• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾದಲ್ಲಿ ನಡೆಯುವ ಶೃಂಗಸಭೆಯಲ್ಲಿ ಪಾಕಿಸ್ತಾನಕ್ಕೆ ಟಾಂಗ್ ನೀಡಲು ನರೇಂದ್ರ ಮೋದಿ ಪ್ಲಾನ್

TNN Correspondent Posted On June 5, 2018
0


0
Shares
  • Share On Facebook
  • Tweet It

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಸೈನಿಕರನ್ನು ಛೂ ಬಿಟ್ಟು ಉದ್ಧಟತನ ಮಾಡುತ್ತಿರುವ ಪಾಕಿಸ್ತಾನದ ವಿರುದ್ಧ ಪ್ರತಿದಾಳಿ ಮಾಡದೇ ಬಿಡುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿರುವ ಬೆನ್ನಲ್ಲೇ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಛಾಟಿಯೇಟು ನೀಡಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಜೂನ್ 9, 10ರಂದು ಚೀನಾದಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಮಾಡುತ್ತಿರುವ ಉದ್ಧಟತನ ಹಾಗೂ ಉಗ್ರರ ಪೋಷಣೆಯನ್ನು ಪ್ರಸ್ತಾಪಿಸುವ ಮೂಲಕ ಅಂತಾರಾಷ್ಟ್ರೀಯ ಸಭೆಯಲ್ಲಿ ಪಾಕಿಸ್ತಾನದ ಮರ್ಯಾದೆ ಹರಾಜು ಹಾಕಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ಈ ಬಾರಿಯ ಶಾಂಘೈ ಶೃಂಗಸಭೆಯಲ್ಲಿ ಜಾಗತಿಕ ಭಯೋತ್ಪಾದನೆ ನಿಗ್ರಹ, ಪಾಕಿಸ್ತಾನ ಹೇಗೆ ಭಯೋತ್ಪಾದನಾ ಸಂಘಟನೆಗಳಿಗೆ ಹಣ ನೀಡುತ್ತಿದೆ, ಉಗ್ರರನ್ನು ಒಡಲೊಳಗೆ ಇಟ್ಟುಕೊಂಡು ಪೋಷಣೆ ಮಾಡುತ್ತಿದೆ ಹಾಗೂ ಅವರನ್ನು ಭಾರತದ ವಿರುದ್ಧ ಛೂ ಬಿಟ್ಟು ಹೇಗೆ ತನ್ನ ಕಪಟತನ ಹೊರಹಾಕುತ್ತಿದೆ ಎಂಬುದರ ಕುರಿತು ಮೋದಿ ಅವರು ಜಾಗತಿಕ ನಾಯಕರಿಗೆ ಮನವರಿಕೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಆದಾಗ್ಯೂ ಈ ಬಾರಿಯ ಶೃಂಗಸಭೆಯಲ್ಲಿ ಜಾಗತಿಕ ಭಯೋತ್ಪಾದನೆ ನಿಗ್ರಹ, ಆರ್ಥಿಕ ಸಹಭಾಗಿತ್ವ ಸೇರಿ ಹಲವು ವಿಷಯಗಳ ಕುರಿತು ಚರ್ಚೆಯಾಗಲಿವೆ. ಈ ಹಿಂದೆಯೂ ಪ್ರಧಾನಿ  ಮೋದಿ ಅವರು ಪಾಕಿಸ್ತಾನದ ಭಯೋತ್ಪಾದನೆಯ ಕರಾಳ ಮುಖವನ್ನು ಹಲವು ಸಭೆಗಳಲ್ಲಿ ಬಹಿರಂಗಗೊಳಿಸಿದ್ದರು. ಈಗ ಮೋದಿ ಮತ್ತೊಂದು ಅವಕಾಶ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search