• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯ ತೆಗಳುವವರೇ ಕೇಳಿ, 4 ವರ್ಷದಲ್ಲಿ ಅಲ್ಪಸಂಖ್ಯಾತರಿಗೆ ನೀಡುವ ಅನುದಾನ ಶೇ.62ರಷ್ಟು ಹೆಚ್ಚಿಸಲಾಗಿದೆ!

TNN Correspondent Posted On June 5, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೆ ಮುಸ್ಲಿಂ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಎನ್ನುವವರು ತುಂಬ ಜನರಿದ್ದಾರೆ. ಅಲ್ಪಸಂಖ್ಯಾತರನ್ನು ಗುತ್ತಿಗೆ ಪಡೆದವರಂತೆ ಆಡುವ ಕಾಂಗ್ರೆಸ್ ಮೋದಿ ಅವರನ್ನು ತೆಗಳಲು ಇದೊಂದೇ ಅಸ್ತ್ರವನ್ನೇ ಬಳಸುತ್ತದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಹಾಗಲ್ಲ. ಸರ್ವ ಜನಾಂಗದವರು, ಸರ್ವ ಸಮುದಾಯದವರನ್ನು ಒಗ್ಗೂಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಹಲವು ಯೋಜನೆ, ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದನ್ನು ಮೋದಿ ಅವರನ್ನು ತೆಗಳುವ ದೃಷ್ಟಿಯಿಂದ, ಅಲ್ಪಸಂಖ್ಯಾತರ ಮತಪಡೆದೂ ಅವರನ್ನು ಅಭಿವೃದ್ಧಿಗೊಳಿಸದ ಕಾಂಗ್ರೆಸ್ಸಿಗರು ಸುಖಾಸುಮ್ಮನೆ ತೆಗಳುತ್ತಾರೆ.

ಆದರೆ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಅಲ್ಪಸಂಖ್ಯಾತರ ಏಳಿಗೆಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ಅಷ್ಟೇ ಅಲ್ಲ, ಇದುವರೆಗೆ ಅಲ್ಪಸಂಖ್ಯಾತರ ಏಳಿಗೆಗೆ ನೀಡುತ್ತಿದ್ದ ಅನುದಾನವನ್ನು ಶೇ.62ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ಟಿನಲ್ಲಿ ಇದುವರೆಗೂ ಅಲ್ಪಸಂಖ್ಯಾತರ ಏಳಿಗೆಗೆ ಮೀಸಲಿಡಲಾಗದಂತಹ ಹಣ, ಎಂದರೆ ಕೇಂದ್ರ ಸರ್ಕಾರ ಬರೋಬ್ಬರಿ 4,700 ಕೋಟಿ ರೂಪಾಯಿಗಳನ್ನು ಮೀಸಲಿಡುವ ಮೂಲಕ ಇತಿಹಾಸ ಬರೆಯಿತು.

ಇದುವರೆಗೂ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ ಮೀಸಲಿಟ್ಟರಿಲಿಲ್ಲ. ಈ ಹಣದಲ್ಲಿ ಪ್ರಸ್ತುತ 45 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ಕೌಶಲ ಅಭಿವೃದ್ಧಿಗೊಳಿಸುತ್ತಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮ್ ಮಹಿಳೆಯರು ಪುರುಷರ ಸಹಾಯವಿಲ್ಲದೆ ಹಜ್ ಯಾತ್ರೆ, ಅಂದರೆ ಸ್ವತಂತ್ರವಾಗಿ ಹಜ್ ಯಾತ್ರೆ ಕೈಗೊಳ್ಳಲು ಅನುಕೂಲ ಮಾಡಿದ್ದಾರೆ. ಆ ಮೂಲಕ ಮಹಿಳೆಯರೂ ಸ್ವಾವಲಂಬಿಯಾಗಿ ಯಾತ್ರೆ ಕೈಗೊಳ್ಳುವ ಅವಕಾಶ ಮಾಡಿದ್ದಾರೆ. ಇದೇ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ 1300 ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಯಾತ್ರೆ ಕೈಗೊಳ್ಳಲಿದ್ದಾರೆ.

ಅಷ್ಟೇ ಅಲ್ಲ, ಹಜ್ ಸಬ್ಸಿಡಿ ರದ್ದುಗೊಳಿಸಿ, ಆ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕಾಗಿ ಬಳಸಲು ಮುಂದಾಗಿದ್ದಾರೆ. ತ್ರಿವಳಿ ತಲಾಖ್ ರದ್ದುಗೊಳಿಸಿ ಮುಸ್ಲಿಂ ಮಹಿಳೆಯರು ನರಕ ಅನುಭವಿಸುವುದನ್ನು ತಪ್ಪಿಸಲು ಮುಂದಾಗಿದ್ದಾರೆ. ಕೌಶಲ ಅಭಿವೃದ್ಧಿಗಾಗಿ ಮೌಲಾನಾ ಆಜಾದ್  ನ್ಯಾಷನಲ್ ಅಕಾಡೆಮಿ ಸ್ಥಾಪಿಸಿದ್ದಾರೆ. ಗರಿಬ್ ನವಾಜ್ ಕೌಶಲ ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿದ್ದಾರೆ. ಹೇಳಿ ಮೋದಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಯಾಗಿದ್ದಾರೆ ಇಷ್ಟೆಲ್ಲ ಮಾಡುತ್ತಿತ್ತಾ?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search