• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈಷ್ಣೋದೇವಿ ಯಾತ್ರಿಕರ ಜೀವ ಉಳಿಸಿ, ತನ್ನ ಜೀವ ಬಿಟ್ಟ ಆ ಯೋಧನಿಗೆ ಪ್ರಧಾನಮಂತ್ರಿ ಪದಕದ ಗೌರವ!

TNN Correspondent Posted On June 8, 2018
0


0
Shares
  • Share On Facebook
  • Tweet It

ನವದೆಹಲಿ: ನಮ್ಮ ಇಂದಿನ ನೆಮ್ಮದಿಯ ಜೀವನಕ್ಕಾಗಿ ತಮ್ಮ ಸುಂದರ ನಾಳೆಗಳನ್ನು ಬಲಿ ಕೊಡುವವರು ಸೈನಿಕರು. ಅಂತಹ ಸೈನಿಕರ ಶೌರ್ಯ ಹಾಗೂ ತ್ಯಾಗವನ್ನು ಪ್ರತಿ ಸರ್ಕಾರವೂ ಸ್ಮರಿಸಿದರೆ, ಪ್ರೋತ್ಸಾಹಿಸಿದರೆ, ನೆನಪಿಸಿದರೆ ಮಾತ್ರ ಸೈನಿಕರಿಗೆ ಗೌರವ ಕೊಟ್ಟಂತೆ.

ಹೀಗೆ ಸೈನಿಕರ ತ್ಯಾಗ ಸ್ಮರಿಸುವ ಹಾಗೂ ಅವರ ಶೌರ್ಯ ಪ್ರಶಂಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಕಳೆದ ವರ್ಷ ವೈಷ್ಣೋದೇವಿ ಯಾತ್ರೆಗೆ ತೆರಳಿ ಭೂಕುಸಿತಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿದ್ದ ಯಾತ್ರಿಕರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಬಿಟ್ಟ ಸಿಆರ್ ಪಿಎಫ್ ಯೋಧನಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಪೊಲೀಸ್ ಮೆಡಲ್ ನೀಡಿದೆ.

ಹೌದು, 2016ರ ಆಗಸ್ಟ್ 14ರಂದು ಭೂಕುಸಿತದಿಂದ ಮಣ್ಣಿನೊಳಗೆ ಸಿಲುಕಿದವರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಕಳೆದುಕೊಂಡ ಸಿಆರ್ ಪಿಎಫ್ ಮುಖ್ಯ ಪೇದೆ ಹರ್ವಿಂದರ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಮೆಡಲ್ ನೀಡಲಾಗಿದೆ ಎಂದು ಅರೆ ಸೈನಿಕ ಪಡೆಯ ವಕ್ತಾರರೊಬ್ಬರು ಮಾಹಿತಿ ಮಾಹಿತಿ ನೀಡಿದ್ದಾರೆ.

ಯಾತ್ರಿಕರ ಜೀವ ಉಳಿಸಲು ಹರ್ವಿಂದರ್ ಸಿಂಗ್ ತೋರಿದ ಧೈರ್ಯ, ಸಾಹಸ ಹಾಗೂ ಆತ ಜನರಿಗಾಗಿ ಮಾಡಿದ ಪರಮೋಚ್ಚ ತ್ಯಾಗ ಸ್ಮರಿಸಿ ಈ ಮೆಡಲ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ವೈಷ್ಣೋದೇವಿ ಯಾತ್ರೆ ಕೈಗೊಂಡಾಗ ಭೂಕುಸಿತ ಉಂಟಾಗಿದ್ದು, ಕೆಲವು ಮಹಿಳೆಯರು ಹಾಗೂ ಮಕ್ಕಳು ಮಣ್ಣಿನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ್ದ ಹರ್ವಿಂದರ್ ಸಿಂಗ್ ಅವರನ್ನು ಕಾಪಾಡಿದ್ದರು. ಆದರೆ ದುರದೃಷ್ಟವಶಾತ್ ಮಣ್ಣು ಹಾಗೂ ಕಲ್ಲು ಮೈಮೇಲೆ ಬಿದ್ದ ಕಾರಣ ಹರ್ವಿಂದರ್ ಸಿಂಗ್ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search