• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ಯಾಲಿಫೋರ್ನಿಯಾದಲ್ಲಿ ಭಾರತದ ಧ್ವನಿ: ಗವರ್ನರ್ ಸ್ಥಾನಕ್ಕೆ ಭಾರತೀಯ ಮೂಲದ ಶುಭಂ ಗೋಯೆಲ್ ಸ್ಪರ್ಧೆ

TNN Correspondent Posted On June 3, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವಾಧ್ಯಂತ ಭಾರತೀಯರು ಎಲ್ಲ ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯಗಳ ಮೂಲಕ ಉನ್ನತ ಸ್ಥಾನಕ್ಕೇರುತ್ತಿದ್ದಾರೆ. ವಿಶ್ವದ ನಾನಾ ದೇಶಗಳಲ್ಲಿ ವೈದ್ಯರು, ಎಂಜಿನಿಯರ್ ಗಳಷ್ಟೇ ಅಲ್ಲ ರಾಜಕಾರಣಿಗಳಾಗಿ ವಿದೇಶದಲ್ಲಿ ಭಾರತೀಯ ಮೂಲದವರು ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ. ಇದೀಗ 22 ವರ್ಷದ ಭಾರತೀಯ ಯುವಕ ಶುಭಂ ಗೋಯೆಲ್ ಕ್ಯಾಲಿಫೋರ್ನಿಯಾ ಗವರ್ನರ್ ಸ್ಥಾನಕ್ಕೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದಾರೆ.

ಉತ್ತರ ಪ್ರದೇಶ ಮೂಲದ ಹಾಗೂ ಅಮೆರಿಕದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಶುಭಂ ಗೋಯೆಲ್ ವಿಭಿನ್ನ ಪ್ರಚಾರ ತಂತ್ರಗಳಿಂದ ಅಮೆರಿಕನ್ನರ ಗಮನ ಸೆಳೆಯುತ್ತಿದ್ದಾರೆ. ಮೆಗಾಫೋನ್ ಹಿಡಿದುಕೊಂಡು ರಸ್ತೆಗೆ ಹೋಗುವ ಶುಭಂ ಭವಿಷ್ಯದ ಯೋಜನೆ ವಿಶೇಷವಾಗಿ ವರ್ಚುವಲ್ ರಿಯಾಲಿಟಿ ತಂತ್ರಜ್ಞಾನದ ಬಳಕೆ ಕುರಿತು ಜನರಿಗೆ ಮನದಟ್ಟು ಮಾಡುತ್ತಿದ್ದಾರೆ. ಈ ತಂತ್ರಜ್ಞಾನ ವಿಶ್ವವನ್ನೇ ಬದಲಾಯಿಸಲಿದೆ. ಕ್ಯಾಲಿಫೋರ್ನಿಯಾದ ಶೈಕ್ಷಣಿಕ ತೊಂದರೆಗಳನ್ನು ನಿವಾರಿಸಬಹುದು ಎಂದು ತಿಳಿಸಿದ್ದಾರೆ.

ಮೀರತ್ ಮೂಲದ ಶುಭಂ ತಾಯಿ ಕರುಣಾ ಗೋಯೆಲ್ ಹಾಗೂ ತಂದೆ ವಿಪುಲ್ ಗೋಯೆಲ್   ಐಟಿ ಪದವೀಧರರಾಗಿದ್ದಾರೆ. ತಮ್ಮದೇ  ಸಾಫ್ಟ್‌ವೇರ್ ಕಂಪನಿ ಆರಂಭಿಸಿ, ಅಲ್ಲಿಯೇ ನೆಲೆಯೂರಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅರ್ಥಶಾಸ್ತ್ರ ಹಾಗೂ ಸಿನಿಮಾ ಕುರಿತು ಓದಿರುವ ಶುಭಂ ಗೋಯೆಲ್, ಕಳೆದ ವರ್ಷವೇ ಪದವಿ ಪೂರ್ಣಗೊಳಿಸಿದ್ದಾರೆ. 2017ರ  ಅಕ್ಬೋಬರ್‌ನಿಂದ ಕೆಲಸ ಮಾಡಲು ಆರಂಭಿಸಿರುವ 22 ವರ್ಷದ ಯುವಕ ಕ್ಯಾಲಿಫೋರ್ನಿಯಾದ ಡ್ಯಾನ್‌ವಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ನಾನು ಕ್ಯಾಲಿಫೋರ್ನಿಯಾದಲ್ಲೇ ಹುಟ್ಟಿ ಬೆಳೆದಿದ್ದೇನೆ. ವರ್ಚುವಲ್ ರಿಯಾಲಿಟಿ ತಂತ್ರಜ್ಙಾನ ಪ್ರಚಾರಕ್ಕೆ
ಬಳಸುತ್ತಿರುವವರ ಪೈಕಿ ನಾನೇ ಮೊದಲು ಎಂದು ಹೇಳಿಕೊಂಡಿದ್ದಾರೆ.
ವರ್ಚುವಲ್ ರಿಯಾಲಿಟಿಗೆ ಸಂಬಂಧಿಸಿದ ಕಂಪನಿಯಲ್ಲೇ ಶುಭಂ ಗೋಯೆಲ್ ಕೆಲಸ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಸ್ವತಂತ್ರ ಧ್ವನಿಗಳ ಅಗತ್ಯವಿದೆ. ನಾನು ಯಾವುದೇ ಪಕ್ಷದ ಪರ ನಿಲುವು ಹೊಂದಿಲ್ಲ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಹಣದ ಬದಲು ತಂತ್ರಜ್ಙಾನಕ್ಕೆ ಪ್ರಾಮುಖ್ಯತೆ ನೀಡಬೇಕಿದೆ ಎಂದು ಪ್ರಚಾರ ಆರಂಭಿಸಿದ್ದಾರೆ.

ಭಾರತೀಯ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರೆಯಲು ಧ್ವನಿ ಎತ್ತುತ್ತೇನೆ. ಯುವಕರು ಹಣ ಹಾಗೂ ಪ್ರಖ್ಯಾತಿಗಿಂತ ಸಮಾಜದಲ್ಲಿ ಬದಲಾವಣೆ ತರಲು ಮುಂದಾಗಬೇಕು. ಅವರನ್ನು ಪ್ರೋತ್ಸಾಹಿಸಲು ತಾನು ಕ್ಯಾಲಿಫೋರ್ನಿಯಾ ಗವರ್ನರ್ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search