• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೂನ್ 20 ರಂದು ಹಸೆಮಣೆ ಏರಬೇಕಿದ್ದ ಯೋಧ, ವೀರ ಮರಣ ಹೊಂದಿ ತ್ರಿವರ್ಣ ಧ್ವಜ ಹೊದ್ದು ಹುತಾತ್ಮನಾದ

TNN Correspondent Posted On June 4, 2018
0


0
Shares
  • Share On Facebook
  • Tweet It

ದೆಹಲಿ: ಯೋಧರು ದೇಶಕ್ಕಾಗಿ ತಮ್ಮ ಜೀವನವನ್ನೆ ಪಣಕ್ಕಿಟ್ಟು ಹೋರಾಡುತ್ತಾರೆ. ತಮ್ಮ ನೂರಾರು ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಗಡಿಯಲ್ಲಿ ವಿರೋಧಿ ರಾಷ್ಟ್ರದೊಂದಿಗೆ ಕಾದಾಟ ನಡೆಸಿ ಜೀವ ನೀಡುತ್ತಾರೆ. ಆದರೆ ಅವರ ಹಲವು ಆಸೆಗಳು ಈಡೇರುವುದಿಲ್ಲ ಎಂಬುದಕ್ಕೆ ಸೋಮವಾರ ಪಾಕಿಸ್ತಾನದ ಗಡಿ ನಿಯಮ ಉಲ್ಲಂಘಿಸಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧ ವಿಜಯ ಪಾಂಡೆ ಜ್ವಲಂತ ನಿದರ್ಶನವಾಗಿದ್ದಾರೆ.

ಪಾಕಿಸ್ತಾನದ ಅಪ್ರಚೋಧಿತ ದಾಳಿಗೆ ಸೋಮವಾರ ಬಲಿಯಾದ ಬಿಎಸ್ ಎಫ್ ಯೋಧ ವಿಜಯ ಪಾಂಡೆ ಮದುವೆ ಜೂನ್ 20 ರಂದು ನಿಶ್ಚಯವಾಗಿತ್ತು. ಜೂನ್ 15 ರಂದು ವಿಜಯ ಪಾಂಡೆ ಅವರ ತಿಲಕ ಕಾರ್ಯಕ್ರಮವಿತ್ತು. ಪಾಕಿಗಳ ಅಟ್ಟಹಾಸ ಅವರನ್ನು ಹಸೆ ಮಣೆ ಏರುವ ಮುನ್ನವೇ ಹುತಾತ್ಮರನ್ನಾಗಿಸಿದೆ. ವಿಜಯ ಹುತಾತ್ಮರಾಗುವ ಮುನ್ನ ಕೆಲವು ದಿನಗಳ ಹಿಂದೆ ವಿಜಯ ಅವರ ತಂದೆ ಕರೆ ಮಾಡಿ ‘ಮದುವೆ ತಯಾರಿ ನಡೆದಿವೆ. ಆಮಂತ್ರಣ ಪತ್ರ ಸಿದ್ಧಪಡಿಸಲಾಗಿದೆ. ಮದುವೆಗೆ ನಾನಾ ಕಾರ್ಯಗಳು ಬಾಕಿ ಇವೆ. ಬೇಗ ಬಾ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ ಎಲ್ಲವೂ ಸರಿಯಾಗಲಿದೆ. ಶೀಘ್ರದಲ್ಲಿ ಮನೆಗೆ ಬರಲಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ರಜೆಗೆ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಫತೇಪುರದ ಸಾಠಿಗಾಂವ್ ನ ವಿಜಯ ಪಾಂಡೆ ವೀರ ಮರಣ ಹೊಂದಿರುವುದಕ್ಕೆ ಇದೀಗ ಇಡೀ ಗ್ರಾಮ ಶೋಕತಪ್ತವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ದುಖಃ ಇಡೀ ಗ್ರಾಮಕ್ಕೆ ಆವರಿಸಿದೆ. ಅಲ್ಲದೇ ವಿಜಯ ಪಾಂಡೆ ಅವರಿಗೆ ನಿಶ್ಚಿತವಾಗಿದ್ದ ಯುವತಿಯ ಗ್ರಾಮ ಬುಠವಾದಲ್ಲೂ ಮೌನ ಆವರಿಸಿದೆ.  ಜೂನ್ 20ರಂದು ಹಸೆ ಮಣೆ ಏರಬೇಕಿದ್ದ ಯೋಧನಿಗೆ ಜೂನ್ .4ರಂದು ಚಿತೆಗೆ ಅಗ್ನಿ ಸ್ಪರ್ಷ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search