• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈಷ್ಣೋದೇವಿ ಯಾತ್ರಿಕರ ಜೀವ ಉಳಿಸಿ, ತನ್ನ ಜೀವ ಬಿಟ್ಟ ಆ ಯೋಧನಿಗೆ ಪ್ರಧಾನಮಂತ್ರಿ ಪದಕದ ಗೌರವ!

TNN Correspondent Posted On June 8, 2018
0


0
Shares
  • Share On Facebook
  • Tweet It

ನವದೆಹಲಿ: ನಮ್ಮ ಇಂದಿನ ನೆಮ್ಮದಿಯ ಜೀವನಕ್ಕಾಗಿ ತಮ್ಮ ಸುಂದರ ನಾಳೆಗಳನ್ನು ಬಲಿ ಕೊಡುವವರು ಸೈನಿಕರು. ಅಂತಹ ಸೈನಿಕರ ಶೌರ್ಯ ಹಾಗೂ ತ್ಯಾಗವನ್ನು ಪ್ರತಿ ಸರ್ಕಾರವೂ ಸ್ಮರಿಸಿದರೆ, ಪ್ರೋತ್ಸಾಹಿಸಿದರೆ, ನೆನಪಿಸಿದರೆ ಮಾತ್ರ ಸೈನಿಕರಿಗೆ ಗೌರವ ಕೊಟ್ಟಂತೆ.

ಹೀಗೆ ಸೈನಿಕರ ತ್ಯಾಗ ಸ್ಮರಿಸುವ ಹಾಗೂ ಅವರ ಶೌರ್ಯ ಪ್ರಶಂಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಕಳೆದ ವರ್ಷ ವೈಷ್ಣೋದೇವಿ ಯಾತ್ರೆಗೆ ತೆರಳಿ ಭೂಕುಸಿತಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿದ್ದ ಯಾತ್ರಿಕರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಬಿಟ್ಟ ಸಿಆರ್ ಪಿಎಫ್ ಯೋಧನಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಪೊಲೀಸ್ ಮೆಡಲ್ ನೀಡಿದೆ.

ಹೌದು, 2016ರ ಆಗಸ್ಟ್ 14ರಂದು ಭೂಕುಸಿತದಿಂದ ಮಣ್ಣಿನೊಳಗೆ ಸಿಲುಕಿದವರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಕಳೆದುಕೊಂಡ ಸಿಆರ್ ಪಿಎಫ್ ಮುಖ್ಯ ಪೇದೆ ಹರ್ವಿಂದರ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಮೆಡಲ್ ನೀಡಲಾಗಿದೆ ಎಂದು ಅರೆ ಸೈನಿಕ ಪಡೆಯ ವಕ್ತಾರರೊಬ್ಬರು ಮಾಹಿತಿ ಮಾಹಿತಿ ನೀಡಿದ್ದಾರೆ.

ಯಾತ್ರಿಕರ ಜೀವ ಉಳಿಸಲು ಹರ್ವಿಂದರ್ ಸಿಂಗ್ ತೋರಿದ ಧೈರ್ಯ, ಸಾಹಸ ಹಾಗೂ ಆತ ಜನರಿಗಾಗಿ ಮಾಡಿದ ಪರಮೋಚ್ಚ ತ್ಯಾಗ ಸ್ಮರಿಸಿ ಈ ಮೆಡಲ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ವೈಷ್ಣೋದೇವಿ ಯಾತ್ರೆ ಕೈಗೊಂಡಾಗ ಭೂಕುಸಿತ ಉಂಟಾಗಿದ್ದು, ಕೆಲವು ಮಹಿಳೆಯರು ಹಾಗೂ ಮಕ್ಕಳು ಮಣ್ಣಿನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ್ದ ಹರ್ವಿಂದರ್ ಸಿಂಗ್ ಅವರನ್ನು ಕಾಪಾಡಿದ್ದರು. ಆದರೆ ದುರದೃಷ್ಟವಶಾತ್ ಮಣ್ಣು ಹಾಗೂ ಕಲ್ಲು ಮೈಮೇಲೆ ಬಿದ್ದ ಕಾರಣ ಹರ್ವಿಂದರ್ ಸಿಂಗ್ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search