• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಅನ್ನದಾತರಿಗೆ  ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ

TNN Correspondent Posted On June 5, 2018
0


0
Shares
  • Share On Facebook
  • Tweet It

ದೆಹಲಿ: ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ, ಮಹಾರಾಷ್ಟ್ರ ಸೇರಿ ದೇಶದ ನಾನಾ ರಾಜ್ಯಗಳಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಭರ್ಜರಿ ಕೊಡುಗೆ ನೀಡಿದೆ. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ನೀಡಬೇಕಿದ್ದ ಬಾಕಿ ಹಣವನ್ನು ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಕಂಪನಿಗಳಿಗೆ 1.500 ಕೋಟಿ ಉತ್ಪಾದನೆ ಆಧಾರಿತ ಸಬ್ಸಿಡಿ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ, ಇದೀಗ 7 ಸಾವಿರ ಕೋಟಿ ವಿಶೇಷ ಅನುದಾನ ನೀಡಲು ನಿರ್ಧರಿಸಿದೆ ಎಂಬ ಸಿಹಿ ಸುದ್ದಿ ಹೊರ ಬಿದ್ದಿದೆ.

ಸಕ್ಕರೆ ದರ ಕುಸಿತದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಕ್ಕರೆ ಕಾರ್ಖಾನೆಗಳು ದೇಶಾದ್ಯಂತ ರೈತರಿಗೆ 22 ಸಾವಿರ ಕೋಟಿಗೂ ರೂಪಾಯಿಗೂ ಹೆಚ್ಚು ಬಾಕಿ ಪಾವತಿಸಬೇಕಿದೆ. ಉತ್ತರ ಪ್ರದೇಶ ರಾಜ್ಯದಲ್ಲೊಂದೆ 12 ಸಾವಿರ ಕಬ್ಬಿನ ಹಣದ ಕೋಟಿ ಬಾಕಿ ಇದೆ. ಆದ್ದರಿಂದ ರೈತರ ಬಾಕಿ ಹಣ ಪಾವತಿಸಲು ಕಾರ್ಖಾನೆಗಳಿಗೆ ಕೇಂದ್ರ ಸರ್ಕಾರ ನೆರವಿಗೆ ಬಂದಿದ್ದು, ಸಕ್ಕರೆ ಕಾರ್ಖಾನೆಗಳಿಗೆ ಏಳು ಸಾವಿರ ವಿಶೇಷ ಕೊಡುಗೆ ಘೋಷಿಸುವ ಮೂಲಕ ಭರ್ಜರಿ ಕೊಡುಗೆ ನೀಡಿದೆ.

ಕಬ್ಬು ಬೆಳೆಗಾರರಿಗೆ ಸೂಕ್ತ ನ್ಯಾಯ ದೊರಕಲಿ ಎಂಬ ಉದ್ದೇಶದಿಂದ ಕೇಂದ್ರ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ರೈತರ ನೆರವಿಗೆ ಬಂದಿದೆ. ಕಬ್ಬಿನ ಬೆಳೆಯ ನಾನಾ ರೀತಿಯ ಲಾಭಗಳನ್ನು ಪಡೆಯಲು ಯೋಜನೆ ರೂಪಿಸುತ್ತಿದೆ. ಕಬ್ಬಿನ ಕಾರ್ಖಾನೆಗಳ ಸಮಸ್ಯೆಗೆ ಸ್ಪಂದಿಸಲು ನಿರ್ಧರಿಸಿದ್ದು, ಎಥೆನಾಲ್ ಉತ್ಪಾದನೆ ಹೆಚ್ಚಿಸಲು ಮತ್ತು ತತ್ಸಬಂಧ ಘಟಕಗಳ ವಿಸ್ತರಣೆಗೆ 4,500 ಕೋಟಿ ಸಾಲದ ಮೇಲಿನ ಬಡ್ಡಿ ಶೇ.6ರಷ್ಟು ಸಬ್ಸಿಡಿ ನೀಡುವ ಪ್ರಸ್ತಾಪ ಮಂಡಿಸಿದ್ದು, ಸಬ್ಸಿಡಿ ಘೋಷಣೆಯಾದರೆ, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸಮಸ್ಯೆ ತಕ್ಕ ಮಟ್ಟಿಗೆ ಸುಧಾರಿಸಲಿದ್ದು,ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search