• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೂನ್ 20 ರಂದು ಹಸೆಮಣೆ ಏರಬೇಕಿದ್ದ ಯೋಧ, ವೀರ ಮರಣ ಹೊಂದಿ ತ್ರಿವರ್ಣ ಧ್ವಜ ಹೊದ್ದು ಹುತಾತ್ಮನಾದ

TNN Correspondent Posted On June 4, 2018


  • Share On Facebook
  • Tweet It

ದೆಹಲಿ: ಯೋಧರು ದೇಶಕ್ಕಾಗಿ ತಮ್ಮ ಜೀವನವನ್ನೆ ಪಣಕ್ಕಿಟ್ಟು ಹೋರಾಡುತ್ತಾರೆ. ತಮ್ಮ ನೂರಾರು ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಗಡಿಯಲ್ಲಿ ವಿರೋಧಿ ರಾಷ್ಟ್ರದೊಂದಿಗೆ ಕಾದಾಟ ನಡೆಸಿ ಜೀವ ನೀಡುತ್ತಾರೆ. ಆದರೆ ಅವರ ಹಲವು ಆಸೆಗಳು ಈಡೇರುವುದಿಲ್ಲ ಎಂಬುದಕ್ಕೆ ಸೋಮವಾರ ಪಾಕಿಸ್ತಾನದ ಗಡಿ ನಿಯಮ ಉಲ್ಲಂಘಿಸಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧ ವಿಜಯ ಪಾಂಡೆ ಜ್ವಲಂತ ನಿದರ್ಶನವಾಗಿದ್ದಾರೆ.

ಪಾಕಿಸ್ತಾನದ ಅಪ್ರಚೋಧಿತ ದಾಳಿಗೆ ಸೋಮವಾರ ಬಲಿಯಾದ ಬಿಎಸ್ ಎಫ್ ಯೋಧ ವಿಜಯ ಪಾಂಡೆ ಮದುವೆ ಜೂನ್ 20 ರಂದು ನಿಶ್ಚಯವಾಗಿತ್ತು. ಜೂನ್ 15 ರಂದು ವಿಜಯ ಪಾಂಡೆ ಅವರ ತಿಲಕ ಕಾರ್ಯಕ್ರಮವಿತ್ತು. ಪಾಕಿಗಳ ಅಟ್ಟಹಾಸ ಅವರನ್ನು ಹಸೆ ಮಣೆ ಏರುವ ಮುನ್ನವೇ ಹುತಾತ್ಮರನ್ನಾಗಿಸಿದೆ. ವಿಜಯ ಹುತಾತ್ಮರಾಗುವ ಮುನ್ನ ಕೆಲವು ದಿನಗಳ ಹಿಂದೆ ವಿಜಯ ಅವರ ತಂದೆ ಕರೆ ಮಾಡಿ ‘ಮದುವೆ ತಯಾರಿ ನಡೆದಿವೆ. ಆಮಂತ್ರಣ ಪತ್ರ ಸಿದ್ಧಪಡಿಸಲಾಗಿದೆ. ಮದುವೆಗೆ ನಾನಾ ಕಾರ್ಯಗಳು ಬಾಕಿ ಇವೆ. ಬೇಗ ಬಾ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ ಎಲ್ಲವೂ ಸರಿಯಾಗಲಿದೆ. ಶೀಘ್ರದಲ್ಲಿ ಮನೆಗೆ ಬರಲಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ರಜೆಗೆ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಫತೇಪುರದ ಸಾಠಿಗಾಂವ್ ನ ವಿಜಯ ಪಾಂಡೆ ವೀರ ಮರಣ ಹೊಂದಿರುವುದಕ್ಕೆ ಇದೀಗ ಇಡೀ ಗ್ರಾಮ ಶೋಕತಪ್ತವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ದುಖಃ ಇಡೀ ಗ್ರಾಮಕ್ಕೆ ಆವರಿಸಿದೆ. ಅಲ್ಲದೇ ವಿಜಯ ಪಾಂಡೆ ಅವರಿಗೆ ನಿಶ್ಚಿತವಾಗಿದ್ದ ಯುವತಿಯ ಗ್ರಾಮ ಬುಠವಾದಲ್ಲೂ ಮೌನ ಆವರಿಸಿದೆ.  ಜೂನ್ 20ರಂದು ಹಸೆ ಮಣೆ ಏರಬೇಕಿದ್ದ ಯೋಧನಿಗೆ ಜೂನ್ .4ರಂದು ಚಿತೆಗೆ ಅಗ್ನಿ ಸ್ಪರ್ಷ ನೀಡಲಾಗಿದೆ.

  • Share On Facebook
  • Tweet It


- Advertisement -


Trending Now
ಹೆಣ್ಣು ಕಾಮದ ಸರಕಲ್ಲ!
Tulunadu News June 7, 2023
ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
Tulunadu News June 6, 2023
Leave A Reply

  • Recent Posts

    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
  • Popular Posts

    • 1
      ಹೆಣ್ಣು ಕಾಮದ ಸರಕಲ್ಲ!
    • 2
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • 3
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 4
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search