• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ಸ್ಪೀಡ್ ಅಂದರೇನೆ ಅದು, ಮಳೆ ಸಂತ್ರಸ್ತರಿಗೆ ಪರಿಹಾರ ನೀಡಲು ಅದೇಶ

TNN Correspondent Posted On June 3, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಸ್ಪೀಡ್ ಅಂದರೇನೆ ಅದು. ಅವರು ಮುಖ್ಯಮಂತ್ರಿಯಾದ ಕೆಲವೇ ತಿಂಗಳಲ್ಲೇ ರೈತರ ಸಾಲ ಮಾಡಿದರು. ಅಕ್ರಮವಾಗಿ ರಾಜ್ಯದಲ್ಲಿ ಮನೆ ಮಾಡಿದ್ದ ಕಸಾಯಿಖಾನೆಗಳನ್ನು ತೆರವುಗೊಳಿಸಿದರು. ರಸ್ತೆ ಬದಿ ಸೇರಿ ಹಲವೆಡೆ ಹೆಣ್ಣು ಮಕ್ಕಳಿಗೆ ತೊಂದರೆ ಕೊಡುತ್ತಿದ್ದವರಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿ ಪಾಠ ಕಲಿಸಿದರು.

ಅಷ್ಟೇ ಅಲ್ಲ, ಇಡೀ ರಾಜ್ಯಾದ್ಯಂತ ಆವರಿಸಿದ್ದ ಅಪರಾಧವನ್ನು ತಡೆಗಟ್ಟದ್ದು ಯೋಗಿ ಆದಿತ್ಯನಾಥರ ದಿಟ್ಟ ನಿರ್ಧಾರ. ಪ್ರಸ್ತುತ ಯಾವುದೇ ರಾಜ್ಯದಲ್ಲಿ ಅಪರಾಧಿಗಳೇ ಪೊಲೀಸ್ ಠಾಣೆಗೆ ಬಂದು ನಮ್ಮನ್ನು ಅರೆಸ್ಟ್ ಮಾಡಿ, ನಾವು ಜೈಲಿನಲ್ಲೇ ಇರುತ್ತೇವೆ, ಎನ್ ಕೌಂಟರ್ ಮಾಡಿ ಬಿಸಾಕಬೇಡಿ ಎಂದು ಗೋಗರೆಯುತ್ತಿದ್ದರೆ ಅದು ಉತ್ತರ ಪ್ರದೇಶದಲ್ಲಿ ಮಾತ್ರ. ಅರದು ಯೋಗಿ ಆದಿತ್ಯನಾಥರ ನಿರ್ಧಾರದಿಂದ ಹಾಗೂ ಪೊಲೀಸ್ ಇಲಾಖೆಗೆ ನೀಡಿರುವ ಸ್ವಾತಂತ್ರ್ಯದಿಂದ.

ಇಂತಹ ಯೋಗಿ ಆದಿತ್ಯನಾಥರು ಈಗ ಮತ್ತೊಂದು ಶೀಘ್ರ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ಮೇ 29ರಿಂದ ಉತ್ತರ ಪ್ರದೇಶದಲ್ಲಿ ಮೈಕುನ್ ಚಂಡಮಾರುತ ಹಾಗೂ ಭಾರಿ ಮಳೆಗೆ ಇಡೀ ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು 15 ಜನ ಮೃತಪಟ್ಟಿದ್ದರು. ಅಪಾರ ಆಸ್ತಿಪಾಸ್ತಿ ಹಾನಿಯಾಗಿತ್ತು. 10ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

ಆದರೆ ಮಳೆಯಿಂದ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡ ಸಂತ್ರಸ್ತರ ಕಷ್ಟ ಅರಿತ ಯೋಗಿ ಆದಿತ್ಯನಾಥರು ಈಗ ಅವರಿಗೆಲ್ಲ ಪುನರ್ವಸತಿ ಕಲ್ಪಿಸಲು ಮುಂದಾಗಿದ್ದಾರೆ. ಮೃತಪಟ್ಟವರು, ಗಾಯಗೊಂಡವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ ಹೊಂದಿದವರಿಗೆ ಶೀಘ್ರವೇ ಪರಿಹಾರ ಧನ ವಿತರಿಸಬೇಕು ಎಂದು ಸೂಚಿಸಿದ್ದಾರೆ.

ಯಾವುದೇ ರಾಜ್ಯ ಸರ್ಕಾರ ಒಂದು ನೆರೆ ಹಾವಳಿಯಿಂದ ಎದ್ದು ಬರಲು ಕನಿಷ್ಠ ತಿಂಗಳಾದರೂ ಬೇಕು. ಆದರೆ ಯೋಗಿ ಆದಿತ್ಯನಾಥರ ಸ್ಪೀಡ್ ಅದಲ್ಲ, ಅವರು ನೆರೆ ಬಂದ ಒಂದೇ ವಾರದಲ್ಲಿ ಇಡೀ ರಾಜ್ಯದ ಜನರ ಪರ ನಿಂತಿದ್ದಾರೆ. ದೇಶದಲ್ಲಿ ಇಂತಹ ಮುಖ್ಯಮಂತ್ರಿಗಳ ಸಂತತಿ ಜಾಸ್ತಿಯಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search