• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಘಲ ಸಾರೈ ರೈಲು ನಿಲ್ದಾಣಕ್ಕೆ ದೀನದಯಾಳ ಉಪಾದ್ಯಯ ಹೆಸರು ನಾಮಕರಣ

TNN Correspondent Posted On June 6, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಜನಸಂಘದ ಮೂಲಕ ಹೊಸ ಅಲೆಯನ್ನು ಸೃಷ್ಟಿಸಿ, ಭಾರತೀಯ ಜನತಾ ಪಕ್ಷದಂತ ರಾಷ್ಟ್ರಭಕ್ತರ, ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಪಕ್ಷದ ಹುಟ್ಟಿಗೆ ಕಾರಣಿಕರ್ತರಾದ ದೀನ ದಯಾಳ ಉಪಾದ್ಯಯ ಅವರ ಹೆಸರನ್ನು ಉತ್ತರ ಪ್ರದೇಶದ ಮುಘಲ ಸಾರೈ ನಿಲ್ದಾಣಕ್ಕೆ ಮರುನಾಮಕರಣ ಮಾಡಲಾಗಿದೆ. ಮುಘಲಸಾರೈ ರೈಲು ನಿಲ್ದಾಣಕ್ಕೆ ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಜೂನ್ 4ರಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ಜನಸಂಘದ ಮುಖಂಡರಾಗಿದ್ದ ಪಂಡಿತ ದೀನದಯಾಳ ಉಪಾದ್ಯಯ ಅವರು 1968 ಫೆಬ್ರವರಿ 11 ರಂದು ನಿಗೂಡವಾಗಿ ನಿಧನ ಹೊಂದಿದ್ದರು. ಅವರ ಮೃತ ದೇಹ ಮುಘಲ ಸಾರೈ ರೈಲು ನಿಲ್ದಾಣದಲ್ಲಿ ದೊರೆತಿತ್ತು. 2017ರಲ್ಲಿ ಉತ್ತರ ಪ್ರದೇಶ ಸರ್ಕಾರ ಚಂದೌಲಿ ಜಿಲ್ಲೆಯಲ್ಲಿರುವ ಮುಘಲಸಾರೈ ರೈಲು ನಿಲ್ದಾಣದ ಹೆಸರು ಬದಲಾಯಿಸಿ, ಉಪಾದ್ಯಯ ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಪಡೆದು, ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಮುಘಲಸಾರೈ ಮಾಜಿ ಪ್ರಧಾನಿ ದಿವಗಂತ ಲಾಲ ಬಹುದ್ದೂರ ಶಾಸ್ತ್ರಿ ಅವರ ಜನ್ಮಸ್ಥಳ. ಬ್ರಿಟೀಷರ ಕಾಲದಲ್ಲೇ ಈ ಠಾಣೆ ನಿರ್ಮಿಸಲಾಗಿದೆ. ದೇಶದ ಅತ್ಯಂತ ಜನಸಂದಣಿ ಹೊಂದಿರುವ ಠಾಣೆಗಳಲ್ಲಿ ಇದು ಒಂದು. ದೆಹಲಿ ಮತ್ತು ಹೌವ್ರಾ ಮಧ್ಯೆ ಇರುವ ಪ್ರಮುಖ ಠಾಣೆಯಾಗಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search