• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೂನ್ 20 ರಂದು ಹಸೆಮಣೆ ಏರಬೇಕಿದ್ದ ಯೋಧ, ವೀರ ಮರಣ ಹೊಂದಿ ತ್ರಿವರ್ಣ ಧ್ವಜ ಹೊದ್ದು ಹುತಾತ್ಮನಾದ

TNN Correspondent Posted On June 4, 2018
0


0
Shares
  • Share On Facebook
  • Tweet It

ದೆಹಲಿ: ಯೋಧರು ದೇಶಕ್ಕಾಗಿ ತಮ್ಮ ಜೀವನವನ್ನೆ ಪಣಕ್ಕಿಟ್ಟು ಹೋರಾಡುತ್ತಾರೆ. ತಮ್ಮ ನೂರಾರು ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಗಡಿಯಲ್ಲಿ ವಿರೋಧಿ ರಾಷ್ಟ್ರದೊಂದಿಗೆ ಕಾದಾಟ ನಡೆಸಿ ಜೀವ ನೀಡುತ್ತಾರೆ. ಆದರೆ ಅವರ ಹಲವು ಆಸೆಗಳು ಈಡೇರುವುದಿಲ್ಲ ಎಂಬುದಕ್ಕೆ ಸೋಮವಾರ ಪಾಕಿಸ್ತಾನದ ಗಡಿ ನಿಯಮ ಉಲ್ಲಂಘಿಸಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧ ವಿಜಯ ಪಾಂಡೆ ಜ್ವಲಂತ ನಿದರ್ಶನವಾಗಿದ್ದಾರೆ.

ಪಾಕಿಸ್ತಾನದ ಅಪ್ರಚೋಧಿತ ದಾಳಿಗೆ ಸೋಮವಾರ ಬಲಿಯಾದ ಬಿಎಸ್ ಎಫ್ ಯೋಧ ವಿಜಯ ಪಾಂಡೆ ಮದುವೆ ಜೂನ್ 20 ರಂದು ನಿಶ್ಚಯವಾಗಿತ್ತು. ಜೂನ್ 15 ರಂದು ವಿಜಯ ಪಾಂಡೆ ಅವರ ತಿಲಕ ಕಾರ್ಯಕ್ರಮವಿತ್ತು. ಪಾಕಿಗಳ ಅಟ್ಟಹಾಸ ಅವರನ್ನು ಹಸೆ ಮಣೆ ಏರುವ ಮುನ್ನವೇ ಹುತಾತ್ಮರನ್ನಾಗಿಸಿದೆ. ವಿಜಯ ಹುತಾತ್ಮರಾಗುವ ಮುನ್ನ ಕೆಲವು ದಿನಗಳ ಹಿಂದೆ ವಿಜಯ ಅವರ ತಂದೆ ಕರೆ ಮಾಡಿ ‘ಮದುವೆ ತಯಾರಿ ನಡೆದಿವೆ. ಆಮಂತ್ರಣ ಪತ್ರ ಸಿದ್ಧಪಡಿಸಲಾಗಿದೆ. ಮದುವೆಗೆ ನಾನಾ ಕಾರ್ಯಗಳು ಬಾಕಿ ಇವೆ. ಬೇಗ ಬಾ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ ಎಲ್ಲವೂ ಸರಿಯಾಗಲಿದೆ. ಶೀಘ್ರದಲ್ಲಿ ಮನೆಗೆ ಬರಲಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ರಜೆಗೆ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಫತೇಪುರದ ಸಾಠಿಗಾಂವ್ ನ ವಿಜಯ ಪಾಂಡೆ ವೀರ ಮರಣ ಹೊಂದಿರುವುದಕ್ಕೆ ಇದೀಗ ಇಡೀ ಗ್ರಾಮ ಶೋಕತಪ್ತವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ದುಖಃ ಇಡೀ ಗ್ರಾಮಕ್ಕೆ ಆವರಿಸಿದೆ. ಅಲ್ಲದೇ ವಿಜಯ ಪಾಂಡೆ ಅವರಿಗೆ ನಿಶ್ಚಿತವಾಗಿದ್ದ ಯುವತಿಯ ಗ್ರಾಮ ಬುಠವಾದಲ್ಲೂ ಮೌನ ಆವರಿಸಿದೆ.  ಜೂನ್ 20ರಂದು ಹಸೆ ಮಣೆ ಏರಬೇಕಿದ್ದ ಯೋಧನಿಗೆ ಜೂನ್ .4ರಂದು ಚಿತೆಗೆ ಅಗ್ನಿ ಸ್ಪರ್ಷ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search