• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ನೋಟಿಸ್ ಗೆ ಮಣಿದ ಮಾಯಾವತಿ, ಕೊನೆಗೂ ಸರ್ಕಾರಿ ಬಂಗಲೆ ತೊರೆದ ಕುಮಾರಿ

TNN Correspondent Posted On June 3, 2018
0


0
Shares
  • Share On Facebook
  • Tweet It

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಹಲವು ವರ್ಷಗಳವರೆಗೂ ಆಡಳಿತ ನಡೆಸಿದ ಬಳಿಕವೂ, ಅಧಿಕಾರದಿಂದ ಇಳಿದ ಬಳಿಕವೂ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆಯಲ್ಲಿ ಆರಾಮವಾಗಿ ವಾಸಿಯಾಗಿದ್ದರು. ಆದರೆ ವ್ಯಕ್ತಿಯೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ್ದ ಸುಪ್ರೀಂ ಕೋರ್ಟ್ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಜಕಾರಣಿಗಳಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟೇ ಗಂಟು ಮೂಟೆ ಕಟ್ಟುವಂತೆ ಆದೇಶ ನೀಡಿದ್ದರೂ, ಮುಲಾಯಂ ಸಿಂಗ್ ಯಾದವ್, ಮಾಯಾವತಿ ಸೇರಿ ಹಲವು ರಾಜಕಾರಣಿಗಳು ಇನ್ನೂ ಸರ್ಕಾರಿ ಬಂಗಲೆಯಲ್ಲೇ ವಾಸ ಮಾಡಿದ್ದರು. ಆದರೆ ಯೋಗಿ ಆದಿತ್ಯನಾಥರು ಸುಮ್ಮನಿರಬೇಕಲ್ಲ, ಯಾರು ಅಧಿಕಾರವಿಲ್ಲದಿದ್ದರೂ ಸರ್ಕಾರಿ ಬಂಗಲೆಯಲ್ಲಿದ್ದಾರೋ, ಅವರೆಲ್ಲ ಕೂಡಲೇ ಗಂಟು ಮೂಟೆ ಕಟ್ಟಬೇಕು ಎಂದು ನೋಟಿಸ್ ಕಳುಹಿಸಿದ್ದರು.

ಹೀಗೆ ಯೋಗಿ ಆದಿತ್ಯನಾಥರು ಕಳುಹಿಸಿದ ನೋಟಿಸ್ ನಂತೆ ಅನಿವಾರ್ಯವಾಗಿ ಮುಲಾಯಂ ಸಿಂಗ್ ಸೇರಿ ಹಲವು ರಾಜಕಾರಣಿಗಳು ಸರ್ಕಾರಿ ಬಂಗಲೆ ಖಾಲಿ ಮಾಡಿದ್ದರು. ಆದರೂ ಮಾಯಾವತಿಯವರು ಮಾತ್ರ ಬಂಗಲೆ ಖಾಲಿ ಮಾಡಿರಲಿಲ್ಲ.

ಅದೂ ಅಲ್ಲದೆ, ಸರ್ಕಾರಿ ಬಂಗಲೆಯಲ್ಲೇ ಉಳಿಯುವ ದೃಷ್ಟಿಯಿಂದ ಉಪಾಯ ಮಾಡಿದ್ದ ಮಾಯಾವತಿ, ತಾವು ವಾಸಿಸಿದ್ದ ಸರ್ಕಾರಿ ಬಂಗಲೆಯ ಹೆಸರನ್ನು ಬಿಎಸ್ಪಿ ಸಂಸ್ಥಾಪಕರಾದ ಕಾನ್ಶಿರಾಮ್ ಹೆಸರಲ್ಲಿ, ಕಾನ್ಶಿರಾಂ ಯಾದ್ಗಾರ್ ವಿಶ್ರಾಮ್ ಸ್ಥಳ ಎಂದು ಹೆಸರಿಟ್ಟಿದ್ದಲ್ಲದೆ, ಅದೊಂದು ಸ್ಮಾರಕ ಎಂದು ಕರೆದಿದ್ದರು.

ಆದರೆ ಕೊನೆಗೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ನೋಟಿಸ್ ಗೆ ಮಣಿದಿರುವ ಮಾಜಿ ಮುಖ್ಯಮಂತ್ರಿ ಮಾಯಾವತಿಯವರು ತಾವು ತಂಗಿದ್ದ 13 ಎ ಮಾಲ್ ಅವೆನ್ಯೂ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಪ್ರಸ್ತುತ ತಮ್ಮ ವಸತಿಯನ್ನು ಮಾಯಾವತಿಯವರು 9 ಮಾಲ್ ಅವೆನ್ಯೂಗೆ ಸ್ಥಳಾಂತರಿಸಿದ್ದಾರೆ. ಅಂತೂ ಸುಪ್ರೀಂ ಕೋರ್ಟ್ ಆದೇಶ ಹಾಗೂ ಉತ್ತರ ಪ್ರದೇಶ ಸರ್ಕಾರದ ಕ್ರಮದಂತೆ, ಅವಧಿ ಮುಗಿದರೂ ಸರ್ಕಾರಿ ಬಂಗಲೆಯಲ್ಲಿ ತಿಂದುಂಡು ವಾಸವಾಗಿದ್ದ ರಾಜಕಾರಣಿಗಳು ಕಾಲ್ಕೀಳುವಂತಾಗಿದೆ.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search