• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ: ಎಲ್ಲಿದ್ದಾರೇ ಬುದ್ಧಿಜೀವಿಗಳು?

TNN Correspondent Posted On June 3, 2018


  • Share On Facebook
  • Tweet It

ಕೊಲ್ಕತ್ತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದ ಪಶ್ಚಿಮ ಬಂಗಾಳದಲ್ಲಿ ವಿರೋಧ ಪಕ್ಷಗಳ ಕಾರ್ಯಕರ್ತರ ಕೊಲೆಗಳು ನಿರಂತರವಾಗಿದ್ದು, 15 ದಿನದಲ್ಲೇ ಬಿಜೆಪಿಯ ಇಬ್ಬರು ಕಾರ್ಯಕರ್ತರ ಕೊಲೆಯಾಗಿದೆ. ಶನಿವಾರ ಬಲಾರಾಮಪುರದ ಪುರಲಿಯಾ ಪ್ರದೇಶದ ದಾಭಾ ಗ್ರಾಮದಲ್ಲಿ  ನೇತು ಹಾಕಿದ ಸ್ಥಿತಿಯಲ್ಲಿ 32 ವರ್ಷದ ದುಲಾಲ್ ಕುಮಾರ ಎಂಬ ಬಿಜೆಪಿ ಕಾರ್ಯಕರ್ತನ ಕಾರ್ಯಕರ್ತನ ದೇಹ ದೊರೆತಿದೆ.

ಕೊಲೆಯ ಹಿಂದೆ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ದುಲಾಲ್ ಕೊಲೆಗೆ ಮತ್ತು ಇತ್ತೀಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ತ್ರಿಲೋಚನ ಮಹಾತೊ ಕೊಲೆಯಲ್ಲಿ ಸಾಮ್ಯತೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಕೈಲಾಶ ವಿಜಯವರ್ಗಿಯ ಟ್ವೀಟರ್ ನಲ್ಲಿ ಆರೋಪಿಸಿದ್ದಾರೆ.

ತ್ರಿಲೋಚನ ಮಹಾತೋ ದೇಹವನ್ನು ನೇತು ಹಾಕಿ. ಅದರ ಹಿಂದೆ ಬಿಜೆಪಿಗೆ ಬೆಂಬಲ ನೀಡಿದರೇ ಕೊಲೆಯೇ ಗತಿ ಎಂಬರ್ಥದಲ್ಲಿ ಸಂದೇಶವನ್ನು ಬರೆದಿದ್ದ ಚೀಟಿ ದೊರೆತ್ತಿತ್ತು. ಇದೀಗ ದುಲಾಲ್ ಕೊಲೆಯಲ್ಲೂ ರಾಜಕೀಯ ದ್ವೇಷವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. ತೃಣಮೂಲ ಕಾಂಗ್ರೆಸ್ ನ ರೌಡಿಗಳು ರಾಜಕೀಯ ವಿರೋಧಿಗಳ ಕೊಲೆಗಳನ್ನು ಮಾಡಿಸುತ್ತಿದ್ದಾರೆ.

ಕೊಲೆಯನ್ನು ವಿರೋಧಿಸಿ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದು, ತೃಣಮೂಲ ಕಾಂಗ್ರೆಸ್ ಏಳಿಗೆಯನ್ನು ಸಹಿಸದೇ ಬಿಜೆಪಿ ಕಾರ್ಯಕರ್ತರನ್ನು ಕೊಲೆ ಮಾಡಿಸುತ್ತಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ತಾಕತ್ತು ಬಿಜೆಪಿಗಿದೆ. ಜನರೇ ತೃಣಮೂಲ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಪಶ್ಚಿಮ ಬಂಗಾಳ ಮುಖ್ಯಸ್ಥ ದಿಲೀಪ್ ಘೋಷ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಮಧ್ಯೆ ತೀವ್ರ ಹಣಾಹಣಿ ನಡೆದಿತ್ತು. 839 ಸ್ಥಾನ ಟಿಎಂಸಿ ಮತ್ತು 645 ಬಿಜೆಪಿ ಗೆಲುವು ಸಾಧಿಸಿತ್ತು. ಅಲ್ಲದೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಟಿಎಂಸಿ 26 ಮತ್ತು ಬಿಜೆಪಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ ತೃಣಮೂಲ ಕಾಂಗ್ರೆಸ್ ಗೆ ತಕ್ಕ ಸೆಡ್ಡು ಹೊಡೆಯುತ್ತಿರುವುದು ಟಿಎಂಸಿ ಮುಖಂಡರಿಗೆ ಸಹಿಸಲು ಆಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search