• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಜಿ ಪ್ರಧಾನಿ ರಾಜೀವ ಗಾಂಧಿ ಹತ್ಯೆ ಮಾದರಿಯಲ್ಲೇ ನರೇಂದ್ರ ಮೋದಿ ಹತ್ಯೆಗೆ ಪ್ಲಾನ್

TNN Correspondent Posted On June 8, 2018
0


0
Shares
  • Share On Facebook
  • Tweet It

ಮುಂಬೈ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊರೆಯುತ್ತಿರುವ ಭಾರಿ ಜನಬೆಂಬಲದಿಂದ ಬಲ ಕಳೆದುಕೊಂಡಿರುವ ಮಾವೋವಾದಿಗಳು ಅವರ ಹತ್ಯೆಗೆ ಸಂಚು ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಮಾಜಿ ಪ್ರಧಾನಿ ರಾಜೀವ ಗಾಂಧಿ ಮಾಡಿದ ರೀತಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಪತ್ರವೊಂದು ಮಹಾರಾಷ್ಟ್ರ ಪೊಲೀಸರಿಗೆ ದೊರಕಿದೆ.

ಮಹಾರಾಷ್ಟ್ರದಲ್ಲಿ ನಡೆದ ಭೀಮಾ ಕೋರೆಗಾಂವ್ ಗಲಭೆ ಕಾರಣರಾದ ಆರೋಪಿಗಳ ವಿಚಾರಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಸಿರುವ ಸಂಚು ಹೊರ ಬಿದ್ದಿದೆ. ಕೋರೇಗಾಂವ್ ಗಲಭೆ ಕುರಿತ ಬಂಧಿತ ಆರೋಪಿಗಳ ಬಳಿ ವಿಚಾರಣೆ ವೇಳೆ ಪತ್ರವೊಂದು ದೊರಕ್ಕಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ನಾನಾ ಮಾದರಿಯ ಯೋಜನೆಗಳ ಕುರಿತು ವಿಸ್ತೃತ ಮಾಹಿತಿಯನ್ನು ನೀಡಲಾಗಿದೆ.

‘ಹಿಂದೂ ಕಟ್ಟರವಾದಿಗಳನ್ನು ಮಟ್ಟಹಾಕುವುದು ನಮ್ಮ ಪಕ್ಷದ ಪ್ರಮುಖ ಅಜೆಂಡಾವಾಗಿದೆ. ಪಶ್ಚಿಮ ಬಂಗಾಲ ಮತ್ತು ಬಿಹಾರದಲ್ಲಿ ಮೋದಿ ಅವರನ್ನು ಸೋಲಿಸುವಲ್ಲಿ ನಾವು ಸಫಲರಾಗಿದ್ದೇವು. ಆದರೂ ನಂತರ ಅವರು 15 ರಾಜ್ಯಗಳಲ್ಲಿ ಅಧಿಕಾರಕ್ಕೇರಿದ್ದರು. ಈ ಬೆಳವಣಿಗೆ ನಮ್ಮ ಪಕ್ಷಕ್ಕೆ ಒಳ್ಳೆಯದಲ್ಲ.

ನಾವು ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಪ್ರಯತ್ನಿಸಬಹುದು. ಇದರಲ್ಲಿ ನಾವು ವಿಫಲರಾಗಬಹುದು. ಆದರೂ ಪಕ್ಷ ಈ ನಿಲುವನ್ನು ಒಪ್ಪಿಕೊಳ್ಳಬೇಕು. ಇಲ್ಲವೇ ನರೇಂದ್ರ ಮೋದಿ ನಡೆಸುವ ರೋಡ್ ಶೋಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯ ನಿರ್ವಹಿಸಬಹುದು’ ಎಂಬುದು ಸೇರಿ ದೇಶದ ವಿವಿಧ ರಾಜ್ಯದಲ್ಲಿ ಬಿಜೆಪಿ ಹೇಗೆ ಅಧಿಕಾರಕ್ಕೇರಿದೆ ಎಂಬುದರ ಕುರಿತು ಪತ್ರದಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಈ ಕುರಿತು ನಾನಾ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search