• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಅಟ್ಟಹಾಸ: ಬಿಜೆಪಿ ಕಾರ್ಯರ್ತನ ಮೇಲೆ ಗುಂಡಿನ ದಾಳಿ

TNN Correspondent Posted On June 5, 2018
0


0
Shares
  • Share On Facebook
  • Tweet It

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಅಟ್ಟಹಾಸ ಮಿತಿ ಮೀರಿದ್ದು, ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ನಿರಂತರವಾಗಿ ದಾಳಿ ಮುಂದುವರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ತಿಂಗಳ ಮಧ್ಯದಲ್ಲೇ ಸುಮಾರ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಕೊಲೆ ನಡೆದಿರುವ ಬೆನ್ನಲ್ಲೇ ಇದೀಗ ಬಿಜೆಪಿ ಕಾರ್ಯಕರ್ತನ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯರ್ತರು ಗುಂಡಿನ ದಾಳಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಸಾವು ಬದುಕಿನ ಮಧ್ಯೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮಪಂಚಾಯಿತಿ ಚುನಾವಣೆಗೂ ಮುನ್ನ ಆರಂಭವಾಗಿರುವ ರಾಜಕೀಯ ಗಲಭೆ, ಹಿಂಸೆಯನ್ನು ತಡೆಯುವಲ್ಲಿ ಪಶ್ಚಿಮ ಬಂಗಾಳ ಸರ್ಕಾರ ವಿಫಲವಾಗಿದ್ದು, ಇದೀಗ ಕುಚ್ ಬಿಹಾರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ನಾರಾಯಣ ಸರ್ಕಾರ ಎಂಬುವರರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಾರಾಯಣ ಸರ್ಕಾರ ಅವರನ್ನು ಸಿಲಿಗುಡಿಯ ನರ್ಸಿಂಗ್ ಹೋಮ್ ವೊಂದರಲ್ಲಿ ದಾಖಲಿಸಲಾಗಿದೆ.

ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ವಿರುದ್ಧ ಕೈ ಮಾಡುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದಲ್ಲೇ ಶಾಂತಿ ಸುವ್ಯವಸ್ಥೆ ಹದಗೆಟ್ಟಿದ್ದು, ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಒಂದು ತಿಂಗಳಲ್ಲೇ ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆಗಳಾಗಿವೆ. ಅಲ್ಲದೇ ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ನಾರಾಯಣ ಸರ್ಕಾರ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ನ ಈ ಅಟ್ಟಹಾಸಧ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search