಡಲೇ ಗಂಟು ಮೂಟೆ ಕಟ್ಟಬೇಕು ಎಂದು ನೋಟಿಸ್ ಕಳುಹಿಸಿದ್ದರು.

ಹೀಗೆ ಯೋಗಿ ಆದಿತ್ಯನಾಥರು ಕಳುಹಿಸಿದ ನೋಟಿಸ್ ನಂತೆ ಅನಿವಾರ್ಯವಾಗಿ ಮುಲಾಯಂ ಸಿಂಗ್ ಸೇರಿ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆ ಖಾಲಿ ಮಾಡಿದ್ದರು. ಆದರೂ ಮಾಯಾವತಿಯವರು ಮಾತ್ರ ಬಂಗಲೆ ಖಾಲಿ ಮಾಡಿರಲಿಲ್ಲ.

ಅದೂ ಅಲ್ಲದೆ, ಸರ್ಕಾರಿ ಬಂಗಲೆಯಲ್ಲೇ ಉಳಿಯುವ ದೃಷ್ಟಿಯಿಂದ ಉಪಾಯ ಮಾಡಿದ್ದ ಮಾಯಾವತಿ, ತಾವು ವಾಸಿಸಿದ್ದ ಸರ್ಕಾರಿ ಬಂಗಲೆಯ ಹೆಸರನ್ನು ಬಿಎಸ್ಪಿ ಸಂಸ್ಥಾಪಕರಾದ ಕಾನ್ಶಿರಾಮ್ ಹೆಸರಲ್ಲಿ, ಕಾನ್ಶಿರಾಂ ಯಾದ್ಗಾರ್ ವಿಶ್ರಾಮ್ ಸ್ಥಳ ಎಂದು ಹೆಸರಿಟ್ಟಿದ್ದಲ್ಲದೆ, ಅದೊಂದು ಸ್ಮಾರಕ ಎಂದು ಕರೆದಿದ್ದರು.

ಆದರೆ ಕೊನೆಗೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ನೋಟಿಸ್ ಗೆ ಮಣಿದಿರುವ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ತಾವು ತಂಗಿದ್ದ 13 ಎ ಮಾಲ್ ಅವೆನ್ಯೂ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಪ್ರಸ್ತುತ ತಮ್ಮ ವಸತಿಯನ್ನು ಮಾಯಾವತಿಯವರು 9 ಮಾಲ್ ಅವೆನ್ಯೂಗೆ ಸ್ಥಳಾಂತರಿಸಿದ್ದಾರೆ. ಅಂತೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ಕ್ರಮದಂತೆ, ಅವಧಿ ಮುಗಿದರೂ ಸರ್ಕಾರಿ ಬಂಗಲೆಯಲ್ಲಿ ತಿಂದುಂಡು ವಾಸವಾಗಿದ್ದ ರಾಜಕಾರಣಿಗಳು ಕಾಲ್ಕೀಳುವಂತಾಗಿದೆ.

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search