• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೂನ್ 20 ರಂದು ಹಸೆಮಣೆ ಏರಬೇಕಿದ್ದ ಯೋಧ, ವೀರ ಮರಣ ಹೊಂದಿ ತ್ರಿವರ್ಣ ಧ್ವಜ ಹೊದ್ದು ಹುತಾತ್ಮನಾದ

TNN Correspondent Posted On June 4, 2018
0


0
Shares
  • Share On Facebook
  • Tweet It

ದೆಹಲಿ: ಯೋಧರು ದೇಶಕ್ಕಾಗಿ ತಮ್ಮ ಜೀವನವನ್ನೆ ಪಣಕ್ಕಿಟ್ಟು ಹೋರಾಡುತ್ತಾರೆ. ತಮ್ಮ ನೂರಾರು ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಗಡಿಯಲ್ಲಿ ವಿರೋಧಿ ರಾಷ್ಟ್ರದೊಂದಿಗೆ ಕಾದಾಟ ನಡೆಸಿ ಜೀವ ನೀಡುತ್ತಾರೆ. ಆದರೆ ಅವರ ಹಲವು ಆಸೆಗಳು ಈಡೇರುವುದಿಲ್ಲ ಎಂಬುದಕ್ಕೆ ಸೋಮವಾರ ಪಾಕಿಸ್ತಾನದ ಗಡಿ ನಿಯಮ ಉಲ್ಲಂಘಿಸಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧ ವಿಜಯ ಪಾಂಡೆ ಜ್ವಲಂತ ನಿದರ್ಶನವಾಗಿದ್ದಾರೆ.

ಪಾಕಿಸ್ತಾನದ ಅಪ್ರಚೋಧಿತ ದಾಳಿಗೆ ಸೋಮವಾರ ಬಲಿಯಾದ ಬಿಎಸ್ ಎಫ್ ಯೋಧ ವಿಜಯ ಪಾಂಡೆ ಮದುವೆ ಜೂನ್ 20 ರಂದು ನಿಶ್ಚಯವಾಗಿತ್ತು. ಜೂನ್ 15 ರಂದು ವಿಜಯ ಪಾಂಡೆ ಅವರ ತಿಲಕ ಕಾರ್ಯಕ್ರಮವಿತ್ತು. ಪಾಕಿಗಳ ಅಟ್ಟಹಾಸ ಅವರನ್ನು ಹಸೆ ಮಣೆ ಏರುವ ಮುನ್ನವೇ ಹುತಾತ್ಮರನ್ನಾಗಿಸಿದೆ. ವಿಜಯ ಹುತಾತ್ಮರಾಗುವ ಮುನ್ನ ಕೆಲವು ದಿನಗಳ ಹಿಂದೆ ವಿಜಯ ಅವರ ತಂದೆ ಕರೆ ಮಾಡಿ ‘ಮದುವೆ ತಯಾರಿ ನಡೆದಿವೆ. ಆಮಂತ್ರಣ ಪತ್ರ ಸಿದ್ಧಪಡಿಸಲಾಗಿದೆ. ಮದುವೆಗೆ ನಾನಾ ಕಾರ್ಯಗಳು ಬಾಕಿ ಇವೆ. ಬೇಗ ಬಾ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ ಎಲ್ಲವೂ ಸರಿಯಾಗಲಿದೆ. ಶೀಘ್ರದಲ್ಲಿ ಮನೆಗೆ ಬರಲಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ರಜೆಗೆ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಫತೇಪುರದ ಸಾಠಿಗಾಂವ್ ನ ವಿಜಯ ಪಾಂಡೆ ವೀರ ಮರಣ ಹೊಂದಿರುವುದಕ್ಕೆ ಇದೀಗ ಇಡೀ ಗ್ರಾಮ ಶೋಕತಪ್ತವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ದುಖಃ ಇಡೀ ಗ್ರಾಮಕ್ಕೆ ಆವರಿಸಿದೆ. ಅಲ್ಲದೇ ವಿಜಯ ಪಾಂಡೆ ಅವರಿಗೆ ನಿಶ್ಚಿತವಾಗಿದ್ದ ಯುವತಿಯ ಗ್ರಾಮ ಬುಠವಾದಲ್ಲೂ ಮೌನ ಆವರಿಸಿದೆ.  ಜೂನ್ 20ರಂದು ಹಸೆ ಮಣೆ ಏರಬೇಕಿದ್ದ ಯೋಧನಿಗೆ ಜೂನ್ .4ರಂದು ಚಿತೆಗೆ ಅಗ್ನಿ ಸ್ಪರ್ಷ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search