• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಆದಿತ್ಯನಾಥರ ಸ್ಪೀಡ್ ಅಂದರೇನೆ ಅದು, ಮಳೆ ಸಂತ್ರಸ್ತರಿಗೆ ಪರಿಹಾರ ನೀಡಲು ಅದೇಶ

TNN Correspondent Posted On June 3, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಸ್ಪೀಡ್ ಅಂದರೇನೆ ಅದು. ಅವರು ಮುಖ್ಯಮಂತ್ರಿಯಾದ ಕೆಲವೇ ತಿಂಗಳಲ್ಲೇ ರೈತರ ಸಾಲ ಮಾಡಿದರು. ಅಕ್ರಮವಾಗಿ ರಾಜ್ಯದಲ್ಲಿ ಮನೆ ಮಾಡಿದ್ದ ಕಸಾಯಿಖಾನೆಗಳನ್ನು ತೆರವುಗೊಳಿಸಿದರು. ರಸ್ತೆ ಬದಿ ಸೇರಿ ಹಲವೆಡೆ ಹೆಣ್ಣು ಮಕ್ಕಳಿಗೆ ತೊಂದರೆ ಕೊಡುತ್ತಿದ್ದವರಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿ ಪಾಠ ಕಲಿಸಿದರು.

ಅಷ್ಟೇ ಅಲ್ಲ, ಇಡೀ ರಾಜ್ಯಾದ್ಯಂತ ಆವರಿಸಿದ್ದ ಅಪರಾಧವನ್ನು ತಡೆಗಟ್ಟದ್ದು ಯೋಗಿ ಆದಿತ್ಯನಾಥರ ದಿಟ್ಟ ನಿರ್ಧಾರ. ಪ್ರಸ್ತುತ ಯಾವುದೇ ರಾಜ್ಯದಲ್ಲಿ ಅಪರಾಧಿಗಳೇ ಪೊಲೀಸ್ ಠಾಣೆಗೆ ಬಂದು ನಮ್ಮನ್ನು ಅರೆಸ್ಟ್ ಮಾಡಿ, ನಾವು ಜೈಲಿನಲ್ಲೇ ಇರುತ್ತೇವೆ, ಎನ್ ಕೌಂಟರ್ ಮಾಡಿ ಬಿಸಾಕಬೇಡಿ ಎಂದು ಗೋಗರೆಯುತ್ತಿದ್ದರೆ ಅದು ಉತ್ತರ ಪ್ರದೇಶದಲ್ಲಿ ಮಾತ್ರ. ಅರದು ಯೋಗಿ ಆದಿತ್ಯನಾಥರ ನಿರ್ಧಾರದಿಂದ ಹಾಗೂ ಪೊಲೀಸ್ ಇಲಾಖೆಗೆ ನೀಡಿರುವ ಸ್ವಾತಂತ್ರ್ಯದಿಂದ.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ಶೀಘ್ರ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ಮೇ 29ರಿಂದ ಉತ್ತರ ಪ್ರದೇಶದಲ್ಲಿ ಮೈಕುನ್ ಚಂಡಮಾರುತ ಹಾಗೂ ಭಾರಿ ಮಳೆಗೆ ಇಡೀ ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು 15 ಜನ ಮೃತಪಟ್ಟಿದ್ದರು. ಅಪಾರ ಆಸ್ತಿಪಾಸ್ತಿ ಹಾನಿಯಾಗಿತ್ತು. 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

ಆದರೆ ಮಳೆಯಿಂದ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡ ಸಂತ್ರಸ್ತರ ಕಷ್ಟ ಅರಿತ ಯೋಗಿ ಆದಿತ್ಯನಾಥರು ಈಗ ಅವರಿಗೆಲ್ಲ ಪುನರ್ವಸತಿ ಕಲ್ಪಿಸಲು ಮುಂದಾಗಿದ್ದಾರೆ. ಮೃತಪಟ್ಟವರು, ಗಾಯಗೊಂಡವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ ಹೊಂದಿದವರಿಗೆ ಶೀಘ್ರವೇ ಪರಿಹಾರ ಧನ ವಿತರಿಸಬೇಕು ಎಂದು ಸೂಚಿಸಿದ್ದಾರೆ.

ಯಾವುದೇ ರಾಜ್ಯ ಸರ್ಕಾರ ಒಂದು ನೆರೆ ಹಾವಳಿಯಿಂದ ಎದ್ದು ಬರಲು ಕನಿಷ್ಠ ತಿಂಗಳಾದರೂ ಬೇಕು. ಆದರೆ ಯೋಗಿ ಆದಿತ್ಯನಾಥರ ಸ್ಪೀಡ್ ಅದಲ್ಲ, ಅವರು ನೆರೆ ಬಂದ ಒಂದೇ ವಾರದಲ್ಲಿ ಇಡೀ ರಾಜ್ಯದ ಜನರ ಪರ ನಿಂತಿದ್ದಾರೆ. ದೇಶದಲ್ಲಿ ಇಂತಹ ಮುಖ್ಯಮಂತ್ರಿಗಳ ಸಂತತಿ ಜಾಸ್ತಿಯಾಗಲಿ ಎಂಬುದೇ ನಮ್ಮ ಆಶಯ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search