• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಕೊಲೆಯಾಗುತ್ತೇ, ಭಾರತದಲ್ಲಿ ಇಸ್ಲಾಂ ಧ್ವಜ ಹಾರಿವುದು ನಿಶ್ಚಿತ: ಉಗ್ರರ ಬೆದರಿಕೆ

TNN Correspondent Posted On June 8, 2018
0


0
Shares
  • Share On Facebook
  • Tweet It

ರಾವಲಕೋಟ್ (ಪೋಕ್): ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಹಲವು ಮಹತ್ತರ ಬದಲಾವಣೆಗಳನ್ನು ತಂದಿದ್ದಾರೆ.  ವಿಶೇಷವಾಗಿ ದೇಶದ ರಕ್ಷಣೆ ಭಯೋತ್ಪಾದನೆ ತಡೆಗಟ್ಟುವಲ್ಲಿ ಅವರು ಕೈಗೊಂಡ ದಿಟ್ಟ ಕ್ರಮಗಳು ಉಗ್ರ ಹುಟ್ಟಡಗಿಸಿವೆ. ಇದೀಗ ಅದಕ್ಕಾಗಿಯೇ ಭಯೋತ್ಪಾದಕರು ಬಹಿರಂಗ ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಲಾಗುತ್ತದೆ ಎಂದು ಬೆದರಿಕೆ ಹಾಕುತ್ತಿದ್ದಾರೆ.

2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾ ಹಫೀಜ್ ಪಾಕಿಸ್ತಾನದ ರಾವಲ್ ಕೋಟ್ ನಲ್ಲಿ ನಡೆದ ಪ್ರಚಾರಸಭೆಯಲ್ಲಿ ಬಹಿರಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಲಾಗುತ್ತದೆ. ಭಾರತ ಛಿದ್ರ ಛಿದ್ರವಾಗುತ್ತದೆ ಎಂದು ಹೇಳಿದ್ದಾರೆ.

ಇಸ್ಲಾಂ ಧ್ವಜ ಭಾರತ ಮತ್ತು ಅಮೆರಿಕಾದಲ್ಲಿ ಹಾರಲಿದೆ. ನರೇಂದ್ರ ಮೋದಿ ಕೊಲೆಯಾಗುತ್ತಾರೆ. ಭಾರತ ಮತ್ತು ಇಸ್ರೇಲ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಈ ದೇಶಗಳ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ಭಯೋತ್ಪಾದಕರನ್ನು ನಾವು ಸಿದ್ಧಪಡಿಸುತ್ತೇವೆ ಎಂದು ಉಗ್ರ ಸಂಘಟನೆ ಜಮಾತ್ ಉದ್ ದಾವಾದ ಹಿರಿಯ ಮುಖಂಡ ಮೌಲಾನಾ ಬಷೀರ್ ಅಹ್ಮದ್ ಕಾಖಿ ಬಹಿರಂಗ ವೇದಿಕೆಯಲ್ಲಿ ಬೆದರಿಕೆ ಒಡ್ಡಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪೂಂಚ್ ಜಿಲ್ಲೆಯ ರಾವಲಕೋಟ್ ಪ್ರದೇಶದಲ್ಲಿ ನಡೆದ ರಮ್ಜಾನ್ ತಿಂಗಳ ವಿಶೇಷ ಪ್ರಾರ್ಥನೆ ವೇಳೆ ಈ ಭಾಷಣ ಮಾಡಿದ್ದಾನೆ. ರಮ್ಜಾನ್ ಜಿಹಾದ್ ಆರಂಭಿಸಲು ಉತ್ತಮ ತಿಂಗಳು. ರಮ್ಜಾನ್ ವೇಳೆ ಧರ್ಮಕ್ಕಾಗಿ ಹೋರಾಡಿ ಹುತಾತ್ಮರಾದರೆ ಸ್ವರ್ಗಕ್ಕೆ ಸೇರಲಾಗುತ್ತದೆ ಎಂದು ಬೊಗಳೆ ಬಿಟ್ಟಿದ್ದಾನೆ.

ನಾವು ಕಾಶ್ಮೀರದಲ್ಲಿ ಜಿಹಾದ್ ಬಲಗೊಳಿಸಬೇಕಿದೆ. ಕಾಶ್ಮೀರದಲ್ಲಿ ಇಸ್ಲಾಂ ಧ್ವಜ ಹಾರಿಸಬೇಕಿದೆ. ಅದಕ್ಕಾಗಿ ಪಾಕ್ ಆಕ್ರಮಿತ ಕಾಶ್ಮೀರದ ಜನರು ತಮ್ಮ ಮಕ್ಕಳನ್ನು ಜಿಹಾದ್ ಕಾರ್ಯಕ್ಕೆ ಕಳುಹಿಸಿಕೊಡಬೇಕು. ರಮ್ಜಾನ್ ತಿಂಗಳಲ್ಲಿ ಜಿಹಾದ್ ಬಲಗೊಳಿಸಲು ಉಗ್ರ ಸಂಘಟನೆ ಜಮಾತ್ ಉದ್ ದಾವಾಕ್ಕೆ ಆಹಾರ, ಹಣ ದಾನ ನೀಡಬೇಕು  ಎಂದು ಮನವಿ ಮಾಡಿದ್ದಾನೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search