• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೈಷ್ಣೋದೇವಿ ಯಾತ್ರಿಕರ ಜೀವ ಉಳಿಸಿ, ತನ್ನ ಜೀವ ಬಿಟ್ಟ ಆ ಯೋಧನಿಗೆ ಪ್ರಧಾನಮಂತ್ರಿ ಪದಕದ ಗೌರವ!

TNN Correspondent Posted On June 8, 2018
0


0
Shares
  • Share On Facebook
  • Tweet It

ನವದೆಹಲಿ: ನಮ್ಮ ಇಂದಿನ ನೆಮ್ಮದಿಯ ಜೀವನಕ್ಕಾಗಿ ತಮ್ಮ ಸುಂದರ ನಾಳೆಗಳನ್ನು ಬಲಿ ಕೊಡುವವರು ಸೈನಿಕರು. ಅಂತಹ ಸೈನಿಕರ ಶೌರ್ಯ ಹಾಗೂ ತ್ಯಾಗವನ್ನು ಪ್ರತಿ ಸರ್ಕಾರವೂ ಸ್ಮರಿಸಿದರೆ, ಪ್ರೋತ್ಸಾಹಿಸಿದರೆ, ನೆನಪಿಸಿದರೆ ಮಾತ್ರ ಸೈನಿಕರಿಗೆ ಗೌರವ ಕೊಟ್ಟಂತೆ.

ಹೀಗೆ ಸೈನಿಕರ ತ್ಯಾಗ ಸ್ಮರಿಸುವ ಹಾಗೂ ಅವರ ಶೌರ್ಯ ಪ್ರಶಂಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಕಳೆದ ವರ್ಷ ವೈಷ್ಣೋದೇವಿ ಯಾತ್ರೆಗೆ ತೆರಳಿ ಭೂಕುಸಿತಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿದ್ದ ಯಾತ್ರಿಕರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಬಿಟ್ಟ ಸಿಆರ್ ಪಿಎಫ್ ಯೋಧನಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಪೊಲೀಸ್ ಮೆಡಲ್ ನೀಡಿದೆ.

ಹೌದು, 2016ರ ಆಗಸ್ಟ್ 14ರಂದು ಭೂಕುಸಿತದಿಂದ ಮಣ್ಣಿನೊಳಗೆ ಸಿಲುಕಿದವರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಕಳೆದುಕೊಂಡ ಸಿಆರ್ ಪಿಎಫ್ ಮುಖ್ಯ ಪೇದೆ ಹರ್ವಿಂದರ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಮೆಡಲ್ ನೀಡಲಾಗಿದೆ ಎಂದು ಅರೆ ಸೈನಿಕ ಪಡೆಯ ವಕ್ತಾರರೊಬ್ಬರು ಮಾಹಿತಿ ಮಾಹಿತಿ ನೀಡಿದ್ದಾರೆ.

ಯಾತ್ರಿಕರ ಜೀವ ಉಳಿಸಲು ಹರ್ವಿಂದರ್ ಸಿಂಗ್ ತೋರಿದ ಧೈರ್ಯ, ಸಾಹಸ ಹಾಗೂ ಆತ ಜನರಿಗಾಗಿ ಮಾಡಿದ ಪರಮೋಚ್ಚ ತ್ಯಾಗ ಸ್ಮರಿಸಿ ಈ ಮೆಡಲ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ವೈಷ್ಣೋದೇವಿ ಯಾತ್ರೆ ಕೈಗೊಂಡಾಗ ಭೂಕುಸಿತ ಉಂಟಾಗಿದ್ದು, ಕೆಲವು ಮಹಿಳೆಯರು ಹಾಗೂ ಮಕ್ಕಳು ಮಣ್ಣಿನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ್ದ ಹರ್ವಿಂದರ್ ಸಿಂಗ್ ಅವರನ್ನು ಕಾಪಾಡಿದ್ದರು. ಆದರೆ ದುರದೃಷ್ಟವಶಾತ್ ಮಣ್ಣು ಹಾಗೂ ಕಲ್ಲು ಮೈಮೇಲೆ ಬಿದ್ದ ಕಾರಣ ಹರ್ವಿಂದರ್ ಸಿಂಗ್ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search