• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕ್ಯಾಲಿಫೋರ್ನಿಯಾದಲ್ಲಿ ಭಾರತದ ಧ್ವನಿ: ಗವರ್ನರ್ ಸ್ಥಾನಕ್ಕೆ ಭಾರತೀಯ ಮೂಲದ ಶುಭಂ ಗೋಯೆಲ್ ಸ್ಪರ್ಧೆ

TNN Correspondent Posted On June 3, 2018


  • Share On Facebook
  • Tweet It

ದೆಹಲಿ: ವಿಶ್ವಾಧ್ಯಂತ ಭಾರತೀಯರು ಎಲ್ಲ ಕ್ಷೇತ್ರದಲ್ಲೂ ತಮ್ಮ ಸಾಮರ್ಥ್ಯಗಳ ಮೂಲಕ ಉನ್ನತ ಸ್ಥಾನಕ್ಕೇರುತ್ತಿದ್ದಾರೆ. ವಿಶ್ವದ ನಾನಾ ದೇಶಗಳಲ್ಲಿ ವೈದ್ಯರು, ಎಂಜಿನಿಯರ್ ಗಳಷ್ಟೇ ಅಲ್ಲ ರಾಜಕಾರಣಿಗಳಾಗಿ ವಿದೇಶದಲ್ಲಿ ಭಾರತೀಯ ಮೂಲದವರು ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ. ಇದೀಗ 22 ವರ್ಷದ ಭಾರತೀಯ ಯುವಕ ಶುಭಂ ಗೋಯೆಲ್ ಕ್ಯಾಲಿಫೋರ್ನಿಯಾ ಗವರ್ನರ್ ಸ್ಥಾನಕ್ಕೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದಾರೆ.

ಉತ್ತರ ಪ್ರದೇಶ ಮೂಲದ ಹಾಗೂ ಅಮೆರಿಕದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಶುಭಂ ಗೋಯೆಲ್ ವಿಭಿನ್ನ ಪ್ರಚಾರ ತಂತ್ರಗಳಿಂದ ಅಮೆರಿಕನ್ನರ ಗಮನ ಸೆಳೆಯುತ್ತಿದ್ದಾರೆ. ಮೆಗಾಫೋನ್ ಹಿಡಿದುಕೊಂಡು ರಸ್ತೆಗೆ ಹೋಗುವ ಶುಭಂ ಭವಿಷ್ಯದ ಯೋಜನೆ ವಿಶೇಷವಾಗಿ ವರ್ಚುವಲ್ ರಿಯಾಲಿಟಿ ತಂತ್ರಜ್ಞಾನದ ಬಳಕೆ ಕುರಿತು ಜನರಿಗೆ ಮನದಟ್ಟು ಮಾಡುತ್ತಿದ್ದಾರೆ. ಈ ತಂತ್ರಜ್ಞಾನ ವಿಶ್ವವನ್ನೇ ಬದಲಾಯಿಸಲಿದೆ. ಕ್ಯಾಲಿಫೋರ್ನಿಯಾದ ಶೈಕ್ಷಣಿಕ ತೊಂದರೆಗಳನ್ನು ನಿವಾರಿಸಬಹುದು ಎಂದು ತಿಳಿಸಿದ್ದಾರೆ.

ಮೀರತ್ ಮೂಲದ ಶುಭಂ ತಾಯಿ ಕರುಣಾ ಗೋಯೆಲ್ ಹಾಗೂ ತಂದೆ ವಿಪುಲ್ ಗೋಯೆಲ್   ಐಟಿ ಪದವೀಧರರಾಗಿದ್ದಾರೆ. ತಮ್ಮದೇ  ಸಾಫ್ಟ್‌ವೇರ್ ಕಂಪನಿ ಆರಂಭಿಸಿ, ಅಲ್ಲಿಯೇ ನೆಲೆಯೂರಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅರ್ಥಶಾಸ್ತ್ರ ಹಾಗೂ ಸಿನಿಮಾ ಕುರಿತು ಓದಿರುವ ಶುಭಂ ಗೋಯೆಲ್, ಕಳೆದ ವರ್ಷವೇ ಪದವಿ ಪೂರ್ಣಗೊಳಿಸಿದ್ದಾರೆ. 2017ರ  ಅಕ್ಬೋಬರ್‌ನಿಂದ ಕೆಲಸ ಮಾಡಲು ಆರಂಭಿಸಿರುವ 22 ವರ್ಷದ ಯುವಕ ಕ್ಯಾಲಿಫೋರ್ನಿಯಾದ ಡ್ಯಾನ್‌ವಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ನಾನು ಕ್ಯಾಲಿಫೋರ್ನಿಯಾದಲ್ಲೇ ಹುಟ್ಟಿ ಬೆಳೆದಿದ್ದೇನೆ. ವರ್ಚುವಲ್ ರಿಯಾಲಿಟಿ ತಂತ್ರಜ್ಙಾನ ಪ್ರಚಾರಕ್ಕೆ
ಬಳಸುತ್ತಿರುವವರ ಪೈಕಿ ನಾನೇ ಮೊದಲು ಎಂದು ಹೇಳಿಕೊಂಡಿದ್ದಾರೆ.
ವರ್ಚುವಲ್ ರಿಯಾಲಿಟಿಗೆ ಸಂಬಂಧಿಸಿದ ಕಂಪನಿಯಲ್ಲೇ ಶುಭಂ ಗೋಯೆಲ್ ಕೆಲಸ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಸ್ವತಂತ್ರ ಧ್ವನಿಗಳ ಅಗತ್ಯವಿದೆ. ನಾನು ಯಾವುದೇ ಪಕ್ಷದ ಪರ ನಿಲುವು ಹೊಂದಿಲ್ಲ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಹಣದ ಬದಲು ತಂತ್ರಜ್ಙಾನಕ್ಕೆ ಪ್ರಾಮುಖ್ಯತೆ ನೀಡಬೇಕಿದೆ ಎಂದು ಪ್ರಚಾರ ಆರಂಭಿಸಿದ್ದಾರೆ.

ಭಾರತೀಯ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರೆಯಲು ಧ್ವನಿ ಎತ್ತುತ್ತೇನೆ. ಯುವಕರು ಹಣ ಹಾಗೂ ಪ್ರಖ್ಯಾತಿಗಿಂತ ಸಮಾಜದಲ್ಲಿ ಬದಲಾವಣೆ ತರಲು ಮುಂದಾಗಬೇಕು. ಅವರನ್ನು ಪ್ರೋತ್ಸಾಹಿಸಲು ತಾನು ಕ್ಯಾಲಿಫೋರ್ನಿಯಾ ಗವರ್ನರ್ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search