• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೂನ್ 20 ರಂದು ಹಸೆಮಣೆ ಏರಬೇಕಿದ್ದ ಯೋಧ, ವೀರ ಮರಣ ಹೊಂದಿ ತ್ರಿವರ್ಣ ಧ್ವಜ ಹೊದ್ದು ಹುತಾತ್ಮನಾದ

TNN Correspondent Posted On June 4, 2018
0


0
Shares
  • Share On Facebook
  • Tweet It

ದೆಹಲಿ: ಯೋಧರು ದೇಶಕ್ಕಾಗಿ ತಮ್ಮ ಜೀವನವನ್ನೆ ಪಣಕ್ಕಿಟ್ಟು ಹೋರಾಡುತ್ತಾರೆ. ತಮ್ಮ ನೂರಾರು ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಗಡಿಯಲ್ಲಿ ವಿರೋಧಿ ರಾಷ್ಟ್ರದೊಂದಿಗೆ ಕಾದಾಟ ನಡೆಸಿ ಜೀವ ನೀಡುತ್ತಾರೆ. ಆದರೆ ಅವರ ಹಲವು ಆಸೆಗಳು ಈಡೇರುವುದಿಲ್ಲ ಎಂಬುದಕ್ಕೆ ಸೋಮವಾರ ಪಾಕಿಸ್ತಾನದ ಗಡಿ ನಿಯಮ ಉಲ್ಲಂಘಿಸಿ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧ ವಿಜಯ ಪಾಂಡೆ ಜ್ವಲಂತ ನಿದರ್ಶನವಾಗಿದ್ದಾರೆ.

ಪಾಕಿಸ್ತಾನದ ಅಪ್ರಚೋಧಿತ ದಾಳಿಗೆ ಸೋಮವಾರ ಬಲಿಯಾದ ಬಿಎಸ್ ಎಫ್ ಯೋಧ ವಿಜಯ ಪಾಂಡೆ ಮದುವೆ ಜೂನ್ 20 ರಂದು ನಿಶ್ಚಯವಾಗಿತ್ತು. ಜೂನ್ 15 ರಂದು ವಿಜಯ ಪಾಂಡೆ ಅವರ ತಿಲಕ ಕಾರ್ಯಕ್ರಮವಿತ್ತು. ಪಾಕಿಗಳ ಅಟ್ಟಹಾಸ ಅವರನ್ನು ಹಸೆ ಮಣೆ ಏರುವ ಮುನ್ನವೇ ಹುತಾತ್ಮರನ್ನಾಗಿಸಿದೆ. ವಿಜಯ ಹುತಾತ್ಮರಾಗುವ ಮುನ್ನ ಕೆಲವು ದಿನಗಳ ಹಿಂದೆ ವಿಜಯ ಅವರ ತಂದೆ ಕರೆ ಮಾಡಿ ‘ಮದುವೆ ತಯಾರಿ ನಡೆದಿವೆ. ಆಮಂತ್ರಣ ಪತ್ರ ಸಿದ್ಧಪಡಿಸಲಾಗಿದೆ. ಮದುವೆಗೆ ನಾನಾ ಕಾರ್ಯಗಳು ಬಾಕಿ ಇವೆ. ಬೇಗ ಬಾ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿಜಯ ಎಲ್ಲವೂ ಸರಿಯಾಗಲಿದೆ. ಶೀಘ್ರದಲ್ಲಿ ಮನೆಗೆ ಬರಲಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ರಜೆಗೆ ಹಿರಿಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಫತೇಪುರದ ಸಾಠಿಗಾಂವ್ ನ ವಿಜಯ ಪಾಂಡೆ ವೀರ ಮರಣ ಹೊಂದಿರುವುದಕ್ಕೆ ಇದೀಗ ಇಡೀ ಗ್ರಾಮ ಶೋಕತಪ್ತವಾಗಿದ್ದು, ಮನೆ ಮಗನನ್ನು ಕಳೆದುಕೊಂಡ ದುಖಃ ಇಡೀ ಗ್ರಾಮಕ್ಕೆ ಆವರಿಸಿದೆ. ಅಲ್ಲದೇ ವಿಜಯ ಪಾಂಡೆ ಅವರಿಗೆ ನಿಶ್ಚಿತವಾಗಿದ್ದ ಯುವತಿಯ ಗ್ರಾಮ ಬುಠವಾದಲ್ಲೂ ಮೌನ ಆವರಿಸಿದೆ.  ಜೂನ್ 20ರಂದು ಹಸೆ ಮಣೆ ಏರಬೇಕಿದ್ದ ಯೋಧನಿಗೆ ಜೂನ್ .4ರಂದು ಚಿತೆಗೆ ಅಗ್ನಿ ಸ್ಪರ್ಷ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search