• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ನುಸುಳದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಏನು ಮಾಡಿದೆ ಗೊತ್ತಾ?

TNN Correspondent Posted On June 3, 2018
0


0
Shares
  • Share On Facebook
  • Tweet It

ಮ್ಯಾನ್ಮಾರ್ ದೇಶಕ್ಕೇ ರೋಹಿಂಗ್ಯಾ ಮುಸ್ಲಿಮರು ಕಂಟಕವಾಗಿದ್ದಾರೆ. ದೇಶದ ಭದ್ರತೆಗೇ ಶಾಪವಾಗಿದ್ದಾರೆ. ಬಾಂಗ್ಲಾದೇಶ ಸಹ ರೋಹಿಂಗ್ಯಾಗಳ ಸಮಸ್ಯೆ ನಿವಾರಣೆಗೆ ಭಾರತದ ನೆರವು ಕೋರಿದ್ದಾರೆ. ಆದರೆ ಭಾರತದಲ್ಲಿರುವ ಪ್ರಗತಿಪರರು, ಬುದ್ಧಿಜೀವಿಗಳು, ಅಸಾದುದ್ದೀನ್ ಓವೈಸಿಯಂತಹವರು ಅವರನ್ನು ಸಾಕಬೇಕು ಎನ್ನುತ್ತಾರೆ.

ಆದರೆ ನರೇಂದ್ರ ಮೋದಿ ಸರ್ಕಾರ ದೇಶಕ್ಕೆ ಕಂಟಕವಾಗುವ ಯಾರನ್ನೂ ಬಿಡುವುದಿಲ್ಲ. ಹಾಗಾಗಿಯೇ ಕೇಂದ್ರ ಸರ್ಕಾರ ಭಾರತದಲ್ಲಿರುವ ರೋಹಿಂಗ್ಯಾ ಮುಸ್ಲಿಮರನ್ನು ಹೊರಹಾಕಲು ಚಿಂತನೆ ನಡೆಸಿದೆ ಹಾಗೂ ಹೊರಗಿನಿಂದ ಇವರು ದೇಶದೊಳಕ್ಕೆ ಬಾರದಂತೆ ನೋಡಿಕೊಳ್ಳಲು ಮುಂದಾಗಿದೆ.

ಈಗ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ಬಾರದಿರದಂತೆ ತಡೆಯಲು ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು, ಜಮ್ಮು-ಕಾಶ್ಮೀರ ಸೇರಿ ದೇಶದ ಎಲ್ಲ ರಾಜ್ಯಗಳು ತಮ್ಮ ಗಡಿಯಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ ಎಂಬುದರ ಕುರಿತು ವರದಿ ನೀಡುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಕೇಂದ್ರ ಗೃಹ ಸಚಿವಾಲಯ ಈ ಕುರಿತು ದೇಶದ ಎಲ್ಲ ರಾಜ್ಯ ಸರ್ಕಾರಗಳಿಗೂ ಪತ್ರ ಬರೆದಿದ್ದು, ಅದರಲ್ಲಿ ರೋಹಿಂಗ್ಯಾ ಮುಸ್ಲಿಮರು ಇಡೀ ದೇಶಕ್ಕೇ ಕಂಟಕವಾಗುತ್ತಿದ್ದಾರೆ. ಅವರು ದೇಶದ ಭದ್ರತೆಗೂ ಆತಂಕವಾಗಿ ಪರಿಣಮಿಸಿದ್ದಾರೆ. ಹಾಗಾಗಿ ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಅಲ್ಲದೆ ಇದುವರೆಗೆ ರೋಹಿಂಗ್ಯಾ ಮುಸ್ಲಿಮರ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಇನ್ನು ಮುಂದೆ ತೆಗೆದುಕೊಳ್ಳುವ ಕ್ರಮಗಳಿಂದಾದ ಬದಲಾವಣೆ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದ ರಕ್ಷಣೆಗೆ ಈ ಕ್ರಮ ಕೈಗೊಂಡಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search