• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ನೋಟಿಸ್ ಗೆ ಮಣಿದ ಮಾಯಾವತಿ, ಕೊನೆಗೂ ಸರ್ಕಾರಿ ಬಂಗಲೆ ತೊರೆದ ಕುಮಾರಿ

TNN Correspondent Posted On June 3, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಹಲವು ವರ್ಷಗಳವರೆಗೂ ಆಡಳಿತ ನಡೆಸಿದ ಬಳಿಕವೂ, ಅಧಿಕಾರದಿಂದ ಇಳಿದ ಬಳಿಕವೂ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆಯಲ್ಲಿ ಆರಾಮವಾಗಿ ವಾಸಿಯಾಗಿದ್ದರು. ಆದರೆ ವ್ಯಕ್ತಿಯೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ್ದ ಸುಪ್ರೀಂ ಕೋರ್ಟ್ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಜಕಾರಣಿಗಳಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟೇ ಗಂಟು ಮೂಟೆ ಕಟ್ಟುವಂತೆ ಆದೇಶ ನೀಡಿದ್ದರೂ, ಮುಲಾಯಂ ಸಿಂಗ್ ಯಾದವ್, ಮಾಯಾವತಿ ಸೇರಿ ಹಲವು ರಾಜಕಾರಣಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲೇ ವಾಸ ಮಾಡಿದ್ದರು. ಆದರೆ ಯೋಗಿ ಆದಿತ್ಯನಾಥರು ಸುಮ್ಮನಿರಬೇಕಲ್ಲ, ಯಾರು ಅಧಿಕಾರವಿಲ್ಲದಿದ್ದರೂ ಸರ್ಕಾರಿ ಬಂಗಲೆಯಲ್ಲಿದ್ದಾರೋ, ಅವರೆಲ್ಲ ಕೂಡಲೇ ಗಂಟು ಮೂಟೆ ಕಟ್ಟಬೇಕು ಎಂದು ನೋಟಿಸ್ ಕಳುಹಿಸಿದ್ದರು.

ಹೀಗೆ ಯೋಗಿ ಆದಿತ್ಯನಾಥರು ಕಳುಹಿಸಿದ ನೋಟಿಸ್ ನಂತೆ ಅನಿವಾರ್ಯವಾಗಿ ಮುಲಾಯಂ ಸಿಂಗ್ ಸೇರಿ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆ ಖಾಲಿ ಮಾಡಿದ್ದರು. ಆದರೂ ಮಾಯಾವತಿಯವರು ಮಾತ್ರ ಬಂಗಲೆ ಖಾಲಿ ಮಾಡಿರಲಿಲ್ಲ.

ಅದೂ ಅಲ್ಲದೆ, ಸರ್ಕಾರಿ ಬಂಗಲೆಯಲ್ಲೇ ಉಳಿಯುವ ದೃಷ್ಟಿಯಿಂದ ಉಪಾಯ ಮಾಡಿದ್ದ ಮಾಯಾವತಿ, ತಾವು ವಾಸಿಸಿದ್ದ ಸರ್ಕಾರಿ ಬಂಗಲೆಯ ಹೆಸರನ್ನು ಬಿಎಸ್ಪಿ ಸಂಸ್ಥಾಪಕರಾದ ಕಾನ್ಶಿರಾಮ್ ಹೆಸರಲ್ಲಿ, ಕಾನ್ಶಿರಾಂ ಯಾದ್ಗಾರ್ ವಿಶ್ರಾಮ್ ಸ್ಥಳ ಎಂದು ಹೆಸರಿಟ್ಟಿದ್ದಲ್ಲದೆ, ಅದೊಂದು ಸ್ಮಾರಕ ಎಂದು ಕರೆದಿದ್ದರು.

ಆದರೆ ಕೊನೆಗೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ನೋಟಿಸ್ ಗೆ ಮಣಿದಿರುವ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ತಾವು ತಂಗಿದ್ದ 13 ಎ ಮಾಲ್ ಅವೆನ್ಯೂ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಪ್ರಸ್ತುತ ತಮ್ಮ ವಸತಿಯನ್ನು ಮಾಯಾವತಿಯವರು 9 ಮಾಲ್ ಅವೆನ್ಯೂಗೆ ಸ್ಥಳಾಂತರಿಸಿದ್ದಾರೆ. ಅಂತೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ಕ್ರಮದಂತೆ, ಅವಧಿ ಮುಗಿದರೂ ಸರ್ಕಾರಿ ಬಂಗಲೆಯಲ್ಲಿ ತಿಂದುಂಡು ವಾಸವಾಗಿದ್ದ ರಾಜಕಾರಣಿಗಳು ಕಾಲ್ಕೀಳುವಂತಾಗಿದೆ.

 

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search