• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಆದಿತ್ಯನಾಥರ ನೋಟಿಸ್ ಗೆ ಮಣಿದ ಮಾಯಾವತಿ, ಕೊನೆಗೂ ಸರ್ಕಾರಿ ಬಂಗಲೆ ತೊರೆದ ಕುಮಾರಿ

TNN Correspondent Posted On June 3, 2018


  • Share On Facebook
  • Tweet It

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಹಲವು ವರ್ಷಗಳವರೆಗೂ ಆಡಳಿತ ನಡೆಸಿದ ಬಳಿಕವೂ, ಅಧಿಕಾರದಿಂದ ಇಳಿದ ಬಳಿಕವೂ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆಯಲ್ಲಿ ಆರಾಮವಾಗಿ ವಾಸಿಯಾಗಿದ್ದರು. ಆದರೆ ವ್ಯಕ್ತಿಯೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ್ದ ಸುಪ್ರೀಂ ಕೋರ್ಟ್ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಜಕಾರಣಿಗಳಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟೇ ಗಂಟು ಮೂಟೆ ಕಟ್ಟುವಂತೆ ಆದೇಶ ನೀಡಿದ್ದರೂ, ಮುಲಾಯಂ ಸಿಂಗ್ ಯಾದವ್, ಮಾಯಾವತಿ ಸೇರಿ ಹಲವು ರಾಜಕಾರಣಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲೇ ವಾಸ ಮಾಡಿದ್ದರು. ಆದರೆ ಯೋಗಿ ಆದಿತ್ಯನಾಥರು ಸುಮ್ಮನಿರಬೇಕಲ್ಲ, ಯಾರು ಅಧಿಕಾರವಿಲ್ಲದಿದ್ದರೂ ಸರ್ಕಾರಿ ಬಂಗಲೆಯಲ್ಲಿದ್ದಾರೋ, ಅವರೆಲ್ಲ ಕೂಡಲೇ ಗಂಟು ಮೂಟೆ ಕಟ್ಟಬೇಕು ಎಂದು ನೋಟಿಸ್ ಕಳುಹಿಸಿದ್ದರು.

ಹೀಗೆ ಯೋಗಿ ಆದಿತ್ಯನಾಥರು ಕಳುಹಿಸಿದ ನೋಟಿಸ್ ನಂತೆ ಅನಿವಾರ್ಯವಾಗಿ ಮುಲಾಯಂ ಸಿಂಗ್ ಸೇರಿ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆ ಖಾಲಿ ಮಾಡಿದ್ದರು. ಆದರೂ ಮಾಯಾವತಿಯವರು ಮಾತ್ರ ಬಂಗಲೆ ಖಾಲಿ ಮಾಡಿರಲಿಲ್ಲ.

ಅದೂ ಅಲ್ಲದೆ, ಸರ್ಕಾರಿ ಬಂಗಲೆಯಲ್ಲೇ ಉಳಿಯುವ ದೃಷ್ಟಿಯಿಂದ ಉಪಾಯ ಮಾಡಿದ್ದ ಮಾಯಾವತಿ, ತಾವು ವಾಸಿಸಿದ್ದ ಸರ್ಕಾರಿ ಬಂಗಲೆಯ ಹೆಸರನ್ನು ಬಿಎಸ್ಪಿ ಸಂಸ್ಥಾಪಕರಾದ ಕಾನ್ಶಿರಾಮ್ ಹೆಸರಲ್ಲಿ, ಕಾನ್ಶಿರಾಂ ಯಾದ್ಗಾರ್ ವಿಶ್ರಾಮ್ ಸ್ಥಳ ಎಂದು ಹೆಸರಿಟ್ಟಿದ್ದಲ್ಲದೆ, ಅದೊಂದು ಸ್ಮಾರಕ ಎಂದು ಕರೆದಿದ್ದರು.

ಆದರೆ ಕೊನೆಗೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ನೋಟಿಸ್ ಗೆ ಮಣಿದಿರುವ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ತಾವು ತಂಗಿದ್ದ 13 ಎ ಮಾಲ್ ಅವೆನ್ಯೂ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಪ್ರಸ್ತುತ ತಮ್ಮ ವಸತಿಯನ್ನು ಮಾಯಾವತಿಯವರು 9 ಮಾಲ್ ಅವೆನ್ಯೂಗೆ ಸ್ಥಳಾಂತರಿಸಿದ್ದಾರೆ. ಅಂತೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ಕ್ರಮದಂತೆ, ಅವಧಿ ಮುಗಿದರೂ ಸರ್ಕಾರಿ ಬಂಗಲೆಯಲ್ಲಿ ತಿಂದುಂಡು ವಾಸವಾಗಿದ್ದ ರಾಜಕಾರಣಿಗಳು ಕಾಲ್ಕೀಳುವಂತಾಗಿದೆ.

 

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search