• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫಲಿಸಿತು ಯುವ ಬ್ರಿಗೇಡ್ ಶ್ರಮ, ಒಂದೇ ದಿನದಲ್ಲಿ ನೇತ್ರಾವತಿ ನದಿ ಸ್ವಚ್ಛಗೊಳಿಸಿದ ಕಾರ್ಯಕರ್ತರು!

TNN Correspondent Posted On June 7, 2018
0


0
Shares
  • Share On Facebook
  • Tweet It

ಮಂಗಳೂರು: ನೀರು ಜೀವಜಲ ಎನ್ನುತ್ತೇವೆ, ವೇದಿಕೆ ಮೇಲೆ ಕುಳಿತು ಜಲಮೂಲ ಉಳಿಸಬೇಕು, ಮಿತವಾಗಿ ನೀರು ಬಳಸಬೇಕು ಎಂದು ಭಾಷಣ ಬಿಗಿಯುತ್ತೇವೆ, ನೀರಿನ ಸಂರಕ್ಷಣೆ ಕುರಿತು ತಾಸುಗಟ್ಟಲೇ ಹೇಳುತ್ತೇವೆ… ಆದರೆ ವಾಸ್ತವದಲ್ಲಿ ಬಹುತೇಕ ಜನ ನೀರಿನ ರಕ್ಷಣೆ ಮಾಡದಿರುವುದರಿಂದ, ಸರ್ಕಾರವೂ ಕೆರೆ-ಕಟ್ಟೆ ಹೂಳೆತ್ತುವುದನ್ನು ಸಮರ್ಪಕವಾಗಿ ಮಾಡದ ಕಾರಣ ನೀರು ಮಾನವನಿಗೆ ದುಬಾರಿಯಾಗುತ್ತಲೇ ಇದೆ.

ಆದರೂ ನೀರಿನ ಸಂರಕ್ಷಣೆಯನ್ನು ರಾಜ್ಯದಲ್ಲಿ ಪ್ರಾಮಾಣಿಕವಾಗಿ ಮಾಡುತ್ತಿರುವ ಸಂಸ್ಥೆಯೆಂದರೆ ಅದು ಯುವ ಬ್ರಿಗೇಡ್. ಯುವ ಉತ್ಸಾಹಿಗಳ ತಂಡ ಕಟ್ಟಿರುವ ಚಕ್ರವರ್ತಿ ಸೂಲಿಬೆಲೆ ಅವರು ರಾಜ್ಯದ ಹಲವು ಬಾವಿ, ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವ ಮೂಲಕ ಮಾದರಿಯಾಗಿದ್ದಾರೆ.

ಇಂತಹ ತಂಡವೊಂದು ಇತ್ತೀಚೆಗೆ ಧರ್ಮಸ್ಥಳದ ಬಳಿ ಇರುವ ನೇತ್ರಾವತಿ ನದಿಯನ್ನು ಸ್ವಚ್ಛಗೊಳಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಲ್ಲದೆ ನೂರಾರು ಜನ ನೀರಿನ ಸಂರಕ್ಷಣೆ ಹಾಗೂ ನದಿಗಳ ಸ್ವಚ್ಛತೆ ಬಗ್ಗೆ ಯೋಚನೆ ಮಾಡುವಂತೆ ಮಾಡಿದ್ದಾರೆ.

ಹೌದು, ಒಂದು ದಿನ ನದಿಯ ಎರಡು ಭಾಗದಲ್ಲಿ ಸುಮಾರು 500 ಯುವ ಬ್ರಿಗೇಡ್ ಸ್ವಯಂ ಕಾರ್ಯಕರ್ತರು ನೇತ್ರಾವತಿ ನದಿಯನ್ನು ಸ್ವಚ್ಛಗೊಳಿಸಲು ಶ್ರಮಿಸಿದ್ದಾರೆ. ಸುಮಾರು 8 ತಾಸು ಯುವ ಕಾರ್ಯಕರ್ತರು ಮಾಡಿದ ಶ್ರಮದಿಂದ ನದಿಯಲ್ಲಿದ್ದ 30ಕ್ಕೂ ಅಧಿಕ ಟನ್ ತ್ಯಾಜ್ಯವನ್ನು ಹೊರತೆಗೆಯಲಾಗಿದೆ.

ಅಷ್ಟೇ ಅಲ್ಲ, 500 ಕಾರ್ಯಕರ್ತರು ಬಂದು ನೇತ್ರಾವತಿ ನದಿ ನೀರು ಸ್ವಚ್ಛಗೊಳಿಸಿದ್ದು, ಈ ಭಾಗದಲ್ಲಿ ಸಾವಿರಾರು ಜನರ ಮೇಲೆ ಪ್ರಭಾವ ಬೀರಿದೆ. ಸುಮಾರು 5000 ಯುವಕರು ನದಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಪಾಲ್ಗೊಳ್ಳುವ ಆಸಕ್ತಿ ತೋರಿದ್ದಾರೆ ಎಂದು ತಿಳಿದುಬಂದಿದೆ. ಇಂತಹವರ ಸಂತತಿ ಸಾವಿರವಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search