• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವೈಷ್ಣೋದೇವಿ ಯಾತ್ರಿಕರ ಜೀವ ಉಳಿಸಿ, ತನ್ನ ಜೀವ ಬಿಟ್ಟ ಆ ಯೋಧನಿಗೆ ಪ್ರಧಾನಮಂತ್ರಿ ಪದಕದ ಗೌರವ!

TNN Correspondent Posted On June 8, 2018


  • Share On Facebook
  • Tweet It

ನವದೆಹಲಿ: ನಮ್ಮ ಇಂದಿನ ನೆಮ್ಮದಿಯ ಜೀವನಕ್ಕಾಗಿ ತಮ್ಮ ಸುಂದರ ನಾಳೆಗಳನ್ನು ಬಲಿ ಕೊಡುವವರು ಸೈನಿಕರು. ಅಂತಹ ಸೈನಿಕರ ಶೌರ್ಯ ಹಾಗೂ ತ್ಯಾಗವನ್ನು ಪ್ರತಿ ಸರ್ಕಾರವೂ ಸ್ಮರಿಸಿದರೆ, ಪ್ರೋತ್ಸಾಹಿಸಿದರೆ, ನೆನಪಿಸಿದರೆ ಮಾತ್ರ ಸೈನಿಕರಿಗೆ ಗೌರವ ಕೊಟ್ಟಂತೆ.

ಹೀಗೆ ಸೈನಿಕರ ತ್ಯಾಗ ಸ್ಮರಿಸುವ ಹಾಗೂ ಅವರ ಶೌರ್ಯ ಪ್ರಶಂಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಕಳೆದ ವರ್ಷ ವೈಷ್ಣೋದೇವಿ ಯಾತ್ರೆಗೆ ತೆರಳಿ ಭೂಕುಸಿತಕ್ಕೆ ಸಿಲುಕಿ ಪ್ರಾಣಾಪಾಯದಲ್ಲಿದ್ದ ಯಾತ್ರಿಕರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಬಿಟ್ಟ ಸಿಆರ್ ಪಿಎಫ್ ಯೋಧನಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಪೊಲೀಸ್ ಮೆಡಲ್ ನೀಡಿದೆ.

ಹೌದು, 2016ರ ಆಗಸ್ಟ್ 14ರಂದು ಭೂಕುಸಿತದಿಂದ ಮಣ್ಣಿನೊಳಗೆ ಸಿಲುಕಿದವರನ್ನು ರಕ್ಷಿಸಿ, ತನ್ನ ಪ್ರಾಣವನ್ನೇ ಕಳೆದುಕೊಂಡ ಸಿಆರ್ ಪಿಎಫ್ ಮುಖ್ಯ ಪೇದೆ ಹರ್ವಿಂದರ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಮೆಡಲ್ ನೀಡಲಾಗಿದೆ ಎಂದು ಅರೆ ಸೈನಿಕ ಪಡೆಯ ವಕ್ತಾರರೊಬ್ಬರು ಮಾಹಿತಿ ಮಾಹಿತಿ ನೀಡಿದ್ದಾರೆ.

ಯಾತ್ರಿಕರ ಜೀವ ಉಳಿಸಲು ಹರ್ವಿಂದರ್ ಸಿಂಗ್ ತೋರಿದ ಧೈರ್ಯ, ಸಾಹಸ ಹಾಗೂ ಆತ ಜನರಿಗಾಗಿ ಮಾಡಿದ ಪರಮೋಚ್ಚ ತ್ಯಾಗ ಸ್ಮರಿಸಿ ಈ ಮೆಡಲ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ವೈಷ್ಣೋದೇವಿ ಯಾತ್ರೆ ಕೈಗೊಂಡಾಗ ಭೂಕುಸಿತ ಉಂಟಾಗಿದ್ದು, ಕೆಲವು ಮಹಿಳೆಯರು ಹಾಗೂ ಮಕ್ಕಳು ಮಣ್ಣಿನಲ್ಲಿ ಸಿಲುಕಿದ್ದರು. ಇದನ್ನು ಗಮನಿಸಿದ್ದ ಹರ್ವಿಂದರ್ ಸಿಂಗ್ ಅವರನ್ನು ಕಾಪಾಡಿದ್ದರು. ಆದರೆ ದುರದೃಷ್ಟವಶಾತ್ ಮಣ್ಣು ಹಾಗೂ ಕಲ್ಲು ಮೈಮೇಲೆ ಬಿದ್ದ ಕಾರಣ ಹರ್ವಿಂದರ್ ಸಿಂಗ್ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search